ಜಂತಕಲ್ ಮೈನಿಂಗ್, ಕುಮಾರಸ್ವಾಮಿಗೆ ನಿರೀಕ್ಷಣಾ ಜಾಮೀನು
ಬೆಂಗಳೂರು, ಆಗಸ್ಟ್ 10 : ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕರ್ನಾಟಕ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.
ಕುಮಾರಸ್ವಾಮಿ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರತ್ನಕಲಾ ಅವರಿದ್ದ ಏಕಸದಸ್ಯ ಪೀಠ 5 ಲಕ್ಷ ರು. ಶ್ಯೂರಿಟಿ ಬಾಂಡ್ ನೀಡುವಂತೆ ಸೂಚಿಸಿ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಸಾಕ್ಷ್ಯಾಧಾರಗಳನ್ನು ನಾಶಪಡಿಸದಂತೆ ಸೂಚಿಸಿರುವ ಕೋರ್ಟ್, ಎರಡು ವಾರಕ್ಕೊಮ್ಮೆ (ಸೋಮವಾರ ಅಥವಾ ಗುರುವಾರ) ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಕುಮಾರಸ್ವಾಮಿ ಅವರಿಗೆ ಹೇಳಿದೆ..
ಕುಮಾರಸ್ವಾಮಿ ಸಿಎಂ ಆಗಿದ್ದ ಸಂದರ್ಭದಲ್ಲಿ ಅಕ್ರಮವಾಗಿ ಜಂತಕಲ್ ಕಂಪನಿಗೆ ಪರವಾನಗಿ ನೀಡಿದ್ದರು. ಇದರಿಂದ ಕುಮಾರಸ್ವಾಮಿ ವಿರುದ್ಧ ದೂರು ದಾಖಲಾಗಿತ್ತು.












Click it and Unblock the Notifications