H1N1 ಪರೀಕ್ಷೆಗೆ ಖಾಸಗಿ ಆಸ್ಪತ್ರೆಯಲ್ಲಿ 2,500ಕ್ಕಿಂತ ಹೆಚ್ಚು ದರ ವಿಧಿಸುವಂತಿಲ್ಲ
ಬೆಂಗಳೂರು, ಅಕ್ಟೋಬರ್ 12: ಕರ್ನಾಟಕದಲ್ಲಿ H1N1 ಪ್ರಕರಣಗಳಲ್ಲಿ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಖಾಸಗಿ ಆಸ್ಪತ್ರೆಗಳಿಗೆ ಸೂಚನೆಯೊಂದನ್ನು ನೀಡಿದೆ. ಅದರ ಪ್ರಕಾರ, ಯಾವುದೇ ಖಾಸಗಿ ಆಸ್ಪತ್ರೆಯಲ್ಲಿ H1N1 ಪರೀಕ್ಷೆಗೆ 2,500 ರುಪಾಯಿಗಿಂತ ಹೆಚ್ಚು ದರ ವಿಧಿಸುವಂತಿಲ್ಲ ಎಂದು ತಿಳಿಸಿದೆ.
ಸರಕಾರಿ ಆಸ್ಪತ್ರೆಗಳಲ್ಲಿ H1N1 ಪರೀಕ್ಷೆ ಸಂಪೂರ್ಣ ಉಚಿತವಾಗಿದೆ. ಈ ವರ್ಷ 441ರಷ್ಟು H1N1 ಪ್ರಕರಣಗಳು ರಾಜ್ಯದಲ್ಲಿ ಕಂಡುಬಂದಿವೆ. ಆ ಪೈಕಿ 99 ಪ್ರಕರಣ ಬೆಂಗಳೂರಿನಲ್ಲೇ ವರದಿಯಾಗಿವೆ. ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ 4 ಸಾವಿರಕ್ಕಿಂತ ಹೆಚ್ಚಿನ ಮೊತ್ತವನ್ನು H1N1 ಪರೀಕ್ಷೆಗಾಗಿ ವಿಧಿಸಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈ ಘೋಷಣೆ ಮಾಡಿದೆ.
ಸಾರ್ವಜನಿಕ ಹಾಗೂ ಖಾಸಗಿ ವೈದ್ಯಕೀಯ ಸಿಬ್ಬಂದಿ ಮೊದಲಿಗೆ ಈ ವೈರಲ್ ಸೋಂಕಿನ ವಿರುದ್ಧದ ಲಸಿಕೆ ಹಾಕಿಸಿಕೊಳ್ಳುವಂತೆ ಆರೋಗ್ಯ ಇಲಾಖೆ ಸಲಹೆ ಮಾಡಿದೆ. ಕೆಲವು ಪ್ರಕರಣದಲ್ಲಿ ಆಯಾ ಕಾಲಕ್ಕೆ ಕಾಣಿಸಿಕೊಳ್ಳುವ ವೈರಲ್ ಸೋಂಕುಗಳು ಕಂಡುಬಂದಿದ್ದರೆ, ವೈರಲ್ ಜ್ವರದ ಪ್ರಕರಣಗಳು ಸಹ ವರದಿಯಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

ಬಿಬಿಎಂಪಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಟಾಮಿ ಫ್ಲೂ ಮಾತ್ರೆಗಳ ಅಗತ್ಯ ಪ್ರಮಾಣದ ದಾಸ್ತಾನು ಇರಿಸಿಕೊಳ್ಳಬೇಕು. H1N1ಗೆ ಸಂಬಂಧಿಸಿದಂತೆ ತೆಗೆದುಕೊಳ್ಳಬೇಕಾದ ಮುಂಜಾಗ್ರತೆ ಬಗ್ಗೆ ತಿಳಿಸುವ ಕರಪತ್ರ ಹಂಚಬೇಕು. ಯಾವುದೇ ರೋಗಿಗೆ ಕಾಯಿಲೆಯ ಲಕ್ಷಣಗಳಿದ್ದಲ್ಲಿ, ಅಗತ್ಯ ಬಂದರೆ ಅವರ ಮನೆಗೇ ಹೋಗಿ ಪರೀಕ್ಷೆ ಮಾಡಬೇಕು ಎಂದು ತಿಳಿಸಲಾಗಿದೆ.
H1N1ನಿಂದಾಗಿ ಕಳೆದ ಆಗಸ್ಟ್ ನಿಂದ ಈಚೆಗೆ ರಾಜೀವ್ ಗಾಂಧಿ ಹೃದ್ರೋಗ ಕೇಂದ್ರದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಆದರೆ ಆರೋಗ್ಯ ಇಲಾಖೆಯಿಂದ H1N1ಗೆ ಯಾವುದೇ ಸಾವು ಸಂಭವಿಸಿದ ಬಗ್ಗೆ ಘೋಷಣೆ ಆಗಿಲ್ಲ. ಈ ಪ್ರಕರಣಗಳಲ್ಲಿ ಸಾವಿಗೆ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು












Click it and Unblock the Notifications