ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

28 ಕೋಟಿಗೆ ಸೇಲ್ ಆರೋಪ: ಸದನಕ್ಕೆ ಬಂದಾಗ ಎಲ್ಲ ಹೇಳುತ್ತೇನೆ ಎಂದ ವಿಶ್ವನಾಥ್

|
Google Oneindia Kannada News

ಬೆಂಗಳೂರು, ಜುಲೈ 19: ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಅವರು ಬಿಜೆಪಿಗೆ ಸೇಲ್ ಆಗಿದ್ದಾರೆ ಎಂದು ಸಚಿವ ಸಾ.ರಾ. ಮಹೇಶ್ ಮಾಡಿರುವ ಆರೋಪಕ್ಕೆ ವಿಶ್ವನಾಥ್ ಕಿಡಿಕಾರಿದ್ದಾರೆ.

ಖಾಸಗಿ ವಾಹಿನಿಯೊಂದರ ಜತೆ ಮಾತನಾಡಿದ ಅವರು, ಸದನದಲ್ಲಿ ಈ ರೀತಿ ಹೇಳಿಕೆ ನೀಡಿದ ಸಾರಾ ಮಹೇಶ್ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದರು. ಅಲ್ಲದೆ, ಸದನದಲ್ಲಿ ಹಕ್ಕುಚ್ಯುತಿ ಮಂಡನೆ ಮಾಡುವುದಾಗಿಯೂ ತಿಳಿಸಿದರು.

28 ಕೋಟಿ ರೂಪಾಯಿ ಬಿಜೆಪಿ ಹಣಕ್ಕೆ ಸೇಲ್ ಆದರಾ ಎಚ್.ವಿಶ್ವನಾಥ್? 28 ಕೋಟಿ ರೂಪಾಯಿ ಬಿಜೆಪಿ ಹಣಕ್ಕೆ ಸೇಲ್ ಆದರಾ ಎಚ್.ವಿಶ್ವನಾಥ್?

'ಇದು ಸಾರಾ ಮಹೇಶ್ ಅವರು ಹೇಳಿದ್ದಲ್ಲ. ಅವರಿಂದ ಹೇಳಿಸಿದ್ದು. ಕಿಚನ್ ಕ್ಯಾಬಿನೆಟ್ ಇದೆಯಲ್ಲ, ಅವರೇ ಇದನ್ನು ಹೇಳಿಸಿರುತ್ತಾರೆ. ಅವರ ಹೇಳಿಕೆಯಿಂದ ಮನಸಿಗೆ ತೀರಾ ನೋವಾಗಿದೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿ, ಕಾನೂನು ಸಮರ ನಡೆಸುತ್ತೇನೆ ಎಂದು ಹೇಳಿದರು.

Photos : ಸದನದಲ್ಲಿ ಗದ್ದಲ, ಅಹೋರಾತ್ರಿ ಧರಣಿ, ಮಾರ್ನಿಂಗ್ ವಾಕ್

'ಸಾರಾ ಮಹೇಶ್ ಒಬ್ಬ ಜಾತಿವಾದಿ ಮತ್ತು ದುರಹಂಕಾರಿ. ಅವರು ದುರಹಂಕಾರದಿಂದ ಮಾತನಾಡಿದ್ದಾರೆ. ನಾನು ಸದನದಲ್ಲಿ ಗೈರು ಹಾಜರಾಗಿರುವುದು ತಿಳಿದಿದ್ದರೂ, ನನ್ನ ವಿಚಾರದ ಕುರಿತು ಮಾತನಾಡಲು ಅವಕಾಶ ನೀಡಿರುವುದು ಏಕೆ? ಮುಂದೆ ಸದನಕ್ಕೆ ಬಂದಾಗ ಎಲ್ಲವನ್ನೂ ತೆರೆದಿಡುತ್ತೇನೆ' ಎಂದು ಹೇಳಿದರು.

ನಾನು ಯಾರೆಂದು ತೋರಿಸುತ್ತೇನೆ

ನಾನು ಯಾರೆಂದು ತೋರಿಸುತ್ತೇನೆ

'30 ವರ್ಷದ ರಾಜಕೀಯದಲ್ಲಿ ಇದು ನನಗೆ ಅತ್ಯಂತ ನೋವಿನ ಸಂಗತಿ. ಈ ಪಕ್ಷದವರು ನೀಡಿರುವ ಸವಾಲನ್ನು ನಾನು ಎದುರಿಸುತ್ತೇನೆ. ನಾನು ಯಾರು ಎಂಬುದನ್ನು ಮುಂದೆ ತೋರಿಸುತ್ತೇನೆ. ಸದನದಲ್ಲಿ ಮಾಡಿರುವ ಆರೋಪವನ್ನು ದೀಪಕ್ ಎಂಬಾತನ ಖಾಸಗಿ ಚಾನೆಲ್‌ನಲ್ಲಿ ಮಾಡಿಸಿದ್ದರು. ಆತನ ಮೇಲೆ ಮಾನನಷ್ಟ ಮೊಕದ್ದಮೆ ಹಾಕಿದ್ದೇನೆ. ಆತ ಅಲ್ಲಿ ಹೇಳಿದ್ದನ್ನೇ ಯಥಾವತ್ತಾಗಿ ಸಾರಾ ಮಹೇಶ್ ಅವರು ಇಲ್ಲಿ ಹೇಳಿದ್ದಾರೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಕ್ಕುಚ್ಯುತಿ ಮಂಡನೆ: ಯಡಿಯೂರಪ್ಪ

ಹಕ್ಕುಚ್ಯುತಿ ಮಂಡನೆ: ಯಡಿಯೂರಪ್ಪ

ಶಾಸಕ ವಿಶ್ವನಾಥ್ ಅವರು ಸದನದಲ್ಲಿ ಇಲ್ಲದೆ ಇರುವಾಗ ಸಾರಾ ಮಹೇಶ್ ಆರೋಪ ಮಾಡಿದ್ದಾರೆ. ವಿಶ್ವನಾಥ್ ಒಬ್ಬ ಪ್ರಾಮಾಣಿಕ ವ್ಯಕ್ತಿ. ಅವರು ಬಂದ ಬಳಿಕ ಸದನದಲ್ಲಿ ಎಲ್ಲರವನ್ನೂ ಚರ್ಚಿಸುತ್ತೇವೆ. ಸಾರಾ ಮಹೇಶ್ ಅವರು ತಮ್ಮ ಬಳಿ ಇರುವ ದಾಖಲೆಗಳನ್ನು ಬಹಿರಂಗಪಡಿಸಲಿ. ಅವರು ವಿಶ್ವನಾಥ್ ಅವರ ಕ್ಷಮೆಯಾಚಿಸಲಿ. ಶ್ರೀನವಾಸ ಗೌಡ ಅವರದ್ದು ದುರುದ್ದೇಶದ ಹೇಳಿಕೆ. ಅವರ ವಿರುದ್ಧ ಹಕ್ಕುಚ್ಯುತಿ ಮಂಡಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಡಿಕೆಶಿ ಮುಂಬೈ ಭೇಟಿ ಯಶಸ್ವಿ ಆಗಿದ್ದರೆ ಪರಿಸ್ಥಿತಿ ಬೇರೆ ಇರುತ್ತಿತ್ತು!ಡಿಕೆಶಿ ಮುಂಬೈ ಭೇಟಿ ಯಶಸ್ವಿ ಆಗಿದ್ದರೆ ಪರಿಸ್ಥಿತಿ ಬೇರೆ ಇರುತ್ತಿತ್ತು!

ಬಿಜೆಪಿಯಿಂದ 28 ಕೋಟಿ ಆಫರ್

ಬಿಜೆಪಿಯಿಂದ 28 ಕೋಟಿ ಆಫರ್

'ವಿಶ್ವನಾಥ್ ಅವರು ಸರ್ಕಾರದ ವಿರುದ್ಧ ಮಾತನಾಡಿದಾಗ ನಾನು ಅವರನ್ನು ತೋಟದಲ್ಲಿ ಭೇಟಿಯಾಗಿ ನಿಮಗೆ ಮಂತ್ರಿ ಆಗುವ ಆಸೆ ಇದೆಯೇ ಎಂದು ಕೇಳಿದ್ದೆ. ಅದಕ್ಕೆ ಉತ್ತರಿಸಿದ ವಿಶ್ವನಾಥ್ ಹಾಗೇನೂ ಇಲ್ಲ, ಈ ಚುನಾವಣೆಯಲ್ಲಿ ಕೆಲವು ಸಾಲ ಮಾಡಿಕೊಂಡಿದ್ದೇನೆ, ಇದೇ ಸಮಯದಲ್ಲಿ ಬಿಜೆಪಿಯವರು ಪಕ್ಷಕ್ಕೆ ಬಂದರೆ 28 ಕೋಟಿ ಕೊಡುತ್ತೇನೆ ಎಂದಿದ್ದಾರೆ ಎಂದು ತಮ್ಮ ಬಳಿ ಅಂದು ತಿಳಿಸಿದ್ದರು ಎಂಬುದಾಗಿ ಸಾ.ರಾ.ಮಹೇಶ್ ಹೇಳಿದ್ದರು.

ವಿಶ್ವನಾಥ್ ಎಷ್ಟಕ್ಕೆ ಸೇಲ್ ಆಗಿದ್ದಾರೆ?

ವಿಶ್ವನಾಥ್ ಎಷ್ಟಕ್ಕೆ ಸೇಲ್ ಆಗಿದ್ದಾರೆ?

'ನಾನು ಸದನದಲ್ಲಿ ಈಗ ಹೇಳುತ್ತಿರುವುದೆಲ್ಲ ಸತ್ಯ. ವಿಶ್ವನಾಥ್ ಅವರನ್ನು ಕರೆಸಿ ನಾನು ಅವರ ಎದುರುಗಡೆಯೂ ಇದನ್ನು ಹೇಳುತ್ತೇನೆ. ನಾನು ಇಷ್ಟು ಹೊತ್ತು ಹೇಳಿದ್ದು, ನನ್ನ ತಾಯಿಯ ಆಣೆಗೂ, ನನ್ನ ಮಕ್ಕಳ ಆಣೆಗೂ ಸತ್ಯ. ಅಂದು 28 ಕೋಟಿ ಆಫರ್ ತಿರಸ್ಕರಿಸಿದೆ ಎಂದಿದ್ದ ವಿಶ್ವನಾಥ್ ಈಗ ಎಷ್ಟಕ್ಕೆ ಸೇಲ್ ಆಗಿದ್ದಾರೆ ಎಂಬುದನ್ನು ತಿಳಿದುಕೊಳ್ಳಬೇಕಿದೆ ಅವರನ್ನು ಸದನಕ್ಕೆ ಕರೆಸಿ' ಎಂದು ಹೇಳಿದ್ದರು.

ರಾಜ್ಯಪಾಲರಿಗೆ ನನ್ನ ನಮನಗಳು, 1.30ಕ್ಕೆ 'trust vote' ಅಸಾಧ್ಯ: ಎಚ್ಡಿಕೆರಾಜ್ಯಪಾಲರಿಗೆ ನನ್ನ ನಮನಗಳು, 1.30ಕ್ಕೆ 'trust vote' ಅಸಾಧ್ಯ: ಎಚ್ಡಿಕೆ

English summary
Karnataka political crisis: JDS leader H Vishwanath said that, he will take legal action against minister SARA Mahesh for accusing in assembly that he was saled to BJP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X