ಲೋಕಾಯುಕ್ತ ಬಲೆಗೆ ಮತ್ತೊಂದು ಮಿಕ: ಬೆಂಗಳೂರಿನಲ್ಲಿ ಲಂಚ ಪಡೆಯುತ್ತಿರುವಾಗಲೇ ಸಿಕ್ಕು ಬಿದ್ದ ಅಧಿಕಾರಿ- ಯಾರದು ತಿಳಿಯಿರಿ

ಬೆಂಗಳೂರು, ಮಾರ್ಚ್‌ 04: ಕರ್ನಾಟಕದಲ್ಲಿ ಲೋಕಾಯುಕ್ತ ದಾಳಿಗಳು ಮುಂದುವರಿದಿವೆ. ಎರಡು ದಿನಗಳ ಹಿಂದೆ ಲೋಕಾಯುಕ್ತ ಅಧಿಕಾರಿಗಳು ಚೆನ್ನಗಿರಿ ಬಿಜೆಪಿ ಶಾಸಕ ಮಾಡಾಳು ವಿರುಪಾಕ್ಷಪ್ಪ ಅವರ ಪುತ್ರ ಪ್ರಶಾಂತ್‌ ನಿವಾಸದ ಮೇಲೆ ದಾಳಿ ಮಾಡಿದ್ದರು. ಆಗ ಅವರಿಗೆ ಆರು ಕೋಟಿ ನಗದು ರೂಪದ ಹಣ ದೊರೆತಿತ್ತು. ಇದು ದೇಶದಾದ್ಯಂತ ಸುದ್ದಿ ಮಾಡಿತ್ತು.

ಈಗ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಂತಹುದೇ ದಾಳಿಯೊಂದನ್ನು ಲೋಕಾಯುಕ್ತರು ಕೈಗೊಂಡಿದ್ದಾರೆ. ಈ ಭಾರೀ ಅಧಿಕಾರಿಯೊಬ್ಬನನ್ನು ಬಲೆಗೆ ಕೆಡವಿದ್ದಾರೆ. ಲಂಚ ಪಡೆಯುತ್ತಿರುವಾಗಲೇ ಅಧಿಕಾರಿ ಲೋಕಾಯುಕ್ತರಿಗೆ ಸಿಕ್ಕು ಬಿದ್ದಿದ್ದಾನೆ. ಒಂದೇ ವಾರದಲ್ಲಿ ಲೋಕಾಯುಕ್ತರು ಮತ್ತೊಂದು ಯಶಸ್ಸು ಕಂಡಿದ್ದಾರೆ.

 Karnataka Lokayukta Bangalore City police Trapped BBMP Health Inspector

ಕರ್ನಾಟಕ ಲೋಕಾಯುಕ್ತಾ ಬೆಂಗಳೂರು ನಗರ ಪೊಲೀಸರು ಸಿವಿ ರಾಮನ್ ನಗರದಲ್ಲಿ ದಾಳಿ ನಡೆಸಿದ್ದಾರೆ. ಈ ಬಾರಿ ಅವರ ಕಣ್ಣು ತಿರುಗಿದ್ದು ಹೆಲ್ತ್‌ ಇನ್ಸ್‌ಪೆಕ್ಟರ್‌ ಒಬ್ಬರ ಮೇಲೆ. 18 ಸಾವಿರ ರೂಪಾಯಿ ಲಂಚ ಸಂಗ್ರಹಿಸುವಾಗ ಬಿಬಿಎಂಪಿ ಹೆಲ್ತ್ ಇನ್ಸ್‌ಪೆಕ್ಟರ್ ರಾಮಯ್ಯ (ವಾರ್ಡ್ ಸಂಖ್ಯೆ 58) ಸಿಕ್ಕಿಬಿದ್ದಿದ್ದಾರೆ. ಅವರು ಸಿವಿ ರಾಮನ್ ನಗರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಸ್ಪಾ ಒಂದರ ಪರವಾನಗಿಯನ್ನು ನವೀಕರಿಸಲು ಲಂಚವನ್ನು ಕೇಳಿದ್ದರು. ಈ ಮಾಹಿತಿ ಲೋಕಾಯುಕ್ತ ಪೊಲೀಸರಿಗೆ ಲಭ್ಯವಾಗಿತ್ತು.

ಹೆಲ್ತ್‌ ಇನ್ಸ್‌ಪೆಕ್ಟರ್‌ ರಾಮಯ್ಯ ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಹಾಕಿದ್ದು, ಲೋಕಾಯುಕ್ತ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಅವರ ನಿವಾಸದ ಮೇಲೆಯೂ ದಾಳಿ ನಡೆಸುವ ಸಂಭವಗಳು ಹೆಚ್ಚಿವೆ ಎಂದು ವರದಿಯಾಗಿದೆ.

 Karnataka Lokayukta Bangalore City police Trapped BBMP Health Inspector

ಬಿಜೆಪಿ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಮಗ ಕೆಎಎಸ್‌ ಅಧಿಕಾರಿ ಪ್ರಶಾಂತ್‌ ₹ 40 ಲಕ್ಷ ಲಂಚವನ್ನು ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಇದಾದ ಒಂದು ದಿನದ ಬಳಿಕ, ಪ್ರಶಾಂತ್‌ ನಿವಾಸದಲ್ಲಿ ₹ 6 ಕೋಟಿ ನಗದು ಪತ್ತೆಯಾಗಿದೆ. ಸಾಬೂನು ಮತ್ತು ಡಿಟರ್ಜೆಂಟ್‌ಗಳನ್ನು ತಯಾರಿಸಲು ಅಗತ್ಯವಾದ ಕಚ್ಚಾ ವಸ್ತುಗಳಿಗೆ ಒಪ್ಪಂದವನ್ನು ಮಾಡಿಕೊಳ್ಳಲು ಪ್ರಶಾಂತ್‌ ತೊಂಬತ್ತು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಎಂಬ ಆರೋಪವಿದೆ.

ಮಾಡಾಳ್‌ ವಿರುಪಕ್ಷಪ್ಪ ಕರ್ನಾಟಕದ ದಾವಣಗೆರೆ ಜಿಲ್ಲೆಯ ಚನ್ನಗಿರಿಯ ಶಾಸಕರಾಗಿದ್ದಾರೆ. ಅವರು ಮೊದಲ ಬಾರಿಗೆ 2008 ರಲ್ಲಿ ಚನ್ನಗಿರಿ ಕ್ಷೇತ್ರದಿಂದ ಆಯ್ಕೆಯಾದರು. 2013 ರ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ವಡ್ನಾಲ್ ರಾಜಣ್ಣ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಅವರನ್ನು 2018 ರಲ್ಲಿ ಮತ್ತೆ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾದರು.

 Karnataka Lokayukta Bangalore City police Trapped BBMP Health Inspector

ಎಡಿಆರ್ ಡೇಟಾದ ಪ್ರಕಾರ, 2018 ರ ಚುನಾವಣೆಗೆ ನಾಮನಿರ್ದೇಶನ ಸಲ್ಲಿಸಿದಾಗ ಮಾಡಾಳ್‌ ವಿರುಪಕ್ಷಪ್ಪ ಅವರು 5.73 ಕೋಟಿ ಮೌಲ್ಯದ ಆಸ್ತಿಗಳನ್ನು ಹೊಂದಿದ್ದಾಗಿ ಮಾಹಿತಿ ಸಲ್ಲಿಸಿದ್ದರು.

ಅವರು ಪ್ರಸ್ತುತ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನುಗಳು ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ನ ಅಧ್ಯಕ್ಷರಾಗಿದ್ದರು. ಇದು ಪ್ರಸಿದ್ಧ ಮೈಸೂರು ಸ್ಯಾಂಡಲ್ ಸೋಪ್ ಅನ್ನು ತಯಾರಿಸುತ್ತದೆ. ಅವರ ಮಗ ಪ್ರಶಾಂತ್ ಲೋಕಾಯುಕ್ತ ಬಲೆಗೆ ಬಿದ್ದ ನಂತರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಲೋಕಾಯುಕ್ತ ದಾಳಿಗೂ ತಮಗೂ ಯಾವುದೇ ಸಂಬಂಧ ಇಲ್ಲವೆಂದು ಎಂದು ಮಾಡಾಳ್‌ ಹೇಳಿಕೊಂಡಿದ್ದಾರೆ. 'ನನಗೂ ಲೋಕಾಯುಕ್ತ ದಾಳಿಗೆ ಯಾವುದೇ ಸಂಬಂಧವಿಲ್ಲ. ಇದು ನನ್ನ ಮತ್ತು ನನ್ನ ಕುಟುಂಬದ ವಿರುದ್ಧದ ಪಿತೂರಿ' ಎಂದು ಹೇಳಿದ್ದಾರೆ.

ಈ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್‌ ಮಾಡಾಳ್‌ ಬಂಧನಕ್ಕೆ ಆಗ್ರಹಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್‌ ನಾಯಕರು ಒತ್ತಾಯಿಸಿದ್ದಾರೆ. ಇಂದು ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+