ರಾಮಚಂದ್ರಾಪುರ ಮಠ: ಶ್ಯಾಂ ಭಟ್ ವಿರುದ್ಧ ಅಫಿಡವಿಟ್,ಪ್ರಕರಣ ಇತ್ಯರ್ಥ
ರಾಜ್ಯ ಉಚ್ಚ ನ್ಯಾಯಾಲಯ, ಶುಕ್ರವಾರ (ಜುಲೈ 21) ಗಿರಿನಗರದಲ್ಲಿರುವ ರಾಮಚಂದ್ರಾಪುರ ಮಠದ ಜಾಗಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ಪ್ರಕರಣವನ್ನು ವಿಲೇವಾರಿ ಮಾಡಿ ಅದೇಶಿಸಿದೆ.
ಬೆಂಗಳೂರು, ಜುಲೈ 21: ರಾಜ್ಯ ಉಚ್ಚ ನ್ಯಾಯಾಲಯ ಗಿರಿನಗರದಲ್ಲಿರುವ ರಾಮಚಂದ್ರಾಪುರ ಮಠದ ಜಾಗಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ಪ್ರಕರಣವನ್ನು ವಿಲೇವಾರಿ ಮಾಡಿ ಅದೇಶಿಸಿದೆ.
ಹಿಂದಿನ ಬಿಡಿಎ ಆಯುಕ್ತರಾಗಿದ್ದ ಶ್ಯಾಂ ಭಟ್ ಮೌಖಿಕ ಆದೇಶದಂತೆ ಬಿಬಿಎಂಪಿಗೆ ಪತ್ರ ಬರೆದು, ನಕ್ಷೆ ಹಿಂಪಡೆಯಲು ಸೂಚಿಸಿದ್ದಾಗಿ ನ್ಯಾಯಾಲಯಕ್ಕೆ ಹೇಳಿಕೆ ನೀಡಿದ್ದ ಬಿಡಿಎ ಮಾಜಿ ಇಂಜಿನಿಯರ್ ರಾಜಗೋಪಾಲ್, ಶುಕ್ರವಾರ (ಜುಲೈ 20) ನ್ಯಾಯಮೂರ್ತಿ ವಿನಿತ್ ಕೊಠಾರಿ ಅವರ ನ್ಯಾಯಪೀಠದ ಮುಂದೆ ಹಾಜರಾಗಿ ಶ್ಯಾಂ ಭಟ್ ವಿರುದ್ಧ ಅಫಿಡವಿಟ್ ಸಲ್ಲಿಸಿದರು.
ಈಗಾಗಲೇ ಕಟ್ಟಡದ ನಕ್ಷೆಯನ್ನು ಹಿಂಪಡೆದಿರುವ ತನ್ನ ಆದೇಶವನ್ನು ಬಿಬಿಎಂಪಿ ಹಿಂದಕ್ಕೆ ಪಡೆದುಕೊಂಡಿರುವುದರಿಂದ, ಪ್ರಸ್ತುತ ಅರ್ಜಿಯ ವಿಚಾರಣೆಯನ್ನು ಮುಂದುವರಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ, ಪ್ರಕರಣವನ್ನು ವಿಲೇವಾರಿ ಮಾಡಿ ಆದೇಶಿಸಿತು.

ರಾಮಚಂದ್ರಾಪುರ ಮಠದ ಗಿರಿನಗರದ ಜಾಗದ ಕುರಿತು ಹೊಸದಾಗಿ ತನಿಖೆ ಮಾಡುತ್ತೇವೆ ಎಂದು ಬಿಬಿಎಂಪಿ ಪರ ವಕೀಲರು ನ್ಯಾಯಾಲಯವನ್ನು ಕೇಳಿದ್ದಕ್ಕೆ, 1978ರಲ್ಲಿ ಕ್ರಯಪತ್ರದ ಮೂಲಕ ನೋಂದಾಯಿತವಾದ ಹಾಗೂ ಕಂದಾಯ ಕಟ್ಟಿ, ಖಾತೆಯಾಗಿ, ಅನುಭೋಗದಲ್ಲಿರುವ ಜಾಗದ ಕುರಿತು ಯಾವ ನೆಲೆಯಲ್ಲಿ ತನಿಖೆ ಮಾಡುತ್ತೀರಿ ಎಂದು ನ್ಯಾಯಾಲಯ ಬಿಬಿಎಂಪಿ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡಿತು.
ಹಿನ್ನೆಲೆ: ಪ್ರಸ್ತುತ ಜಾಗವು 1978ನೇ ಇಸವಿಯಲ್ಲಿ ರಾಮಚಂದ್ರಾಪುರ ಮಠಕ್ಕೆ ಕ್ರಯಪತ್ರದ ಮೂಲಕ ನೋಂದಾಯಿತವಾಗಿದ್ದು, ಮಠದ ಹೆಸರಿನಲ್ಲಿ ಖಾತಾ ಆಗಿ, ಕಂದಾಯವನ್ನೂ ಕಟ್ಟಿಕೊಂಡು ಬರಲಾಗುತ್ತಿದೆ.
ಜಾಗವು ಮಠದ ಸ್ವಾಧೀನದಲ್ಲೇ ಇದ್ದು, ಎರಡು ಮಹಡಿಯ ಕಟ್ಟಡವು ಇತ್ತು. ಆ ಜಾಗದಲ್ಲಿ ನೂತನ ಧರ್ಮಶಾಲಾ ಕಟ್ಟಡವನ್ನು ನಿರ್ಮಿಸಲು ಬಿಬಿಎಂಪಿಯಿಂದ ಅಧಿಕೃತ ಕಟ್ಟಡ ನಕಾಶೆಗೆ ಪರವಾನಗಿಯನ್ನು ಪಡೆದು, ಕಾಮಗಾರಿಯನ್ನು ಆರಂಭಿಸಲು ಮುಂದಾಗಿತ್ತು.
ಆದರೆ 2015 ರಲ್ಲಿ ಬಿಡಿಎಯಿಂದ ಬಂದ ಪತ್ರದ ಆಧಾರದ ಮೇಲೆ, ಪರವಾನಗಿ ಅನುಮತಿಯನ್ನು ಹಿಂಪಡೆದು ಬಿಬಿಎಂಪಿ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ, ಮಠ ಉಚ್ಚನ್ಯಾಯಾಲಯದಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿತ್ತು.
ವಿಚಾರಣಾ ಸಂದರ್ಭದಲ್ಲಿ ಬಿಬಿಎಂಪಿಯ ಕ್ರಮದ ಕುರಿತು ಕಟುವಾಗಿ ಟೀಕಿಸಿದ್ದ ಉಚ್ಚ ನ್ಯಾಯಾಲಯ, ಸಂಬಂಧಿತ ಬಿಬಿಎಂಪಿ ಹಾಗೂ ಬಿಡಿಎ ಅಧಿಕಾರಿಗಳಿಗೆ ತಲಾ 50,000 ರೂ ದಂಡ ಸ್ವರೂಪವಾಗಿ ಉಚ್ಚನ್ಯಾಯಾಲಯದಲ್ಲಿ ಠೇವಣಿ ಮಾಡಲು, ಮುಂದಿನ ವಿಚಾರಣೆಯ ಸಂದರ್ಭದಲ್ಲಿ ಸಂಬಂಧಿಸಿದ ಅಧಿಕಾರಿಗಳು ಹಾಜರಿರಲು ಹಾಗೂ ಬಿಬಿಎಂಪಿಯ ಪರವಾನಗಿ ರದ್ಧತಿ ಆದೇಶಕ್ಕೆ ತಡೆ ನೀಡಿ ಆದೇಶಿಸಿತ್ತು.
ಕಳೆದ ವಾರ(14/07/2017) ಠೇವಣಿ ಹಣ ಕಟ್ಟದೇ ಹಾಜರಾದ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದ ನ್ಯಾಯಾಲಯ, ಠೇವಣಿ ಹಣವನ್ನು ಕಟ್ಟಿ ವಿಚಾರಣೆ ಎದುರಿಸುವಂತೆ ಸೂಚಿಸಿತ್ತು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications