ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಸ ಸಮಸ್ಯೆ; ಬಿಬಿಎಂಪಿ ವಿಸರ್ಜಿಸುವುದಾಗಿ ಎಚ್ಚರಿಸಿದ ಹೈಕೋರ್ಟ್‌

|
Google Oneindia Kannada News

ಬೆಂಗಳೂರು, ಜನವರಿ 30: ಬೆಂಗಳೂರಿನ ಕಸದ ಸಮಸ್ಯೆಯ ಬಗ್ಗೆ ಕರ್ನಾಟಕ ಹೈಕೋರ್ಟ್, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮೇಲೆ ತೀವ್ರ ಕಿಡಿ ಕಾರಿದೆ.

ಈ ಕುರಿತು ಗುರುವಾರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ವಿಭಾಗೀಯ ಪೀಠ, ''ಘನತ್ಯಾಜ್ಯ ವಿಲೇವಾರಿಯಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲವಾಗಿದೆ. ಈ ವಿಚಾರದಲ್ಲಿ ನಾವು ಕಠಿಣ ತೀರ್ಮಾನ ತೆಗೆದುಕೊಳ್ಳದೇ ಅನ್ಯ ಮಾರ್ಗವಿಲ್ಲ. ಇಲ್ಲದಿದ್ದರೆ, ವರ್ಷಗಳೇ ಗತಿಸಿದರೂ ಇದಕ್ಕೆ ಪರಿಹಾರ ಸಿಗುವುದಿಲ್ಲ'' ಎಂದು ಎಚ್ಚರಿಸಿದೆ.

ವಾಹನಗಳ ನಾಮಫಲಕ ಉಲ್ಲಂಘನೆ; ಹೈಕೋರ್ಟ್‌ಗೆ ಸರ್ಕಾರ ಹೇಳಿದ್ದೇನು?ವಾಹನಗಳ ನಾಮಫಲಕ ಉಲ್ಲಂಘನೆ; ಹೈಕೋರ್ಟ್‌ಗೆ ಸರ್ಕಾರ ಹೇಳಿದ್ದೇನು?

''ತ್ಯಾಜ್ಯ ವಿಲೇವಾರಿಯಲ್ಲಿ ವಿಫಲವಾಗಿರುವ ಪಾಲಿಕೆಯನ್ನು ವಿಸರ್ಜಿಸಿ ಆಡಳಿತಾಧಿಕಾರಿ ನೇಮಿಸಬೇಕು. ಇಲ್ಲವೇ ನಗರದಲ್ಲಿ ನಿರ್ಮಾಣ ಕಾಮಗಾರಿಗಳನ್ನು ಸ್ಥಗಿತಗೊಳಿಸಬೇಕು. ಈ ಬಗ್ಗೆ ಸರ್ಕಾರ ಒಂದು ತೀರ್ಮಾನಕ್ಕೆ ಬರಬೇಕು' ಎಂದು ಪೀಠ ಬಿಬಿಎಂಪಿಗೆ ಚಾಟಿ ಬೀಸಿದೆ.

Karnataka Highcourt Takes Charge Against BBMP About Garbage Issue

''ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಸಂಬಂಧ ರಾಜ್ಯ ಸರ್ಕಾರ ಮಧ್ಯ ಪ್ರವೇಶ ಮಾಡಲಿದ್ದು, ಕ್ರಮ ಕೈಗೊಳ್ಳಲು 2 ವಾರ ಕಾಲಾವಕಾಶ ನೀಡುವಂತೆ ಅಡ್ವೋಕೇಟ್ ಜನರಲ್ ಮನವಿ ಮಾಡಿದ ಹಿನ್ನೆಲೆಯಲ್ಲಿ, ಕೋರ್ಟ್ ಯಾವುದೇ ಕಠಿಣ ಆದೇಶ ನೀಡಲು ಬಯಸುವುದಿಲ್ಲ'' ಎಂದು ನ್ಯಾಯಮೂರ್ತಿ ಪ್ರಭುಲಿಂಗ ನಾವಡಗಿ ನೇತೃತ್ವದ ಪೀಠ ಹೇಳಿದೆ.

English summary
Karnataka Highcourt Takes Charge Against BBMP About Garbage Issue. The High Court said that the BBMP, which failed to deal with the garbage problem, had to be Dissolved.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X