ಸಚಿವ ಟಿಬಿ ಜಯಚಂದ್ರ ವಿರುದ್ಧ ಕೆರೆ ಅತಿಕ್ರಮಣ ದೂರು
ಬೆಂಗಳೂರು, ಆಗಸ್ಟ್ 01 : ಮಳವಳ್ಳಿ ಚಿಕ್ಕಣ್ಣ ಚಾರಿಟೀಸ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿಯಾಗಿರುವ ರಾಜ್ಯ ಕಾನೂನು ಸಚಿವ ಟಿ.ಬಿ.ಜಯಚಂದ್ರ ವಿರುದ್ಧ ಭೂಕಬಳಿಕೆ ಆರೋಪ ಕೇಳಿಬಂದಿದೆ.
ಮಳವಳ್ಳಿ ಚಿಕ್ಕಣ್ಣ ಚಾರಿಟೀಸ್ ಟ್ರಸ್ಟ್ ಮೂಲಕ ಸರಕಾರಿ ಕೆರೆ ಅತಿಕ್ರಮಣ ಮಾಡಿದ್ದಾರೆಂದು ಸಚಿವ ಜಯಚಂದ್ರ ವಿರುದ್ಧ ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿಗೌಡ ಎನ್ನುವರು ದೂರು ದಾಖಲಿಸಿದ್ದಾರೆ.

ಬೆಂಗಳೂರು ಉತ್ತರ ತಾಲೂಕಿನ ಯಶವಂತಪುರ ಹೋಬಳಿಯ ಉಲ್ಲಾಳದಲ್ಲಿ 24 ಎಕರೆ 12 ಗುಂಟೆಯಷ್ಟು ವಿಸ್ತೀರ್ಣವಿರುವ ಸರಕಾರಿ ಕೆರೆಯಲ್ಲಿ 15ಗುಂಟೆಯಷ್ಟು ಜಮೀನನ್ನು ಅತಿಕ್ರಮಣ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಹಾಸ್ಟೆಲ್ ನಿರ್ಮಿಸಲೆಂದು 15 ಗುಂಟೆ ಪ್ರದೇಶವನ್ನು ಒತ್ತುವರಿ ಮಾಡಿಕೊಂಡು ಕಾಂಪೌಂಡ್ ನಿರ್ಮಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.












Click it and Unblock the Notifications