LED ಲೈಟ್ ಅಳವಡಿಸಿಕೊಂಡ ವಾಹನ ಸವಾರರ ಗಮನಕ್ಕೆ, ದಂಡ ಕಟ್ಟಲು ಸಜ್ಜಾಗಿ
ಬೆಂಗಳೂರು, ಜೂನ್ 20: ರಸ್ತೆ ಅಪಘಾತಗಳನ್ನು ತಪ್ಪಿಸಲು 'ಕೇಂದ್ರ ಮೋಟಾರು ವಾಹನಗಳ ನಿಯಮ'ಗಳ ಅಡಿಯಲ್ಲಿ ಅನುಮತಿ ನೀಡಿರುವ ದೀಪಗಳನ್ನು (ಹೆಡ್ಲೈಟ್) ಮಾತ್ರ ವಾಹನಗಳಿಗೆ ಅಳವಡಿಸಬೇಕು. ಎಲ್ಇಡಿ ನಿರ್ಬಂಧಿಸಿರುವ ಬಗ್ಗೆ ಆದೇಶ ಹೊರಡಿಸಿದ್ದಾರೆ. ಪಾಲನೆ ಆಗದಿದ್ದರೆ ಜುಲೈನಿಂದ ದಂಡ ಹೇರಿಕೆ ಪ್ರಕ್ರಿಯೆ ಆರಂಭವಾಗಲಿದೆ.
ಈ ಕುರಿತು ಕರ್ನಾಟಕ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ. ಹೆಚ್ಚು ಬೆಳಕು ನೀಡುವ ಈ LED ಲೈಟ್ಸ್ಗಳನ್ನು ನಿಮ್ಮ ವಾಹನಗಳಿಗೆ ಅಳವಡಿಕೆ ಮಾಡುವುದರಿಂದ ಎದುರುಗಡೆ ಬರುವ ವಾಹನ ಸವಾರರಿಗೆ ತೊಂದರೆ ಆಗುತ್ತಿದೆ. ಆದ್ದರಿದ ಈ ಲೈಟ್ಗಳ ಅಳವಡಿಕೆಗೆ ನಿರ್ಬಂಧ ವಿಧಿಸಲಾಗಿದೆ ಎಂದು ಅವರು ವಿವರಿಸಿದರು.

ವಾಹನ ಸವಾರರಿಗೆ ಅನಾನುಕುಲ
ಲೈಟ್ ಬ್ಯಾನ್ ಬಗ್ಗೆ ಮಾತನಾಡುತ್ತಿಲ್ಲ. ವಾಹನಗಳಿಗೆ ಹೆಚ್ಚು ಹೊಳೆಯುವ ದೀಪಗಳ ಅಳವಡಿಕೆ ಮಾಡಿದರೆ, ಬಳಸಿದರೆ ಅದು ರಾತ್ರಿ ವೇಳೆ ಮುಂಬರುವ ಚಾಲಕರಿಗೆ ಅನಾನುಕೂಲತೆ ಮಾಡುತ್ತಿದೆ. ಈ ಬಗ್ಗೆ ಅನೇಕ ಅಪಘಾತ ಪ್ರಕರಣಳನ್ನು ದಾಖಲಿಸುವಾಗ ಮಾಹಿತಿ ಪಡೆದಿದ್ದೇವೆ.
ಇತರ ಚಾಲಕರ ಮೇಲೆ ಅನಾನುಕೂಲತೆ ಉಂಟು ಮಾಡುವ, ಪ್ರಜ್ವಲಿಸುವ ಪರಿಣಾಮವನ್ನು ಉಂಟುಮಾಡುವ ಎಲ್ಇಡಿ ದೀಪಗಳನ್ನು ವಾಹನಗಳಿಗೆ ಅಳವಡಿಸಿಕೊಳ್ಳದಂತೆ ಸೂಚನೆ ನೀಡಲಾಗಿದೆ. ಒಂದು ವೇಳೆ ನೀವು ನಿಯಮ ಉಲ್ಲಂಘಿಸಿ ಅಳವಡಿಸಿಕೊಂಡರೆ ಅಪಘಾತಗಳ ಹೆಚ್ಚಳಕ್ಕೆ ಕಾರಣವಾಗುತ್ತದೆ ಎಂದರು.

ಮಾರ್ಗಸೂಚಿ ಪಾಲಿಸುವಂತೆ ಸೂಚನೆ
ರಸ್ತೆಯಲ್ಲಿ ಇತ್ತೀಚಿನ ದಿನಗಳಲ್ಲಿ ಲಾರಿ, ಟ್ರಕ್, ಕಾರು, ಅಷ್ಟೇ ಅಲ್ಲದೇ ಬೈಕ್ಗಳೂ ಸಹ ಎಲ್ಇಡಿ ಲೈಟ್ಗಳನ್ನು ಅಳವಡಿಸಿಕೊಂಡಿದ್ದನ್ನು ನೋಡಬಹುದು. ಇವುಗಳ ಪ್ರಖರ ಬೆಳಕು ಇನ್ನಿತರ ವಾಹನಗಳ ಚಾಲಕರಿಗೆ ತೊಂದರೆ ಕೊಡುತ್ತಿವೆ. ಕಣ್ಣಿಗೆ ಕುಕ್ಕುತ್ತವೆ. ಆದ್ದರಿಂದ ಇನ್ನು ಮುಂದೆ ಇಂತಹ ಲೈಟ್ಗಳನ್ನು ಬಳಸಬಾರದು. ಎಲ್ಲ ವಾಹನಗಳ ಚಾಲಕರು ಕೇಂದ್ರ ಮೋಟಾರು ವಾಹನ ಕಾಯ್ದೆಯಂತೆ ಮಾರ್ಗಸೂಚಿ ಪಾಲನೆ ಮಾಡಬೇಕು ಎಂದು ಅಲೋಕ್ ಕುಮಾರ್ ಅವರು ತಿಳಿಸಿದ್ದಾರೆ.
ಮಾರ್ಗಸೂಚಿ ಪಾಲಿಸದಿದ್ದರೆ ಐವಿಎಂ ಕಾಯ್ದೆ ಕಲಂ 177 ರಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು. ವಾಹನಗಳ ತಪಾಸಣೆ ಕಾರ್ಯಾಚರಣೆ ನಡೆಸಿ ಜುಲೈ 31ರಂದು ವರದಿ ಸಲ್ಲಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ.
-
ಧನುಷ್ ಜೊತೆ ಸ್ನೇಹ ಕಳೆದುಕೊಂಡಿದ್ದು ನನ್ನ ಜೀವನದ ದೊಡ್ಡ ನಷ್ಟ: ಪತ್ನಿ ನಯನತಾರ ಜೊತೆಗಿನ ಮನಸ್ತಾಪಕ್ಕೆ ವಿಘ್ನೇಶ್ ಶಿವನ್ ಬೇಸರ -
"ನಾನು ಔಟ್ ಆಗಿದ್ದಕ್ಕೇ ತುಂಬಾ ಖುಷಿಯಾಯ್ತು": ಸಿಎಸ್ಕೆ ಎದುರು ರನ್ ಮಳೆ ಹರಿಸಿದ ಬಳಿಕ ಪಡಿಕ್ಕಲ್ ಹೀಗಂದಿದ್ದೇಕೆ? -
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru: ನಸುಕಿನ ಜಾವ 3 ಗಂಟೆಗೆ ರಾಪಿಡೋ ರೈಡರ್ ತೋರಿದ ಮಾನವೀಯತೆಗೆ ಮಹಿಳೆ ಫಿದಾ, Video Viral -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
Virat Kohli: ನಾನೇನು ವಿದೇಶಿ ಆಟಗಾರನಾ?: ಲಂಡನ್ ವಾಸ್ತವ್ಯದ ಬಗ್ಗೆ ಟೀಕಾಕಾರರಿಗೆ ವಿರಾಟ್ ಕೊಹ್ಲಿ ತಿರುಗೇಟು -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
Silk Board: ಹಳದಿ-ನೀಲಿ ಮೆಟ್ರೋ ಲೈನ್ ಪ್ರಯಾಣಿಕರಿಗಾಗಿ 'ಟ್ರಾವೆಲೇಟರ್-ಕನೆಕ್ಟಿಂಗ್ ವಾಕ್ವೇ ಸಂಪರ್ಕ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ












Click it and Unblock the Notifications