ಪೊಲೀಸರ ಮಕ್ಕಳಿಗಾಗಿ ಸಿಬಿಎಸ್ ಸಿ ಪಠ್ಯಕ್ರಮದ ಶಾಲೆ : ಸಿದ್ದರಾಮಯ್ಯ
ಪೊಲೀಸರು ದಿನದ 24 ಗಂಟೆ ದುಡಿಯುವವರು. ಅವರಿಗೆ ಖಾಸಗಿ ಜೀವನ ಕಡಿಮೆ. ಮನೆಯ ಕಡೆ ಗಮನ ಕೊಡುವುದು ಕಷ್ಟ. ಅವರ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಶಾಲೆಗಳನ್ನು ಆರಂಭಿಸಲಾಗುತ್ತಿದೆ
ಬೆಂಗಳೂರು, ಅಕ್ಟೋಬರ್ 21 : ಪೊಲೀಸರು ದಿನದ 24 ಗಂಟೆ ದುಡಿಯುವವರು. ಅವರಿಗೆ ಖಾಸಗಿ ಜೀವನ ಕಡಿಮೆ. ಮನೆಯ ಕಡೆ ಗಮನ ಕೊಡುವುದು ಕಷ್ಟ. ಅವರ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಸಿಬಿಎಸ್ ಸಿ ಪಠ್ಯಕ್ರಮದ ಶಾಲೆಗಳನ್ನು ಪೊಲೀಸರ ಮಕ್ಕಳಿಗಾಗಿ ತೆರೆಯಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಪೊಲೀಸ್ ಹುತಾತ್ಮ ದಿನವಾದ ಇಂದು ಹುತಾತ್ಮ ಪೊಲೀಸರಿಗೆ ನಮನ ಸಲ್ಲಿಸಿದ ಬಳಿಕ ಮುಖ್ಯಮಂತ್ರಿಗಳು ಮಾತನಾಡುತ್ತಿದ್ದರು.[ಪೊಲೀಸ್ ಇಲಾಖೆಯಲ್ಲಿ ಅಶಿಸ್ತು ಸಹಿಸಲಾಗದು : ಸಿದ್ದರಾಮಯ್ಯ]
ಪೊಲೀಸರ ಆರೋಗ್ಯ ತಪಾಸಣೆಗೆ ಕ್ರಮ ಕೈಗೊಳ್ಳಲಾಗಿದೆ. ಕಾರ್ಯನಿಮಿತ್ತ ಬೆಂಗಳೂರಿಗೆ ಬರುವ ಸಿಬ್ಬಂದಿಗೆ 15 ಕೋಟಿ ರೂ.ವೆಚ್ಚದಲ್ಲಿ ವಸತಿ ಸೌಕರ್ಯ ಕಲ್ಪಿಸಲಾಗುತ್ತಿದೆ. ಪ್ರತಿ ಯೂನಿಟ್ ನಲ್ಲಿ ಕ್ಯಾಂಟೀನ್ ತೆರೆಯಲಾಗುತ್ತಿದೆ ಎಂದೂ ಮುಖ್ಯಮಂತ್ರಿಗಳು ಹೇಳಿದರು.

ಇತ್ತೀಚೆಗೆ ಪೊಲೀಸರು ಆತ್ಮಹತ್ಯೆ ಗೆ ಶರಣಾಗುತ್ತಿದ್ದಾರೆ. ಅದು ಹೇಡಿತನ ಎಂದು ನ್ಯಾಯಾಲಯವೇ ಹೇಳಿದೆ. ಆತ್ಮಹತ್ಯೆಗೆ ಮುನ್ನ ಕುಟುಂಬದ ಬಗ್ಗೆ ಯೋಚನೆ ಮಾಡಬೇಕು. ಮಾಡಿದರೆ ಆತ್ಮಹತ್ಯೆಯ ದುಸ್ಸಾಹಸಕ್ಕೆ ಕೈ ಹಾಕುವುದಿಲ್ಲ ಎಂದು ಮುಖ್ಯಮಂತ್ರಿಗಳು ಸಲಹೆ ಮಾಡಿದರು.
Participated in Police Memorial Day celebration at KSRP parade ground in Koramangala, Bengaluru today. pic.twitter.com/hBUBnKdc5k
— CM of Karnataka (@CMofKarnataka) October 21, 2016
ಪೊಲೀಸರು ಆತ್ಮಸ್ಥೈರ್ಯದಿಂದ ಕೆಲಸ ಮಾಡಬೇಕು. ಪೊಲೀಸರು, ರೈತರು ಯಾರೇ ಅಗಲಿ, ಆತ್ಮಹತ್ಯೆಗೆ ಶರಣಾಗಬಾರದು ಎಂದು ಕಳಕಳಿಯಿಂದ ಮನವಿ ಮಾಡುತ್ತೇನೆ ಎಂದೂ ಮುಖ್ಯಮಂತ್ರಿಗಳು ಹೇಳಿದರು.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications