ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್!
ಬೆಂಗಳೂರು, ಸೆಪ್ಟೆಂಬರ್ 21: ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್. ಆರ್. ನಿರಾಣಿ ಟ್ವಿಟ್ಟರ್ ಖಾತೆಯನ್ನು ಹ್ಯಾಕರ್ಗಳು ಹ್ಯಾಕ್ ಮಾಡಿದ್ದಾರೆ.
ಈ ಬಗ್ಗೆ ಸ್ವತಃ ಸಚಿವ ಮುರುಗೇಶ್ ನಿರಾಣಿ ಪ್ರಕಟಣೆ ನೀಡಿದ್ದು, "ನನ್ನ ಟ್ವಿಟರ್ ಖಾತೆ @NiraniMurugesh ಅನ್ನು ಕೆಲವರು ಮಂಗಳವಾರ ಅಜ್ಞಾತ ವಿದೇಶಿ ಸ್ಥಳದಿಂದ ಹ್ಯಾಕ್ ಮಾಡಿದ್ದಾರೆ. ಆರೋಪಿಗಳ ನಿಖರವಾದ ಮೂಲ ಮತ್ತು ಗುರುತು ನಮಗೆ ತಿಳಿದಿಲ್ಲ," ಎಂದು ತಿಳಿಸಿದ್ದಾರೆ.
"ಹ್ಯಾಕರ್ಗಳು ಪೋಸ್ಟ್ ಮಾಡುವ ಯಾವುದೇ ಮೋಸದ ಸಂದೇಶಗಳಿಗೆ ಬಲಿಯಾಗಬೇಡಿ. ನನ್ನ ಖಾತೆಯಲ್ಲಿರುವ ಏನಾದರೂ ಅವಹೇಳನಕಾರಿ ಮತ್ತು ಅಸಂಸದೀಯ ಸಂದೇಶಗಳನ್ನು ನಿರ್ಲಕ್ಷಿಸಿ, ಯಾರೊಬ್ಬರೂ ಯಾವುದೇ ರೀತಿಯ ಪ್ರತಿಕ್ರಿಯೆಗಳನ್ನು ನೀಡಬೇಡಿ,'' ಎಂದು ಮನವಿ ಮಾಡಿದ್ದಾರೆ.

"ಈ ಬಗ್ಗೆ ಟ್ವಿಟರ್ಗೆ ದೂರು ನೀಡಿಲಾಗಿದ್ದು, ಶೀಘ್ರದಲ್ಲೇ ಬೆಂಗಳೂರಿನ ಸೈಬರ್ ಸೆಲ್ ಪೊಲೀಸರಿಗೆ ದೂರು ನೀಡುತ್ತೇವೆ. ಈ ಮೊದಲು ಕೂಡ ನನ್ನ ಫೇಸ್ಬುಕ್ ಅಕೌಂಟ್ ಹ್ಯಾಕ್ ಮಾಡಿದ್ದರು,'' ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ಈ ಹಿಂದೆಯೂ ಸಚಿವ ಮುರುಗೇಶ್ ನಿರಾಣಿ ಫೇಸ್ಬುಕ್ನಲ್ಲಿ ಹಿಂದೂ ದೇವರು ರಾಮನಿಗೆ ಅವಮಾನ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ನಂತರ ಅದಕ್ಕೆ ನಿರಾಣಿ, ಫೇಸ್ಬುಕ್ ಹ್ಯಾಕ್ ಮಾಡಲಾಗಿದೆ ಎಂದು ಸಮಜಾಯಿಸಿ ನೀಡಿದ್ದರು.

ಬಿ.ಎಸ್. ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಮುರುಗೇಶ್ ನಿರಾಣಿ ಹೆಸರು ಕೇಳಿ ಬಂದಿತ್ತು. ಅಚ್ಚರಿ ಬೆಳವಣಿಗೆಯಲ್ಲಿ ಬಸವರಾಜ ಬೊಮ್ಮಾಯಿಯವರಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿತ್ತು. ನಂತರ ಬೊಮ್ಮಾಯಿ ಸಂಪುಟದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಸ್ಥಾನ ಪಡೆದಿದ್ದಾರೆ.
ಮರಳಿ ಟ್ವಿಟ್ಟರ್ ಖಾತೆ ಪಡೆದ ನಿರಾಣಿ
ಹೊರದೇಶದ ಅಪರಿಚಿತರಿಂದ ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್ ಮಾಡಲಾಗಿತ್ತು. ಆದರೆ ಮರಳಿ ಅಧಿಕೃತ ಟ್ವಿಟ್ಟರ್ ಖಾತೆ ಪಡೆದುಕೊಂಡಿದ್ದು, "ಹ್ಯಾಕರ್ಗಳು ಇಂದು ನನ್ನನ್ನು ಹ್ಯಾಕರ್ನಂತೆ ಯೋಚಿಸುವಂತೆ ಮಾಡಿದರು. ಪ್ರತಿ ಯಶಸ್ವಿ ಹ್ಯಾಕರ್ ಹಿಂದೆ, ಹ್ಯಾಕ್ ಅನ್ನು ಅರ್ಥಮಾಡಿಕೊಳ್ಳಲು ಇನ್ನಷ್ಟು ಯಶಸ್ವಿ ಡಿ-ಕೋಡರ್ ಇರುತ್ತಾನೆ. ನಾನು ಮತ್ತೆ ಟ್ವಿಟ್ಟರ್ಗೆ ಬಂದಿದ್ದೇನೆ," ಎಂದು ಹ್ಯಾಕರ್ಗಳಿಗೆ ಟಾಂಗ್ ನೀಡಿದ್ದಾರೆ.
Recommended Video
-
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ












Click it and Unblock the Notifications