ಅಬಕಾರಿ ಕಚೇರಿಗಳಲ್ಲಿ ಲೋಕಾಯುಕ್ತಕ್ಕೆ ಸಿಕ್ಕಿದ್ದು ಕೇಳಿದ್ರೆ ಶಾಕ್ ಆಗ್ತೀರ
ಬೆಂಗಳೂರಿನ ವಿವಿಧೆಡೆ ಇರುವ ಅಬಕಾರಿ ಕಚೇರಿಗಳ ಮೇಲೆ ನಿನ್ನೆ ಲೋಕಾಯುಕ್ತ ದಾಳಿ ನಡೆದಿದೆ. ಅಬಕಾರಿ ಕಚೇರಿಗಳಲ್ಲಿ ದಾಳಿ ವೇಳೆ ಸಿಕ್ಕಿರುವ ವಸ್ತುಗಳನ್ನು ಕಂಡು ಲೋಕಾಯುಕ್ತ ಅಧಿಕಾರಿಗಳು ದಂಗಾಗಿದ್ದಾರೆ. ಹಲವು ಕಚೇರಿಗಳಲ್ಲಿ ಗಾಂಜಾ ಹಾಗೂ ದಾಖಲೆ ಇಲ್ಲದೆ ಮದ್ಯ ಪತ್ತೆಯಾಗಿದೆ.
ಕೆಲವು ಅಧಿಕಾರಿಗಳ ರೂಂಗಳಲ್ಲೇ ಡ್ರಾಯರ್ಗಳಲ್ಲಿ ಗಾಂಜಾ ತುಂಬಿಸಿದ್ದ ಸಿಗರೇಟ್ಗಳು ಕೂಡ ಸಿಕ್ಕಿವೆ ಎಂದು ವರದಿಯಾಗಿದೆ. ಅಬಕಾರಿ ಕಚೇರಿಗಳಲ್ಲಿನ ಅವ್ಯವಸ್ಥೆ ಹಾಗೂ ಸಾರ್ವಜನಿಕರಿಗೆ ಕಿರುಕುಳ ಸಂಬಂಧ ಲೋಕಾಯುಕ್ತಕ್ಕೆ ನೂರಾರು ದೂರುಗಳು ಬಂದಿದ್ದವು. ಹಾಗಾಗಿ ಸ್ವಯಂ ದೂರು ದಾಖಲಿಸಿಕೊಂಡು ನಿನ್ನೆ ಏಕಕಾಲದಲ್ಲಿ 62 ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿತ್ತು.

ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್, ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರ ನೇತೃತ್ವದಲ್ಲಿ ಯಶವಂತಪುರ ಮತ್ತು ಬ್ಯಾಟರಾಯನಪುರ ಭಾಗದ ಅಬಕಾರಿ ಕಚೇರಿಗಳಲ್ಲಿ ದಾಳಿ ನಡೆದಿದೆ. ಈ ವೇಳೆ ಇಲ್ಲಿನ ಕಚೇರಿಗಳಲ್ಲಿ ಅಧಿಕಾರಿಗಳ ರೂಮುಗಳಲ್ಲೇ ದಾಖಲೆ ಇಲ್ಲದ ಎಣ್ಣೆ ಬಾಟಲಿಗಳು, ಕೆ.ಜಿಗಟ್ಟಲೆ ಗಾಂಜಾ, ಡ್ರಾಯರ್ಗಳಲ್ಲಿ ಗಾಂಜಾ ತುಂಬಿಸಿದ್ದ ಸಿಗರೇಟ್ಗಳನ್ನು ಕಂಡು ಶಾಕ್ ಆಗಿದ್ದಾರೆ.
ಅಬಕಾರಿ ಅಧಿಕಾರಿಗಳು ಕಚೇರಿಯಲ್ಲೇ ಮದ್ಯ ಸೇವಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಕೆಲವು ಬಾಟಲಿಗಳಲ್ಲಿ ಮದ್ಯ ಪೂರ್ಣವಾಗಿ ಖಾಲಿಯಾಗಿದ್ದು, ಇನ್ನು ಕೆಲವುದರಲ್ಲಿ ಅರ್ಧಂಬರ್ಧ ಎಣ್ಣೆ ಮಿಕ್ಕಿತ್ತು. ಹಾಗಾಗಿ ಅಧಿಕಾರಿಗಳೇ ಇದನ್ನು ಕಚೇರಿಗಳಲ್ಲಿ ಸೇವಿಸಿರುವುದಾಗಿ ಶಂಕಿಸಲಾಗಿದೆ. ಮತ್ತೊಬ್ಬ ಸಿಬ್ಬಂದಿಯ ಬ್ಯಾಗ್ನಲ್ಲೂ ಮದ್ಯದ ಬಾಟಲ್ ಪತ್ತೆಯಾಗಿದ್ದು, ಇದನ್ನು ತನ್ನ ಸ್ನೇಹಿತ ನೀಡಿದ್ದಾಗಿ ಹೇಳಿದ್ದಾರಂತೆ.
ಸದ್ಯ ದಾಳಿ ವೇಳೆ ಸಿಕ್ಕಿರುವ ಎಲ್ಲ ಮದ್ಯದ ಬಾಟಲ್, ಗಾಂಜಾ, ಸಿಗರೇಟ್ಗಳನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಈ ಬಗ್ಗೆ ಸ್ಪಷ್ಟ ವಿವರಣೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇನ್ನೂ ಕೆಲವು ಕಚೇರಿಗಳಲ್ಲಿ ಅಧಿಕಾರಿಗಳೇ ಇರಲಿಲ್ಲ. ಫೋನ್ ಮಾಡಿದರೂ ಸಂಪರ್ಕಕ್ಕೆ ಬರಲಿಲ್ಲ. ಹಾಗಾಗಿ ಆ ಕಚೇರಿಗಳ ದಾಖಲೆಗಳನ್ನು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ.

ಬ್ಯಾಟರಾಯನಪುರ ಅಬಕಾರಿ ಕಚೇರಿಯಲ್ಲಿ 2 ಲಕ್ಷ ರೂಪಾಯಿ ಹಣ ಪತ್ತೆಯಾಗಿದೆ. ಸ್ಕೂಟರ್ ಡಿಕ್ಕಿಯೊಂದರಲ್ಲಿ 1 ಲಕ್ಷ ರೂಪಾಯಿ ಕೂಡ ಸಿಕ್ಕಿದೆ. ಆದರೆ ಈ ಹಣಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲೆಗಳು ಸಿಕ್ಕಿಲ್ಲ. ಅಬಕಾರಿ ಕಚೇರಿಗಳಲ್ಲೂ ದಾಖಲೆಗಳು ಲಭ್ಯವಾಗಿಲ್ಲ. ಹಾಗಾಗಿ ಲೋಕಾಯುಕ್ತ ಅಧಿಕಾರಿಗಳು ಅಲ್ಲಿ ಸಿಕ್ಕ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕೆಲವು ಕಚೇರಿಗಳಲ್ಲಿ ಇಲಾಖೆಗೆ ಸಂಬಂಧಿಸಿದ ಮಾಹಿತಿಯನ್ನೇ ಪ್ರದರ್ಶಿಸಿಲ್ಲ. ಸಾರ್ವಜನಿಕರು ಲೋಕಾಯುಕ್ತಕ್ಕೆ ದೂರು ನೀಡಲು ಮೊಬೈಲ್ ಸಂಖ್ಯೆಯನ್ನು ಸಹ ಹಾಕಿರಲಿಲ್ಲ. ಈ ಬಗ್ಗೆ ಅಲ್ಲಿದ್ದವರನ್ನು ತರಾಟೆಗೆ ತೆಗೆದುಕೊಂಡು ವಿವರಣೆ ಕೇಳಲಾಗಿದೆ. ನಿನ್ನೆ ಇಡೀ ದಿನ ಲೋಕಾಯುಕ್ತ ಅಧಿಕಾರಿಗಳು ಅಬಕಾರಿ ಕಚೇರಿಗಳನ್ನು ಬೆಂಡೆತ್ತಿದ್ದಾರೆ. ಕಚೇರಿಗಳಲ್ಲಿ ಅಧಿಕಾರಿಗಳ ಅಶಿಸ್ತಿಗೆ ಬೇಸರ ಕೂಡ ವ್ಯಕ್ತಪಡಿಸಿದ್ದಾರೆ. ಅಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ಸೂಚಿಸಲಾಗಿದ್ದು, ಬಳಿಕ ಅವರ ವಿರುದ್ಧ ಕ್ರಮ ಜರುಗಿಸಲಿದೆ ಎಂದು ಹೇಳಲಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications