ಬೆಂಗಳೂರು 'ಸೇಫ್ ' ಆಗಿಲ್ಲ ಎಂದು ಬಿಂಬಿಸಬೇಡಿ: ಪರಂ
ಹೊಸವರ್ಷಾಚರಣೆ ವೇಳೆಯಲ್ಲಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಜಾರಿಯಲ್ಲಿದೆ. ಇಂಥ ಘಟನೆ ಬೆಂಗಳೂರು ಮಹಿಳೆಯರಿಗೆ ಸುರಕ್ಷಿತವಾಗಿಲ್ಲ ಎಂದು ಮಾಧ್ಯಮಗಳಲ್ಲಿ ಬಿಂಬಿಸಲಾಗುತ್ತಿದೆ.
Recommended Video

ಬೆಂಗಳೂರು, ಜನವರಿ 05: ಹೊಸವರ್ಷಾಚರಣೆ ವೇಳೆಯಲ್ಲಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಜಾರಿಯಲ್ಲಿದೆ. ಇಂಥ ಘಟನೆ ಬೆಂಗಳೂರು ಮಹಿಳೆಯರಿಗೆ ಸುರಕ್ಷಿತವಾಗಿಲ್ಲ ಎಂದು ಮಾಧ್ಯಮಗಳಲ್ಲಿ ಬಿಂಬಿಸಲಾಗುತ್ತಿದೆ. ಬೆಂಗಳೂರು ಅತ್ಯಂತ ಸುರಕ್ಷಿತವಾಗಿದೆ ಎಂದು ಗೃಹಸಚಿವ ಜಿ ಪರಮೇಶ್ವರ ಅವರು ಗುರುವಾರ ಸುದ್ದಿಗೋಷ್ಠಿ ನಡೆಸಿ ಹೇಳಿದರು.

ಮಹಿಳೆಯರು, ಮಕ್ಕಳಿಗೆ ಬೆಂಗಳೂರು ಸುರಕ್ಷಿತವಾಗಿದೆ. ನಾನು ಡಿಸೆಂಬರ್ 31ರ ಘಟನೆ ಬಗ್ಗೆ ನೀಡಿದ್ದ ಹೇಳಿಕೆಯನ್ನು ತಿರುಚಲಾಗಿದೆ. ಇಂಥ ಘಟನೆಗಳು ಸ್ವಾಭಾವಿಕ ಎಂದು ನಾನು ಹೇಳಿದ್ದೆ. ಆದರೆ, ಯಾವ ಉದ್ದೇಶದಿಂದ ಈ ಹೇಳಿಕೆ ನೀಡಿದೆ ಎಂಬುದನ್ನು ಮಾಧ್ಯಮಗಳಿಂದ ತೋರಿಸಿಲ್ಲ. ಹಿರಿಯ ಅಧಿಕಾರಿಗಳ ಅನುಪಸ್ಥಿತಿಯೇ ಇದಕ್ಕೆ ಕಾರಣವಾಗಿತ್ತು.

ಆದ್ದರಿಂದ ಮಾಧ್ಯಮಗಳಲ್ಲಿ ಬೆಂಗಳೂರಿನ ಬಗ್ಗೆ ಕೆಟ್ಟ ಅಭಿಪ್ರಾಯ ಬರುವಂತೆ ಸುದ್ದಿ ಪ್ರಸಾರ ಮಾಡುವುದನ್ನು ನಿಲ್ಲಿಸಿ. ಘಟನೆ ಬಗ್ಗೆ ನಿಮ್ಮ ಬಳಿ ಫುಟೇಜ್ ಇದ್ದರೆ ದಯವಿಟ್ಟು ಕೊಡಿ, ಪೊಲೀಸರ ತನಿಖೆಗೆ ನೆರವಾಗಿ ಎಂದು ಈ ಮೂಲಕ ಕೋರುತ್ತೇನೆ.[ಯುವತಿಯರೇ ನೀವೇ ಎಚ್ಚರದಿಂದಿರಿ ಎಂದಿದ್ದು ಸರಿಯಾ?]

* ಕನ್ನಡಿಗರು ಎಂದಿಗೂ ಇಂಥ ಘಟನೆಗಳನ್ನು ಉತ್ತೇಜಿಸುವುದಿಲ್ಲ.
* ಈ ಘಟನೆಗೆ ಸಂಬಂಧಿಸಿದಂತೆ ಶಂಕಿತರನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ.
* ಬೆಂಗಳೂರಿನಲ್ಲಿ ಹೆಚ್ಚುವರಿ 5 ಸಾವಿರ ಸಿಸಿಟಿವಿ ಕೆಮೆರಾ ಅಳವಡಿಸಲಾಗುತ್ತಿದೆ.
* ಮಹಿಳಾ ಆಯೋಗದಿಂದ ನೋಟಿಸ್ ಬಂದಿದೆ. ರಾಜ್ಯಪಾಲರು ವರದಿ ಕೇಳಿದ್ದಾರೆ.
* ನನ್ನ ಹೇಳಿಕೆ ಹಾಗೂ ಬೆಂಗಳೂರು ಬಗ್ಗೆ ಅಪಪ್ರಚಾರ ಮಾಡುವುದನ್ನು ಬಿಡಿ
* ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಗೆ ಕಾಂಗ್ರೆಸ್ ಸರ್ಕಾರ ಬದ್ಧ
* ಬೆಂಗಳೂರು ಪೊಲೀಸರು 24/7 ಕಾರ್ಯಾಚರಣೆ ಮಾಡುತ್ತಿದ್ದಾರೆ.
* ಡಯಲ್ 100 ಕರೆಗೆ ಈಗ ಇರುವ 15ಲೈನ್ ಗಳಿಗೆ ಬದಲಾಗಿ 100 ಲೈನ್ ಗೆ ಹೆಚ್ಚಿಸಲಾಗುವುದು. ಇದಕ್ಕಾಗಿ 14 ಕೋಟಿ ರು ನೀಡಲಾಗಿದೆ.
* ಮಹಿಳಾ ಪೊಲೀಸ್ ಸಿಬ್ಬಂದಿ ಸಂಖ್ಯೆಯನ್ನು ಶೇ5 ರಿಂದ ಶೇ20ಕ್ಕೇರಿಸಲಾಗಿದೆ.
(ಒನ್ಇಂಡಿಯಾ ಸುದ್ದಿ)
-
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ.












Click it and Unblock the Notifications