ಕೈಗಾರಿಕೆ ಆಸ್ತಿಗಳ ಏಕರೂಪ ತೆರಿಗೆ ಸಂಗ್ರಹ: ಸಚಿವ ಶೆಟ್ಟರ್
ಬೆಂಗಳೂರು ಡಿಸೆಂಬರ್ 21: ಕೈಗಾರಿಕೋದ್ಯಮಿಗಳ ಹಾಗೂ ಕೈಗಾರಿಕಾ ಸಂಸ್ಥೆಗಳ ಪ್ರಮುಖ ಬೇಡಿಕೆಯಾಗಿದ್ದ ಸ್ಥಳೀಯ ಸಂಸ್ಥೆಗಳ ತೆರಿಗೆ ಸಂಗ್ರಹಣೆಯ ಕ್ರಮದ ಬಗ್ಗೆ ರಾಜ್ಯ ಸರಕಾರ ಮಹತ್ವ ನಿರ್ಧಾರ ಕೈಗೊಂಡಿದೆ.
ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ವಿವರಣೆ ನೀಡಿದ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು, ನಗರಪ್ರದೇಶಗಳಿಂದ ಗ್ರಾಮಪಂಚಾಯ್ತಿಯ ವ್ಯಾಪ್ತಿಯಲ್ಲಿನ ಎಲ್ಲಾ ಕೈಗಾರಿಕೆಗಳಿಗೆ ಏಕರೂಪದ ತೆರಿಗೆ ಸಂಗ್ರಹಣೆಯ ಮಾಡುವ ನಿಟ್ಟಿನಲ್ಲಿ ಹೊಸ ನೀತಿಯನ್ನು ರೂಪಿಸಲಾಗುವುದು ಎಂದು ಪ್ರಕಟಿಸಿದರು.
ಖನಿಜ ಭವನದ ಉದ್ಯೋಗ ಮಿತ್ರ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ದಿ, ನಗರಾಭಿವೃದ್ದಿ, ಕೈಗಾರಿಕಾ ಇಲಾಖೆ ಹಾಗೂ ಇನ್ನಿತರೆ ಪ್ರಮುಖ ಇಲಾಖೆಗಳ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯನ್ನು ನಡೆಸಿದ ಅವರು ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿಯನ್ನು ನೀಡಿದರು.

ನಗರಸಭೆ, ಪುರ ಸಭೆ, ಕಾರ್ಪೋರೇಷನ್ಗಳು, ಗ್ರಾಮಪಂಚಾಯ್ತಿ ಇವುಗಳ ಮೂಲಕ ತೆರಿಗೆ ಸಂಗ್ರಹಕ್ಕೆ ಇರುವ ಕ್ರಮಗಳಲ್ಲಿ ಬಹಳಷ್ಟು ಗೊಂದಲಗಳು ಇದ್ದವು. ಇವುಗಳನ್ನು ಸರಿಪಡಿಸುವಂತೆ ಕೊರಿ ಬಹಳಷ್ಟು ಸಮಯದಲ್ಲಿ ಕೈಗಾರಿಕೋದ್ಯಮಿಗಳು ಹಾಗೂ ಕೈಗಾರಿಕಾ ಸಂಸ್ಥೆಗಳು ಮನವಿಯನ್ನು ನೀಡಿದ್ದವು. ಈ ಮನವಿಯ ಹಿನ್ನಲೆಯಲ್ಲಿ ಹಾಗೂ ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ದಿಗೆ ಬೇಕಾಗಿರುವ ಸವಲತ್ತುಗಳನ್ನು ನೀಡುವ ದೃಷ್ಟಿಯಿಂದ ರಾಜ್ಯಾದ್ಯಂತ ಏಕರೂಪದ ತೆರಿಗೆ ಸಂಗ್ರಹಣೆಗೆ ಅಗತ್ಯವಿರುವ ನೀತಿಯನ್ನು ರೂಪಿಸಲು ರಾಜ್ಯ ಸರಕಾರ ಮುಂದಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications