ನಾಟ್ಯ ಸಂಭ್ರಮಕ್ಕೆ ಸಾಕ್ಷಿಯಾಗಲಿರುವ ಎಡಿಎ ರಂಗಮಂದಿರ
ಬೆಂಗಳೂರು, ನವೆಂಬರ್, 17: ಬೆಂಗಳೂರಿನ ಜೆಸಿ ರಸ್ತೆಯ ಎಡಿಎ ರಂಗಮಂದಿರದಲ್ಲಿ ನವೆಂಬರ್ 20 ರಂದು ನಾಟ್ಯ ಸಂಭ್ರಮ. ಕರ್ನಾಟಕ ಕಲಾಶ್ರೀ ಗುರು ಕಿರಣ್ ಸುಬ್ರಮಣಿಯನ್ ಮತ್ತು ಸಂಧ್ಯಾ ಕಿರಣ್ ಅವರ ಮಾರ್ಗದರ್ಶನದಲ್ಲಿ 9 ನೃತ್ಯ ಪಟುಗಳು ' ಮಾನಿನಿ' ಹೆಸರಿನಲ್ಲಿ ನಾಟ್ಯ ಪ್ರದರ್ಶನ ನೀಡಲಿದ್ದಾರೆ.
ಶಿವರಂಜಿನಿ ಹರೀಶ್, ಪ್ರತಿಭಾ ರಾಮಸ್ವಾಮಿ, ಪ್ರೀತಿ ಬಸವರಾಜ್, ಸ್ನೇಹಾ ದೇವಾನಂದನ್, ಅರಣ್ಯ ನಾರಿಯನ್, ಮಾತಂಗಿ ಪ್ರಸನ್ನ, ಅಪರ್ಣಾ ಶಾಸ್ತ್ರೀ, ಶ್ರುತಿ ಗೋಪಾಲ್, ರಸಿಕಾ ಕಿರಣ್ ಪ್ರತಿಭಾ ಪ್ರದರ್ಶನ ಮಾಡಲಿದ್ದಾರೆ.[ಈ ಬಾರಿಯ ಸಂಗೀತ ಅಕಾಡೆಮಿ ಪ್ರಶಸ್ತಿಗಳು ಯಾರಿಗೆ ಸಂದಿವೆ?]

ಮಹಿಳೆಯ ಶಕ್ತಿ, ಸಾಮರ್ಥ್ಯವನ್ನು ಪ್ರತಿಬಿಂಬಿಸುವ 'ಮಾನಿನಿ'ಗೆ ಗುರು ಕಿರಣ್ ಸುಬ್ರಮಣಿಯನ್ ಮತ್ತು ಸಂಧ್ಯಾ ಕಿರಣ್ ಅವರ ಕೋರೊಯೋಗ್ರಫಿ ಮಾಡಿದ್ದಾರೆ. ಎಡಿಎ ರಂಗಮಂದಿರದಲ್ಲಿ ನವೆಂಬರ್ 20 ರಂದು ಸಂಜೆ 6.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ.
'ರಸಿಕ' ಹೆಸರಿನಲ್ಲಿ ಕಿರಣ್ ಅವರು ನಾಟ್ಯಾಲಯವೊಂದನ್ನು ನಡೆಸುತ್ತಿದ್ದಾರೆ. ಕಳೆದ 25 ವರ್ಷದಿಂದ ನೃತ್ಯ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಕಿರಣ್, ಪಂಡಿತ್ ರವಿಶಂಕರ್ ಅವರೊಂದಿಗೂ ಕೆಲಸ ಮಾಡಿದ್ದಾರೆ. ಅಲ್ಲದೇ ಅನೇಕ ಟಿವಿ ಶೋ ಗಳನ್ನು ನಡೆಸಿಕೊಟ್ಟಿದ್ದಾರೆ.[ಈ ಬಾಲೆ ಪಂಚಮಿ ಪಂಚಕ್ಷೇತ್ರದ ಸಾಧಕಿ]
ದೇಶ ವಿದೇಶದಲ್ಲಿ ಕಾರ್ಯಕ್ರಮ ನೀಡಿ ಹೆಸರು ಗಳಿಸಿರುವ ಕಿರಣ್ ಸುಬ್ರಮಣಿಯನ್ ಅವರ ಮಾರ್ಗದರ್ಶನದಲ್ಲಿ 9 ಜನ ನೃತ್ಯ ಪಟುಗಳು ತಮ್ಮ ಪ್ರತಿಭೆ ಹೊರ ಹಾಕಲಿದ್ದಾರೆ. ಹೆಚ್ಚಿನ ಮಾಹಿತಿಗೆ 9900847382 ಸಂಪರ್ಕಿಸಬಹುದು.
-
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral












Click it and Unblock the Notifications