ಸ್ವಿಗ್ಗಿ, ಡಂಜೋ ಸಮವಸ್ತ್ರದಲ್ಲಿ ಡ್ರಗ್ಸ್ ಮಾರಾಟ: ಜಾಮೀನು ನಿರಾಕರಿಸಿದ ಹೈಕೋರ್ಟ್
ಬೆಂಗಳೂರು, ಜ.29: ಸ್ವಿಗ್ಗಿ ಮತ್ತು ಡುಂಜೋ ಸೇವೆ ನೀಡುವವರಂತೆ ಆ ಸಮವಸ್ತ್ರ ಧರಿಸಿಕೊಂಡು ಮಾದಕ ದ್ರವ್ಯಗಳ ಕಳ್ಳ ಮಾರಾಟದಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ.
ಮೂಲತಃ ಕೊಡಗು ಜಿಲ್ಲೆಯ ಅಬ್ದುಲ್ ರಜಾಕ್ ಮತ್ತು ಎಸ್.ಎಚ್. ರಶೀದ್ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಆಲಿಸಿದ ನ್ಯಾ. ಕೆ.ನಟರಾಜನ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.
"ತನಿಖೆ ವೇಳೆ ಆರೋಪಿಗಳಿಂದ ಮಾದಕ ನಿಗ್ರಹ ದಳ(ಎನ್ ಸಿಬಿ) ಸಾಕಷ್ಟು ಎಟಿಎಂ ಕಾರ್ಡ್ ಗಳನ್ನು ಮತ್ತು ಹಣ ಠೇವಣಿ ಮಾಡುವ ಇತರೆ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಡಂಜೋ ಮತ್ತು ಸ್ವಿಗ್ಗಿ ಸೇವಾ ಪೂರೈಕೆದಾರರ ಹೆಸರಿನಲ್ಲಿ ಆರೋಪಿಗಳು ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡಿದ್ದಾರೆ. ಈ ಹಂತದಲ್ಲಿ ಎನ್ಸಿಬಿ ತಮ್ಮಿಂದ ಏನೂ ವಶಪಡಿಸಿಕೊಂಡಿಲ್ಲವೆಂಬ ಆರೋಪಿಗಳ ಹೇಳಿಕೆ ಆಧರಿಸಿ ಜಾಮೀನು ನೀಡಲಾಗದು'' ಎಂದು ನ್ಯಾಯಾಲಯ ಹೇಳಿದೆ.
ಅಲ್ಲದೆ, ಅರ್ಜಿದಾರರಿಗೆ ಜಾಮೀನು ನೀಡಿದರೆ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತಾರೆ ಎಂಬುದನ್ನು ತಳ್ಳಿ ಹಾಕಲಾಗದು. ಡ್ರಗ್ ಪೆಡ್ಲಿಂಗ್ ಚಟುವಟಿಕೆ ಗಂಭೀರ ಅಪರಾಧವಾಗಿದ್ದು, ಅವುಗಳಲ್ಲಿ ತೊಡಗಿರುವವರ ಜಾಮೀನು ಅರ್ಜಿ ಪುರಸ್ಕರಿಸಲಾಗದು ಎಂದು ಆರೋಪಿಗಳ ಅರ್ಜಿಗಳನ್ನು ವಜಾಗೊಳಿಸಿದೆ.
ಜಾಮೀನು ಅರ್ಜಿಯನ್ನು ವಿರೋಧಿಸಿದ್ದ ಪ್ರಾಸಿಕ್ಯೂಷನ್ ಪರ ವಕೀಲರು, ರಜಾಕ್ ಮತ್ತು ರಶೀದ್ ಇಬ್ಬರೂ ಸಣ್ಣ ಪ್ಯಾಕೇಟ್ ಗಳಲ್ಲಿ ಗಾಂಜಾ ತುಂಬಿ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದರು. ರಜಾಕ್ ಖಾತೆಯಲ್ಲಿ ಬ್ಯಾಂಕ್ ನಲ್ಲಿ ಭಾರಿ ಪ್ರಮಾಣದ ಹಣ ಠೇವಣಿ ಮಾಡಿರುವುದು ಆತ ಮಾದಕ ದ್ರವ್ಯ ಮಾರಾಟ ದಂಧೆಯಲ್ಲಿ ತೊಡಗಿರುವುದನ್ನು ದೃಢಪಡಿಸುತ್ತದೆ. ಇಬ್ಬರಿಬ್ಬರೂ ಕಾರ್ಡ್ ಬೋರ್ಡ್ ಬಾಕ್ಸ್ ಗಳಲ್ಲಿ ಮಾಡಿಕೊಂಡು ಡಂಜೋ ಮತ್ತು ಸ್ವಿಗ್ಗಿ ಸಮವಸ್ತ್ರ ಧರಿಸಿ ಗಾಂಜಾ ಮಾರಾಟ ಮಾಡುತ್ತಿದ್ದರು, ಇದು ಗಂಭೀರ ಅಪರಾಧ . ಹಾಗಾಗಿ ಜಾಮೀನು ನೀಡಬಾರದೆಂದು ನ್ಯಾಯಪೀಠಕ್ಕೆ ವಿವರಿಸಿದ್ದರು.
ಪ್ರಕರಣದ ಹಿನ್ನೆಲೆ?
2021ರ ಸೆ.30ರಂದು ಖಚಿತ ಮಾಹಿತಿ ಆಧರಿಸಿ ಎನ್ ಸಿಬಿ ಅಧಿಕಾರಿಗಳು ನಗರದ ಕುಂದಲಹಳ್ಳಿ ಬಳಿ ಕಾರನ್ನು ತಪಾಸಣೆಗೊಳಪಡಿಸಿದಾಗ ಆದರಲ್ಲಿ 136 ಕೆ.ಜಿ. 800 ಗ್ರಾಂ ಗಾಂಜಾ ಪತ್ತೆಯಾಗಿತ್ತು. ಆಗ ಬೆಂಗಳೂರಿನಲ್ಲಿ ನೆಲೆಸಿದ್ದ ಕೊಡಗು ಮೂಲದ ಆರೋಪಿಗಳಾದ ಬಿಯು ಅಬ್ದುಲ್ ರಜಾಕ್ ಮತ್ತು ಎಸ್ ಎಚ್ ರಶೀದ್ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಅದರಲ್ಲಿ ಒಬ್ಬರು ಸೆಲೂನ್ ಮತೊಬ್ಬರು ಬೇಕರಿ ನಡೆಸುತ್ತಿದ್ದರು ಎಂದು ಹೇಳಲಾಗಿದೆ.
Recommended Video
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications