ಕರ್ನಾಟಕದಲ್ಲಿ ವಾಹನಗಳ ಪ್ಲಾಸ್ಟಿಕ್ ಬಿಡಿಭಾಗ ತಯಾರಿಕಾ ಘಟಕ: ಎಲ್ಲಿ? ಉದ್ಯೋಗ ಸೃಷ್ಟಿ, ಯೋಜನೆ ಪೂರ್ಣ ಮಾಹಿತಿ
ಬೆಂಗಳೂರು, ನವೆಂಬರ್ 29: ಕರ್ನಾಟಕದಲ್ಲಿ ವಾಹನ ಪ್ಲಾಸ್ಟಿಕ್ ಬಿಡಿಭಾಗ ತಯಾರಿಕಾ ಘಟಕ ಸ್ಥಾಪನೆ ಕಾಲ ಸನ್ನಿಹಿತವಾಗಿದೆ. ಈ ಯೋಜನೆ ಸಂಬಂಧ ಕೊರಿಯಾ ಮೂಲದ ನಿಫ್ಕೊ ಕಂಪನಿಯ ಅಂಗಸಂಸ್ಥೆಯಾಗಿರುವ ನಿಫ್ಕೊ ಸೌತ್ ಇಂಡಿಯಾ ಮ್ಯಾನ್ಯುಫ್ಯಾಕ್ಚರಿಂಗ್ ಪ್ರೈವೇಟ್ ಲಿಮಿಟೆಡ್ ಜೊತೆ ಕರ್ನಾಟಕ ಸರ್ಕಾರವು ಬುಧವಾರ ಒಪ್ಪಂದಕ್ಕೆ ಸಹಿ ಹಾಕಿವೆ. ಈ ಯೋಜನೆಯಿಂದ ಆಗುವ ಲಾಭ, ಉದ್ಯೋಗ ಸೃಷ್ಟಿ, ಸ್ಥಳ, ಅಂದಾಜು ವೆಚ್ಚದ ಮಾಹಿತಿ ಇಲ್ಲಿ ತಿಳಿಯಿರಿ.
ಬೆಂಗಳೂರಿನಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ ಅವರು, ನಿಫ್ಕೊ ಸೌತ್ ಇಂಡಿಯಾ ಮ್ಯಾನುಫ್ಯಾಕ್ಚರಿಂಗ್ ಪ್ರೈವೇಟ್ ಲಿಮಿಟೆಡ್ನ ಅಧ್ಯಕ್ಷ ಹ್ಯುನ್-ಡಾನ್ ಚೋಯ್ ಅವರ ಜೊತೆ ವಿಸ್ತೃತವಾಗಿ ಚರ್ಚಿಸಿದರು. ಕಂಪನಿಗೆ ರಾಜ್ಯ ಸರ್ಕಾರವು ಕೊಡಮಾಡಲಿರುವ ಸೌಲಭ್ಯಗಳು ಮತ್ತು ಉತ್ತೇಜನೆಗಳ ಬಗ್ಗೆ ಸಚಿವರು ಚೋಯ್ ಅವರಿಗೆ ವಿವರಿಸಿದರು. ತದನಂತರ ಸಚಿವರ ಸಮ್ಮುಖದಲ್ಲಿ 'ಎಂಒಯು'ಗೆ ಸಹಿ ಹಾಕಲಾಯಿತು.

ಈ ಒಪ್ಪಂದದ ಪ್ರಕಾರ, ನಿಫ್ಕೊ ಸೌತ್ ಇಂಡಿಯಾ ಮ್ಯಾನುಫ್ಯಾಕ್ಚರಿಂಗ್ ಕಂಪನಿಯು, ವಾಹನಗಳ ಪ್ಲಾಸ್ಟಿಕ್ ಬಿಡಿಭಾಗಗಳನ್ನು ತಯಾರಿಸುವ ಹೊಸ ಘಟಕವನ್ನು ಗೌರಿಬಿದನೂರಿನಲ್ಲಿ ಸ್ಥಾಪಿಸಲು ₹288 ಕೋಟಿ ಹೂಡಿಕೆ ಮಾಡಲಿದೆ. ಈ ತಯಾರಿಕಾ ಘಟಕದಲ್ಲಿ 400 ಜನರಿಗೆ ಉದ್ಯೋಗ ಅವಕಾಶಗಳು ಲಭ್ಯ ಇರಲಿವೆ. ಇದರಲ್ಲಿ ಶೇ.65ರಷ್ಟು ಉದ್ಯೋಗಗಳು ಮಹಿಳೆಯರಿಗೆ ದೊರೆಯಲಿವೆ. ಈ ಯೋಜನೆಯು ಐದು ವರ್ಷಗಳ ಅವಧಿಯಲ್ಲಿ ಪೂರ್ಣಗೊಳ್ಳಲಿದೆ ಎಂದು ರಾಜ್ಯ ಕೈಗಾರಿಕೆ ಇಲಾಖೆ ತಿಳಿಸಿದೆ.
ದಾಖಲೆ ವಿನಿಮಯ: ನಿಯಮಗಳಡಿ ನೆರವು
ಸಚಿವರ ಸಮ್ಮುಖದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್ ಸೆಲ್ವಕುಮಾರ್ ಮತ್ತು ನಿಫ್ಕೊ ಸೌತ್ ಇಂಡಿಯಾ ಮ್ಯಾನುಫ್ಯಾಕ್ಚರಿಂಗ್ ಪ್ರೈವೇಟ್ ಲಿಮಿಟೆಡ್ನ ಅಧ್ಯಕ್ಷ ಹ್ಯುನ್-ಡಾನ್ ಚೋಯ್ ಅವರು ಒಪ್ಪಂದಕ್ಕೆ ಸಹಿ ಹಾಕಿ, ದಾಖಲೆಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು.

ರಾಜ್ಯದಲ್ಲಿ ಸದ್ಯಕ್ಕೆ ಚಾಲ್ತಿಯಲ್ಲಿರುವ ನೀತಿ/ನಿಯಮಗಳು ಮತ್ತು ನಿಬಂಧನೆಗಳ ಅನುಸಾರ ಸಂಬಂಧಪಟ್ಟ ಇಲಾಖೆಗಳಿಂದ ಅಗತ್ಯ ಅನುಮತಿ /ನೋಂದಣಿ ಪಡೆಯಲು ಕರ್ನಾಟಕ ಸರ್ಕಾರವು ನಿಫ್ಕೊ ಸೌತ್ ಇಂಡಿಯಾ ಮ್ಯಾನುಫ್ಯಾಕ್ಚರಿಂಗ್ ಕಂಪನಿಗೆ ಅಗತ್ಯ ನೆರವು ಕಲ್ಪಿಸಲಿದೆ.
ಹುಂಡೈ ಮೋಟರ್ ಇಂಡಿಯಾ, ಕಿಯಾ ಮೋಟರ್ಸ್, ನಿಸಾನ್, ಫೋರ್ಡ್ ಮತ್ತು ಟೊಯೊಟಾ ಮುಂತಾದವು ನಿಫ್ಕೊದ ಭಾರತದಲ್ಲಿನ ಪ್ರಮುಖ ಗ್ರಾಹಕ ಕಂಪನಿಗಳಾಗಿವೆ. ಒಪ್ಪಂದ ಸಹಿ ಹಾಕವಾಗ ಕೈಗಾರಿಕೆ ಇಲಾಖೆಯ ಆಯುಕ್ತ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.
ಸಾವಿರಾರು ಉದ್ಯೋಗ ಸೃಷ್ಟಿ
ಬೆಂಗಳೂರಿನಲ್ಲಿ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಸಮ್ಮುಖದಲ್ಲಿ ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಒಟ್ಟು 62 ಯೋಜನೆಗಳಿಗೆ ಜಾರಿಗೆ ಸಹಿ ಹಾಕಲಾಗಿದೆ. ಇದರಿಂದ ಸುಮಾರು 10 ಸಾವಿರಕ್ಕೂ ಅಧಿಕ ಉದ್ಯೋಗಗಳು ಸೃಷ್ಟಿಯಾಗಲಿವೆ. ಈ ಮೂಲಕ ರಾಜ್ಯದಲ್ಲಿ ಕೈಗಾರಿಕೋದ್ಯಮ ಮತ್ತಷ್ಟು ಅಭಿವೃದ್ಧಿಗೊಳ್ಳಲಿದೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications