ಕರ್ನಾಟಕದಲ್ಲಿ ಮೊದಲ ಹೈ ಸ್ಪೀಡ್ ರೈಲು, ಎಲ್ಲಿ ಸಂಚರಿಸಲಿದೆ ಈ ರೈಲು?
ಬೆಂಗಳೂರು, ಏಪ್ರಿಲ್ 25: ಕರ್ನಾಟಕದಲ್ಲಿ ಮೊದಲ ಬಾರಿಗೆ ಹುಬ್ಬಳ್ಳಿ ಹಾಗೂ ಬೆಂಗಳೂರಿನ ನಡುವೆ ಹೈ ಸ್ಪೀಡ್ ರೈಲು ಯೋಜನೆ ಜಾರಿಗೆ ಚಿಂತನೆ ನಡೆದಿದೆ. ರೈಲ್ವೆ ಇಲಾಖೆಯ ಈ ಚಿಂತನೆಗೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ ಪ್ರಸ್ತಾಪಿದ್ದು, ಹೈ ಸ್ಪೀಡ್ ರೈಲು ಓಡಿಸಲು (ಎಚ್ಎಸ್ಆರ್) ರೂಟ್ ಕಾರಿಡಾರ್ ನೀಡುವ ಮೂಲಕ ಪ್ರಸ್ತಾಪಿಸಿದೆ.
ಸದ್ಯ ಭಾರತೀಯ ವಿಜ್ಞಾನ ಸಂಸ್ಥೆಯು ರೈಲ್ವೆ ಇಲಾಖೆಗೆ ಪ್ರಸ್ತಾವಿತ ಹೈ ಸ್ಪೀಡ್ ರೈಲು (ಎಚ್ಎಸ್ಆರ್ ) ರೂಟ್ ಕಾರಿಡಾರ್ ಒದಗಿಸಿದೆ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ ಪ್ರಕಾರ ಪ್ರಸ್ತಾವಿತ ರೂಟ್ ದಾವಣಗೆರೆ, ಚಿತ್ರದುರ್ಗ, ತುಮಕೂರು ಮತ್ತು ಯಶವಂತಪುರ ಈ ನಾಲ್ಕು ನಿಲ್ದಾಣಗಳೊಂದಿಗೆ ಪ್ರಸ್ತುತ ಹಾಗೂ ಪ್ರಸ್ತಾವಿತ ರೈಲು ಜಾಲದೊಂದಿಗೆ 400 ಕಿಲೋಮೀಟರ್ ದೂರ ಕ್ರಮಿಸಲು ಹೈ ಸ್ಪೀಡ್ ರೈಲು ಓಡಿಸಲು ಈ ಮಾರ್ಗವನ್ನು ತೆಗೆದುಕೊಳ್ಳಬಹುದು ಎಂದು ಹೇಳಿದೆ.
ಈ ಯೋಜನೆ ಜಾರಿಗೆ ಬಂದರೆ ಕರ್ನಾಟಕದಲ್ಲಿ ಮೊದಲ ಹೈ ಸ್ಪೀಡ್ ರೈಲು ಹುಬ್ಬಳ್ಳಿ ಹಾಗೂ ಬೆಂಗಳೂರಿನ ನಡುವೆ ಸಂಚರಿಸಲಿದೆ ಸದ್ಯ ರೂಟ್ ಕಾರಿಡಾರ್ಗೆ ಗ್ರೀನ್ ಸಿಗ್ನಲ್ ಕೊಟ್ಟಿರುವ ಭಾರತೀಯ ವಿಜ್ಞಾನ ಸಂಸ್ಥೆಈಗಿರುವ ಕಾರಿಡಾರ್ಗಳಲ್ಲಿ ದಾವಣಗೆರೆ, ಚಿತ್ರದುರ್ಗ ತುಮಕೂರು ಹಾಗೂ ಯಶವಂತಪುರ ನಿಲ್ದಾಣಗಳು ಈ ಹೈ ಸ್ಪೀಡ್ ರೈಲಿನ ನಾಲ್ಕು ಪ್ರಮುಖ ನಿಲ್ದಾಣಗಳು ಆಗಲಿದ್ದು ಇನ್ನು ಕರ್ನಾಟಕದ ಎರಡನೇ ಬೃಹತ್ ನಗರವಾಗಿರುವ ಹುಬ್ಬಳ್ಳಿಯ ಜನತೆಗೆ ಹೈ ಸ್ಪೀಡ್ ರೈಲು ಸೇವೆ ಒದಗಿಸಲಿದ್ದು ಕೇವಲ 5 ಗಂಟೆಯಲ್ಲಿ ಬೆಂಗಳೂರು ತಲುಪುವ ಹಾಗೂ ಬೆಂಗಳೂರಿನಿಂದ ಹುಬ್ಬಳ್ಳಿಗೂ 5 ಗಂಟೆಯಲ್ಲಿ ರೈಲು ಪ್ರಯಾಣಿಕರನ್ನು ತಲುಪಿಸುವ ವೇಗದ ರೈಲು ಯೋಜನೆ ಇದಾಗಿದೆ.

ಕಳೆದ ಎರಡು ವರ್ಷಗಳ ಹಿಂದೆ ಪುಣೆ-ಬೆಳಗಾವಿ ರೈಲನ್ನು ಹುಬ್ಬಳ್ಳಿ ತನಕ ವಿಸ್ತರಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ರೈಲ್ವೆ ಸಚಿವರಿಗೆ ಮನವಿ ಮಾಡಿದ್ದರು. ಬಳಿಕ ಆಗಿನ ರೈಲ್ವೆ ಖಾತೆ ರಾಜ್ಯ ಸಚಿವ ದಿ.ಸುರೇಶ್ ಅಂಗಡಿ ಅವರು ಮನವಿಗೆ ತಲೆದೂಗಿದರು ಮತ್ತು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಹುಬ್ಬಳ್ಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾದ ಹುಬ್ಬಳ್ಳಿ-ಪುಣೆ ರೈಲು ಪರಿಚಯಿಸಿದ ನಂತರ ಈಗ ಹೈ ಸ್ಪೀಡ್ ರೈಲು ಹುಬ್ಬಳ್ಳಿಯ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಕೇಂದ್ರ ಸರ್ಕಾರವು ದೇಶಾದ್ಯಂತ ಅನೇಕ ರೈಲು ನಿಲ್ದಾಣಗಳನ್ನು ನವೀಕರಿಸುತ್ತಿದೆ, ಸುಮಾರು 6,000 ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಉಚಿತ ವೈಫೈ ಒದಗಿಸುತ್ತಿವೆ. ಸೇವೆಗಳು, ರೈಲು ಸಮಯ ಮತ್ತು ಹೆಚ್ಚಿನದನ್ನು ಸುಧಾರಿಸಲು ಸರ್ಕಾರ ಕ್ರಮಗಳನ್ನು ಕೈಗೊಂಡಿದ್ದು ರೈಲುಗಳು ಮತ್ತು ನಿಲ್ದಾಣಗಳನ್ನು ಸ್ವಚ್ಛವಾಗಿಡಲು ಜನರು ರೈಲ್ವೆಯೊಂದಿಗೆ ಸಹಕರಿಸಬೇಕು ಕೇಂದ್ರ ಸರ್ಕಾರವು ಸಾರ್ಜಜನಿಕರಿಗೆ ವಿನಂತಿಸಿದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು











Click it and Unblock the Notifications