ನೈತಿಕತೆ ಇದ್ದರೆ ಅಧಿಕಾರ ಬಿಟ್ಟುಹೋಗಿ: ಯಡಿಯೂರಪ್ಪ ಆಗ್ರಹ
ಬೆಂಗಳೂರು, ಜುಲೈ 20: ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ಬಹುಮತ ಕಳೆದುಕೊಂಡಿದೆ. ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕು ನಿಮಗಿಲ್ಲ. ನೈತಿಕತೆ ಇದ್ದರೆ ಅಧಿಕಾರದಿಂದ ಇಳಿದು ಬಿಟ್ಟುಹೋಗಿ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಆಗ್ರಹಿಸಿದರು.
ಬೆಂಗಳೂರಿನ ಯಲಹಂಕ ಸಮೀಪದ ರಮಾಡ ರೆಸಾರ್ಟ್ನಲ್ಲಿ ಶನಿವಾರ ಮಾತನಾಡಿದ ಅವರು, ಅಧಿಕಾರದಲ್ಲಿ ಮುಂದುವರಿಯಲು ಸರ್ಕಾರಕ್ಕೆ ಯಾವುದೇ ನೈತಿಕ ಹಕ್ಕು ಇಲ್ಲ. ರಾಜ್ಯಪಾಲರ ಸೂಚನೆಗಳಿಗೆ ಕ್ಯಾರೇ ಅನ್ನುತ್ತಿಲ್ಲ. ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ಅದಕ್ಕೂ ಆದ್ಯತೆ ನೀಡುತ್ತಿಲ್ಲ ಎಂದು ಆರೋಪಿಸಿದರು.
ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಅವರನ್ನು ಬಿಜೆಪಿಯವರು ಅಪಹರಿಸಿದ್ದಾರೆ ಎಂದು ಆರೋಪಿಸುತ್ತಾರೆ. ಆದರೆ, ಸ್ವತಃ ಶ್ರೀಮಂತ್ ಪಾಟೀಲ್ ಅವರು ತಮ್ಮನ್ನು ಯಾರೂ ಅಪಹರಿಸಿಲ್ಲ ಎಂದು ವಿಡಿಯೋ ಮತ್ತು ಪತ್ರದ ಮೂಲಕ ತಿಳಿಸಿದ್ದಾರೆ ಎಂದರು.

ಅತೃಪ್ತ ಶಾಸಕರು ಬರುವವರೆಗೂ ನಾವು ಸದನವನ್ನು ನಡೆಸುವುದಿಲ್ಲ ಎಂಬ ದೋಸ್ತಿ ನಾಯಕರ ಧೋರಣೆ ಸರಿಯಿಲ್ಲ. ಇದೊಂದು ರೀತಿಯ ಲಜ್ಜೆಗೆಟ್ಟ ಸರ್ಕಾರ. ಸದನವನ್ನು ನಡೆಸಲು ಅವರಿಗೆ ಆಸಕ್ತಿ ಇಲ್ಲ ಎಂದು ಶಾಸಕ ಎಸ್ ಆರ್ ವಿಶ್ವನಾಥ್ ಆರೋಪಿಸಿದರು.
ಅತೃಪ್ತ ಶಾಸಕರು ಬರುವ ಹಾಕಿದ್ದರೆ ಅವರನ್ನು ಕರೆದುಕೊಂಡು ವಿಶ್ವಾಸಮತ ಯಾಚಿಸಲಿ. ಸಮ್ಮನೆ ಕಾಲಹರಣ ಮಾಡುವುದು ಸರಿಯಲ್ಲ. ಅತೃಪ್ತರ ಮನವೊಲಿಸ್ತಾರೋ ಇಲ್ಲವೋ ಗೊತ್ತಿಲ್ಲ. ಈ ಆಟಗಳನ್ನೆಲ್ಲ ಜನರು ನೋಡುತ್ತಿದ್ದಾರೆ. ನೈತಿಕತೆ ಇದ್ದರೆ ಸೋಮವಾರ ವಿಶ್ವಾಸಮತ ಯಾಚಿಸಲಿ ಎಂದು ಆಗ್ರಹಿಸಿದರು.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?











Click it and Unblock the Notifications