Drone: ಪೊಲೀಸ್ ಇಲಾಖೆಯಲ್ಲಿ ಕೌಶಲ್ಯಪೂರ್ಣ ಡ್ರೋನ್ ಪಡೆ ಸೃಷ್ಟಿಗೆ ಆದ್ಯತೆ: ಜಿ.ಪರಮೇಶ್ವರ
ಬೆಂಗಳೂರು, ಜುಲೈ 24: ಅಪರಾಧ ತಡೆಗೆ, ಪತ್ತೆ ಕಾರ್ಯಗಳಲ್ಲಿ ಬಳಕೆ ಆಗುವ ಡ್ರೋನ್ ಸಂಖ್ಯೆಗಳನ್ನು ಪೊಲೀಸ್ ಇಲಾಖೆಯಲ್ಲಿ ಹೆಚ್ಚಿಸಲು ಗೃಹ ಇಲಾಖೆ ತಿರ್ಮಾನಿಸಿದೆ. ಡ್ರೋನ್ ತಂತ್ರಜ್ಞಾನದೊಂದಿಗ ಸಾರ್ವಜನಿಕ ಹಿತರಕ್ಷಣೆ ಮೂಲಸೌಕರ್ಯ ಹೆಚ್ಚಿಸಲಾಗುತ್ತಿದೆ. ಕರ್ನಾಟಕದ ಪ್ರತಿ ಪೊಲೀಸ್ ಠಾಣೆಯು ಡ್ರೋನ್ ತಂತ್ರಜ್ಞಾನಗಳೊಂದಿಗೆ ಸಜ್ಜುಗೊಳಿಸಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು.
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವರು, ಕಲಬುರಗಿ ಜಿಲ್ಲೆಯ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ ಅವರಿಗೆ ಸುಧಾರಿತ ಕಣ್ಗಾವಲು ಡ್ರೋನ್ಗಳನ್ನು - ನಿಂಬಲ್-ಐ ಮತ್ತು NS01 - ಹಸ್ತಾಂತರಿಸಿದರು. ಕರ್ನಾಟಕದಲ್ಲಿ ವಿನ್ಯಾಸಗೊಳಿಸಿ ತಯಾರಿಸಲಾದ ಡ್ರೋನ್ಗಳು AI-ಚಾಲಿತ ಕಣ್ಗಾವಲು ವೈಶಿಷ್ಟ್ಯಗಳನ್ನು ಹೊಂದಿವೆ. ಅವುಗಳನ್ನು ಖಾಸಗಿ ವಲಯದ ಸಿಎಸ್ಆರ್ ಸಹಕಾರದಲ್ಲಿ ನಿಯೋಜಿಸಲಾಗುತ್ತದೆ ಎಂದರು.

ಡ್ರೋನ್ಗಳು ರಾತ್ರಿ ಮತ್ತು ಹಗಲು ಕಣ್ಗಾವಲು, ವಾಹನಗಳ ನಂಬರ್ ಪ್ಲೇಟ್ ಗುರುತಿಸುವಿಕೆ, ಜನಸಂದಣಿ ಮತ್ತು ವಾಹನ ಪತ್ತೆ ಮತ್ತು ತ್ವರಿತ ಕ್ಷೇತ್ರ ನಿಯೋಜನೆ ಸೇರಿದಂತೆ ಸುಧಾರಿತ ಸೇವೆಗ ಸಹಕಾರಿಯಾಗಿವೆ. ಜಿಲ್ಲೆಗಳಾದ್ಯಂತ ಚುರುಕಾದ, ತಂತ್ರಜ್ಞಾನ-ಸಕ್ರಿಯಗೊಳಿಸಿದ ಪೊಲೀಸ್ ವ್ಯವಸ್ಥೆಗೆ ಬೆಂಬಲ ನೀಡುತ್ತವೆ.
ಕಾನೂನು ಜಾರಿಯನ್ನು ಬಲಪಡಿಸುವ ಮತ್ತು ಭವಿಷ್ಯಕ್ಕೆ ಸಿದ್ಧವಾಗಿರುವ ಕೌಶಲ್ಯಗಳೊಂದಿಗೆ ಯುವಕರನ್ನು ಸಜ್ಜುಗೊಳಿಸುವ ತನ್ನ ನಿರಂತರ ಬದ್ಧತೆಯ ಭಾಗವಾಗಿ, ಕರ್ನಾಟಕ ಸರ್ಕಾರ ಕಲಬುರಗಿಯಲ್ಲಿ ಡ್ರೋನ್ ತಂತ್ರಜ್ಞಾನ ಸಹಿತ ಸಾರ್ವಜನಿಕ ಸುರಕ್ಷತಾ ಮೂಲಸೌಕರ್ಯವನ್ನು ಹೆಚ್ಚಿಸುವುದರ ಜೊತೆಗೆ ರಾಜ್ಯಾದ್ಯಂತ ಕೌಶಲ್ಯಪೂರ್ಣ ಡ್ರೋನ್ ಕಾರ್ಯಪಡೆಗೆ ಅಡಿಪಾಯ ಹಾಕಲಾಗಿದೆ.

ಕರ್ನಾಟಕದಲ್ಲಿ ಎಲ್ಲ ಪೊಲೀಸ್ ಠಾಣೆಗಳು ಡ್ರೋನ್ ಬಳಕೆಗೆ ಸಿದ್ಧವಿರುವಂತೆ ಗಮನ ಹರಿಸಲಾಗಿದೆ. ಕೌಶಲ್ಯಯು ಪಡೆ ಹುಟ್ಟು ಹಾಕಲಾಗುತ್ತದೆ. ಕರ್ನಾಟಕ ನಿರ್ಮಿತ ಡ್ರೋನ್ಗಳ ತಂತ್ರಜ್ಞಾನವು ಸಾರ್ವಜನಿಕ ಹಿತಾಸಕ್ತಿಯನ್ನು ಹೇಗೆ ಪೂರೈಸುತ್ತದೆ ಎಂಬುದರ ಸಂಕೇತವಾಗಿದೆ ಎಂದು ಸಚಿವರು ತಿಳಿಸಿದರು.
ಕಲಬುರಗಿ: 500 ಯುವಕರಿಗೆ ಡ್ರೋನ್ ತರಬೇತಿ
ಐಟಿ ಮತ್ತು ಬಿಟಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರೂ ಆದ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಲಬುರಗಿಯಲ್ಲಿ 500 ಯುವಕರಿಗೆ ಡಿಜಿಸಿಎ ಪ್ರಮಾಣೀಕೃತ ಡ್ರೋನ್ ಕಾರ್ಯಾಚರಣೆಗಳಲ್ಲಿ ತರಬೇತಿ ನೀಡಲಾಗುವುದು. ಕೃಷಿ, ಲಾಜಿಸ್ಟಿಕ್ಸ್, ವಿಪತ್ತು ನಿರ್ವಹಣೆ ಮತ್ತು ಮೂಲಸೌಕರ್ಯ ಮೇಲ್ವಿಚಾರಣೆ ಕುರಿತ ತರಬೇತಿ ಇದಾಗಿರುತ್ತದೆ ಎಂದು ತಿಳಿಸಿದರು.
ನಮ್ಮ ತಂತ್ರಜ್ಞಾನದ ಬಲವು ಗ್ರಾಮೀಣ ಪರಿವರ್ತನೆ ಮತ್ತು ಅವಕಾಶಗಳಿಗೆ ಒಂದು ಶಕ್ತಿಯಾಗಬೇಕು. ಡ್ರೋನ್ ವಲಯವು ಜಾಗತಿಕವಾಗಿ ವೇಗವಾಗಿ ಬೆಳೆಯುತ್ತಿರುವ ಕೈಗಾರಿಕೆಗಳಲ್ಲಿ ಒಂದಾಗಿದೆ , ವಿವಿಧ ಕ್ಷೇತ್ರಗಳಲ್ಲಿ ಡ್ರೋನ್ಗಳನ್ನು ಬಳಸಿಕೊಳ್ಳಲಾಗುತ್ತಿದೆ. ಕಲಬುರಗಿಯ ಯುವಕರನ್ನು ಅತ್ಯಾಧುನಿಕ ಡ್ರೋನ್ ತಂತ್ರಜ್ಞಾನಗಳಲ್ಲಿ ಕೌಶಲ್ಯಪೂರ್ಣಗೊಳಿಸುವ ಮೂಲಕ ಅವರನ್ನು ಭವಿಷ್ಯದ ಉದ್ಯೋಗಗಳಿಗೆ ಸಿದ್ಧಪಡಿಸುವುದು. ಹೊಸ ಜೀವನೋಪಾಯಗಳು, ಸ್ಥಳೀಯ ನಾವೀನ್ಯತೆ ಮತ್ತು ಗ್ರಾಮೀಣ ತಂತ್ರಜ್ಞಾನ ಪರಿಸರ ವ್ಯವಸ್ಥೆಗಳನ್ನು ಸೃಷ್ಟಿಸಲು ನೆರವಾಗಲಿದ್ದೇವೆ.
ಇಂದಿನ ಕಾರ್ಯಕ್ರಮವು ತಂತ್ರಜ್ಞಾನ-ಚಾಲಿತ ಗ್ರಾಮೀಣ ಸಬಲೀಕರಣಕ್ಕೆ ಸರ್ಕಾರದ ಬದ್ಧತೆಯ ಪ್ರತಿಬಿಂಬವಾಗಿದೆ. ಕಲಬುರಗಿಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಲಾಗುವುದು. ಜಿಲ್ಲೆಯಲ್ಲಿ ನಾವೀನ್ಯತೆ, ಸಾರ್ವಜನಿಕ ಸೇವೆ ಮತ್ತು ಯುವ ಕೌಶಲ್ಯವು ಅರ್ಥಪೂರ್ಣ ಪರಿಣಾಮವನ್ನು ಸೃಷ್ಟಿಸಲು ಸಹಕಾರಿಯಾಗುತ್ತದೆ ಎಂದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications