Get Updates
Get notified of breaking news, exclusive insights, and must-see stories!

karnataka Legislative Council Election: ಪರಿಷತ್ ಚುನಾವಣೆ: ಇಂದು ಸಿಎಂ ಡಿಸಿಎಂ ದೆಹಲಿಗೆ- ವಿಮಾನದಲ್ಲೇ ಮೀಟಿಂಗ್!

ಬೆಂಗಳೂರು ಮೇ 28: ಮೇಲ್ಮನೆ ಅಭ್ಯರ್ಥಿ ಘೋಷಣೆಗೆ ಇಂದು ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು ವಿಮಾನದಲ್ಲೇ ಸಭೆ ನಡೆಯುವ ಸಾಧ್ಯತೆ ಇದೆ.

ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲು ಇಂದು ಬೆಳಗ್ಗೆ 11ಕ್ಕೆ ವಿಶೇಷ ವಿಮಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಲಿದ್ದಾರೆ.

karnataka legislative council election Siddaramaiah DK Shivakumar to Delhi today - meeting in plane

ಜೂನ್ 13 ರಂದು ವಿಧಾನಸಭೆಯಿಂದ ವಿಧಾನಪರಿಷತ್ತಿನ 11 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಸ್ಥಾನದ ಬಲದ ಆಧಾರದ ಮೇಲೆ ಕಾಂಗ್ರೆಸ್‌ ಪಕ್ಷ ಏಳು ಮಂದಿಯನ್ನು ಆಯ್ಕೆ ಮಾಡಲು ಅವಕಾಶವಿದೆ.

ಈ ಏಳು ಸ್ಥಾನಗಳಿಗೆ ಆಕಾಂಕ್ಷಿಗಳ ಸಂಖ್ಯೆ ವಿಪರೀತವಾಗಿರುವುದರಿಂದ ಸಂಭಾವ್ಯರ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳದೆ ಉಭಯ ನಾಯಕರು ವಿಮಾನ ಹತ್ತಲಿದ್ದಾರೆ ಮತ್ತು ವಿಮಾನದಲ್ಲೇ ಈ ಬಗ್ಗೆ ಮೊದಲ ಬಾರಿಗೆ ಚರ್ಚೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಆಕಾಂಕ್ಷಿಗಳ ಸಂಖ್ಯೆ ಶತಕವನ್ನು ದಾಟಿದೆ. ಹೀಗಾಗಿ ಯಾವ ಯಾವ ಸಮುದಾಯಕ್ಕೆ ಹುದ್ದೆ ನೀಡಬೇಕು ಎಂಬುದನ್ನು ಮಾತ್ರ ಸಿದ್ದಪಡಿಸಿಕೊಂಡು ಉಭಯ ನಾಯಕರು ದೆಹಲಿಗೆ ತೆರಳಿದ್ದಾರೆ. ನೂರಕ್ಕೂ ಹೆಚ್ಚಿರುವ ಆಕಾಂಕ್ಷಿಗಳ ಸಂಖ್ಯೆಯನ್ನು ಜರಡಿ ಮಾಡಿ ಅಂತಿಮವಾಗಿ ಹೈಕಮಾಂಡ್ ಮುಂದೆ ಚರ್ಚೆ ಮಾಡುವ ವೇಳೆಗೆ 15 ರಿಂದ 20ರ ಪಟ್ಟಿ ಸಿದ್ಧಪಡಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಈ ಪಟ್ಟಿಯೊಂದಿಗೆ ಮಂಗಳವಾರ ಸಂಜೆ ಅಥವಾ ರಾತ್ರಿ ಹೈಕಮಾಂಡ್‌ನ ನಾಯಕರೊಂದಿಗೆ ಸಂಭವನೀಯ ಆಯ್ಕೆ ಬಗ್ಗೆ ಉಭಯ ನಾಯಕರು ಚರ್ಚಿಸುವರು ಎಂದು ಮೂಲಗಳು ಹೇಳಿವೆ.

ಯಾರೆಲ್ಲಾ ಪಕ್ಕಾ?

ಸಂಭವನೀಯರ ಪೈಕಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ, ಸಚಿವ ಬೋಸರಾಜು ಮತ್ತು ಒಕ್ಕಲಿಗರ ಪೈಕಿ ಕೆ.ಗೋವಿಂದರಾಜು ಅಥವಾ ವಿನಯ ಕಾರ್ತಿಕ್ ಅವರ ಹೆಸರು ಮಾತ್ರ ಗಟ್ಟಿಯಾಗಿ ಕೇಳಿಬರುತ್ತಿದೆ.

ಈ ಪೈಕಿ ಯತೀಂದ್ರ ಹಾಗೂ ಬೋಸರಾಜು ಅವರ ಹೆಸರು ಪಕ್ಕಾ ಎನ್ನಲಾಗುತ್ತಿದೆ. ಇನ್ನು ಒಕ್ಕಲಿಗರಲ್ಲಿ ಕೆ. ಗೋವಿಂದರಾಜು ಹಾಗೂ ವಿನಯ ಕಾರ್ತಿಕ್ ಹೆಸರು ಇದ್ದರೂ ದೆಹಲಿ ಮಟ್ಟದಲ್ಲಿ ಕೆ.ಗೋವಿಂದ ರಾಜು ಅವರು ಹೊಂದಿರುವ ಪ್ರಭಾವದ ಹಿನ್ನೆಲೆಯಲ್ಲಿ ಅವರ ಹೆಸರು ಅಂತಿಮಗೊಳ್ಳುವ ಸಾಧ್ಯತೆ ಇದೆ.

ಜಾತಿ ಲೆಕ್ಕಾಚಾರದ ಪ್ರಕಾರ ಹಿಂದುಳಿದವರಿಗೆ ಎರಡು, ಒಕ್ಕಲಿಗ, ಮುಸ್ಲಿಂ, ಕ್ರಿಶ್ಚಿಯನ್, ಎಸ್ಸಿ, ಎಸ್ಟಿ ಸಮುದಾಯಗಳಿಗೆ ತಲಾ ಒಂದು ಸ್ಥಾನ ದೊರೆಯಲಿದೆ. ಲಿಂಗಾಯತರಿಗೂ ಒಂದು ಸ್ಥಾನ ದೊರೆಯಲಿದೆ. ಆದರೆ ಅದು ಈಗ ಅಲ್ಲ.

ಬದಲಾಗಿ ಜಗದೀಶ್ ಶೆಟ್ಟರ್ ಅವರಿಂದ ತೆರವಾಗಿರುವ ಸ್ಥಾನಕ್ಕೆ ಶೀಘ್ರದಲ್ಲೇ ನಡೆಯುವ ಪ್ರತ್ಯೇಕ ಚುನಾವಣೆ ವೇಳೆ ಆ ಸ್ಥಾನವನ್ನು ಲಿಂಗಾಯತರಿಗೆ ನೀಡಲಾಗುವುದು ಎಂದು ಮೂಲಗಳು ಹೇಳಿವೆ.

ಇನ್ನೂ ಏಳು ಸ್ಥಾನಗಳ ಪೈಕಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್‌ನ ಪ್ರಮುಖ ನಾಯಕರು ಸೂಚಿಸುವ ಹೆಸರುಗಳಿಗೆ ಆಧ್ಯತೆ ದೊರೆಯಲಿದೆ. ಹೀಗಾಗಿ ಈ ನಾಯಕರು ತಮ್ಮ ಕೋಟಾ ಹೊಂದಿದ್ದಾರೆ ಎನ್ನಲಾಗುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+