Get Updates
Get notified of breaking news, exclusive insights, and must-see stories!

ಚಿತ್ರರಂಗದ ಚೈತನ್ಯ ಕಾಶೀನಾಥ್ ಅಗಲಿಕೆಗೆ ರಾಜಕಾರಣಿಗಳ ಕಂಬನಿ

ಬೆಂಗಳೂರು, ಜನವರಿ 18: ಕನ್ನಡ ಚಿತ್ರರಂಗದ ಚೈತನ್ಯ, ಪ್ರತಿಭಾವಂತರಿಗೆ ಮಾರ್ಗದರ್ಶಕ, ಸ್ವಾಭಿಮಾನಿ ಚಿತ್ರಕರ್ಮಿ ಕಾಶೀನಾಥ್ ಅವರ ನಿಧನಕ್ಕೆ ಕರ್ನಾಟಕದ ರಾಜಕೀಯ ವಲಯದಿಂದಲೂ ತೀವ್ರ ಸಂತಾಪ ವ್ಯಕ್ತವಾಗಿದೆ.

ಹಿರಿಯ ನಟ ಕಾಶೀನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿ, 'ಅವರು ಪ್ರತಿಭಾವಂತ ಕಲಾವಿದ. ಅವರ ಹಾಸ್ಯ ನಟನೆ ಎಲ್ಲರಿಗೂ ಒಪ್ಪುವಂತಿತ್ತು. ನಾನೂ ಸಹ ಕಾಶಿನಾಥ್ ಅವರ ಕೆಲವು ಚಿತ್ರಗಳನ್ನು ನೋಡಿದ್ದೇನೆ. ಅವರು ಸದಭಿರುಚಿಯ ಚಿತ್ರಗಳನ್ನು ನೀಡಿದ್ದಾರೆ. ಕಾಶಿನಾಥ್ ಅವರಿಗೆ ಸಾಯುವಂಥ ವಯಸ್ಸೇನೂ ಆಗಿರಲಿಲ್ಲ. ಉತ್ತಮ ಕಲಾವಿದನನ್ನು ನಾವು ಕಳೆದುಕೊಂಡಿದ್ದೇವೆ. ಇವರ ನಿಧನದಿಂದ ಚಿತ್ರರಂಗಕ್ಕೆ ಭಾರೀ ನಷ್ಟವಾಗಿದೆ. ಅವರ ನಿಧನ ವೈಯಕ್ತಿಕವಾಗಿ ನನಗೆ ತುಂಬಾ ದುಃಖ ತಂದಿದೆ ಎಂದು ಹೇಳಿದರು.

ಕಾಶೀನಾಥ್ ಅವರ ಅಂತಿಮ ದರ್ಶನಕ್ಕೆ ನರಸಿಂಹರಾಜ ಕಾಲೋನಿಯ ಎ.ಪಿ.ಎಸ್ ಕಾಲೋನಿಯ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ. ಸಂಜೆ ವೇಳೆಗೆ ಚಾಮರಾಜಪೇಟೆಯ ಟಿ. ಆರ್ ಮಿಲ್ ರುದ್ರಭೂಮಿಯಲ್ಲಿ ಹಿಂದೂ ಸಂಪ್ರದಾಯದಂತೆ ಅಂತಿಮ ಸಂಸ್ಕಾರ ನೆರವೇರಲಿದೆ. ರಾಜಕಾರಣಿಗಳು ಕಾಶೀನಾಥ್ ಅವರನ್ನು ಹೇಗೆ ಸ್ಮರಿಸಿದ್ದಾರೆ ಎಂಬುದನ್ನು ಟ್ವೀಟ್ ಮೂಲಕ ಓದಿ...

ಕಾಶೀನಾಥ್ ಸಾವಿಗೆ ಕಂಬನಿ ಮಿಡಿದ ರಾಜಕಾರಣಿಗಳು

ಕಾಶೀನಾಥ್ ಸಾವಿಗೆ ಕಂಬನಿ ಮಿಡಿದ ರಾಜಕಾರಣಿಗಳು

ಅವರ ಅಗಲಿಕೆಯ ಸುದ್ದಿ ಕೇಳುತ್ತಿದ್ದಂತೆಯೇ, 'ಹಲವು ತಲೆಮಾರಿಗೆ ನಗುವನ್ನು ಹಂಚಿದ ನಟ, ನಿರ್ದೇಶಕ ಇನ್ನು ನೆನಪು ಮಾತ್ರ' ಎಂದು ಹಲವರು ಕಂಬನಿ ಮಿಡಿದಿದ್ದಾರೆ. ಸಿಎಂ ಸಿದ್ದರಾಮಯ್ಯ, ಕೆಜೆ ಜಾರ್ಜ್, ಬಿಎಸ್ ಯಡಿಯೂರಪ್ಪ, ಜಗ್ಗೇಶ್, ಮಾಳವಿಕಾ ಅವಿನಾಶ್ ಸೇರಿದಂತೆ ಅನೇಕ ರಾಜಕಾರಣಿಗಳು ಕಾಶೀನಾಥ್ ಅವರ ಸಾವಿಗೆ ಕಂಬನಿ ಮಿಡಿದಿದ್ದಾರೆ.

ಕಣ್ಮರೆಯಾದ ಕಲಾಯೋಗಿ ಕಾಶಿನಾಥ್ ಅಪರೂಪದ ಚಿತ್ರಸಂಪುಟ

Array

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ

ದಶಕಗಳಿಂದ ನಮ್ಮನ್ನು ರಂಜಿಸಿದ ವ್ಯಕ್ತಿ ಇನ್ನಿಲ್ಲ ಎಂಬುದನ್ನು ಊಹಿಸಿಕೊಳ್ಳಲಿಕ್ಕೇ ಅಸಾಧ್ಯ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ.

Array

ಕರ್ನಾಟಕ ಕಾಂಗ್ರೆಸ್ ಟ್ವೀಟ್

ಹೊಸ ಅಲೆ ಚಿತ್ರಗಳ ಪ್ರವರ್ತಕ, ಅತ್ಯುತ್ತಮ ನಟ ಹಾಗೂ ನಿರ್ದೇಶಕ ಎಂದ ಕರ್ನಾಟಕ ಕಾಂಗ್ರೆಸ್ ಟ್ವೀಟ್.

ಹಲವು ತಲೆಮಾರುಗಳಿಗೆ ನಗಲು ಕಲಿಸಿದ ಚೈತನ್ಯ

ಹಲವು ತಲೆಮಾರುಗಳಿಗೆ ನಗಲು ಕಲಿಸಿದ ಚೈತನ್ಯ ಎಂದು ಹೊಗಳಿದ ಬಿಜೆಪಿ ವಕ್ತಾರೆ ಮಾಳವಿಕಾ ಅವಿನಾಶ್.

ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್

ಚಂದನವನದ ನಟ, ನಿರ್ದೇಶಕ,ಕಲಾಯೋಗಿ ಹಲವು ಹೊಸ ಪ್ರತಿಭೆಗಳಿಗೆ ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ ಮಹಾನ್ ವ್ಯಕ್ತಿ, ಕಾಶಿನಾಥ್ ಅವರ ಸಾವಿನ ಸುದ್ದಿ ಕೇಳಿ ತುಂಬಾ ದುಃಖವಾಗಿದೆ- ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್.

ಎಚ್ ಡಿ ಕುಮಾರಸ್ವಾಮಿ ಅವರಿಂದ ಟ್ವೀಟ್

ಕನ್ನಡ ಚಿತ್ರರಂಗವು ಅತ್ಯಮೂಲ್ಯ ರತ್ನದಂತಿದ್ದ ನಟ,ನಿರ್ದೇಶಕರೊಬ್ಬರನ್ನು ಕಳೆದುಕೊಂಡಿದ್ದು, ಕಾಶಿನಾಥ್ ರವರ ಅಗಲಿಕೆಗೆ ತೀವ್ರ ಸಂತಾಪವನ್ನು ಸೂಚಿಸುತ್ತೇನೆ-ಎಚ್ ಡಿ ಕುಮಾರಸ್ವಾಮಿ.

ನಟ ಜಗ್ಗೇಶ್ ರಿಂದ ಸರಣಿ ಟ್ವೀಟ್

ತಾನಾಯಿತು ತನ್ನ ಕಾರ್ಯವಾಯಿತು ಅಂತ ಬದುಕಿದ ಸಂಭಾವಿತ ಕಾಶಿನಾಥ್-ನಟ ಜಗ್ಗೇಶ್

ಪ್ರತಿಭೆಗಳನ್ನು ಪರಿಚಯಿಸಿದ ಮಹನೀಯ

ಕನ್ನಡ ಚಿತ್ರರಂಗಕ್ಕೆ ಹಲವಾರು ಪ್ರತಿಭೆಗಳನ್ನು ಪರಿಚಯಿಸಿದ ಮಹನೀಯನ ಆತ್ಮಕ್ಕೆ ಶಾಂತಿ ಸಿಗಲಿ- ಸಂಸದ ರಾಜೀವ್ ಚಂದ್ರಶೇಖರ್.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+