ರಾಜ್ಯದ ಮುಂದಿನ ಜಂಟಿ ಅಧಿವೇಶನ ಜೂನ್ 15 ನಂತರ
ಬೆಂಗಳೂರು, ಮೇ8: ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನವು ಜೂನ್ 15ರ ನಂತರ ಜುಲೈ ತಿಂಗಳವರೆಗೂ ಒಟ್ಟು 30 ದಿನಗಳ ಕಾಲ ನಡೆಯಲಿದೆ. ಅಧಿವೇಶನದ ಸಂಬಂಧ ನಡೆದಿರುವ ಸಿದ್ಧತೆಗಳ ಬಗ್ಗೆ ವಿಧಾನ ಪರಿಷತ್ ಸಭಾಪತಿ ಡಿಎಚ್ ಶಂಕರಮೂರ್ತಿ ಅವರು ಗುರುವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.
ವಿಧಾನ ಪರಿಷತ್ ನವೀಕರಣ ಕಾರ್ಯ ನಡೆಯುತ್ತಿದ್ದು, ಜೂನ್ 12 ರ ವೇಳೆಗೆ ಅದು ಸಂಪೂರ್ಣಗೊಳ್ಳಲಿದೆ. ಜೂನ್ 15ರ ಅಧಿವೇಶನ ಆರಂಭಿಸಿ 30 ದಿನಗಳ ಕಾಲ ನಡೆಸಲು ಸಕಲ ಸಿದ್ಧತೆ ನಡೆದಿದೆ ಎಂದು ಡಿಎಚ್ ಶಂಕರಮೂರ್ತಿ ಅವರು ತಿಳಿಸಿದ್ದಾರೆ.

ಫೆಬ್ರವರಿಯಲ್ಲಿ ವಿಧಾನ ಸಭಾಧ್ಯಕ್ಷರೊಂದಿಗೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದ ಸಂದರ್ಭದಲ್ಲಿ ಅವರು 30 ದಿನಗಳ ಕಾಲ ಅಧಿವೇಶನ ನಡೆಸಲು ಸೂಚಿಸಿದ್ದರು. ಅದರಂತೆ ಎಲ್ಲ ಸಿದ್ಧತೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ಜೂನ್ ತಿಂಗಳಲ್ಲಿ ನಾಮಕರಣ ಸದಸ್ಯರು, ವಿಧಾನಸಭೆಯಿಂದ ವಿಧಾನ ಪಕ್ಷಕ್ಕೆ ಚುನಾಯಿತರಾದವರು, ಶಿಕ್ಷಕರು, ಪದವೀಧರರಿಂದ 16 ಸ್ಥಾನಗಳು ಖಾಲಿಯಾಗುತ್ತವೆ. ಅವುಗಳನ್ನು ಭರ್ತಿ ಮಾಡಲು ಎಲ್ಲ ರೀತಿಯ ಸಿದ್ಧತೆ ನಡೆಸಲಾಗಿದೆ.
40 ವರ್ಷಗಳಷ್ಟು ಹಳೆಯದಾಗಿರುವ ವಿಧಾನ ಪರಿಷತ್ ಸಭಾಂಗಣವನ್ನು ನವೀಕರಣ ಮಾಡಲಾಗುತ್ತಿದ್ದು, ಮೈಕ್ ಗಳು, ಕಾರ್ಪೆಟ್, ಬೆಳಕಿನ ವ್ಯವಸ್ಥೆ, ಹವಾನಿಯಂತ್ರಣ ವ್ಯವಸ್ಥೆಗಳನ್ನು ಆಧುನೀಕರಣಗೊಳಿಸಲಾಗುತ್ತಿದೆ ಎಂದೂ ಅವರು ಮಾಹಿತಿ ನೀಡಿದರು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್












Click it and Unblock the Notifications