ಸ್ಪೀಕರ್ ಜತೆ ಸಿದ್ದರಾಮಯ್ಯ, ಕುಮಾರಸ್ವಾಮಿ ಬಿಸಿ ಬಿಸಿ ಚರ್ಚೆ
ಬೆಂಗಳೂರು, ಜುಲೈ 17: ಅತೃಪ್ತ ಶಾಸಕರು ಮತ್ತು ಸ್ಪೀಕರ್ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ಪ್ರಕಟಿಸಿರುವುದರಿಂದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಸಿಎಲ್ಪಿ ನಾಯಕ ಸಿದ್ದರಾಮಯ್ಯ ಸೇರಿದಂತೆ ದೋಸ್ತಿ ಸರ್ಕಾರದ ಮುಖಂಡರು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾಂಗ್ರೆಸ್ ನಾಯಕರಾದ ಕೆಜೆ ಜಾರ್ಜ್, ಕೃಷ್ಣಬೈರೇಗೌಡ ಸೇರಿದಂತೆ ಮೈತ್ರಿ ಸರ್ಕಾರದ ನಾಯಕರು ಬುಧವಾರ ಮಧ್ಯಾಹ್ನ ಸ್ಪೀಕರ್ ಕಚೇರಿಗೆ ತೆರಳಿ ಸಮಾಲೋಚನೆ ನಡೆಸಿದರು.
ಅತೃಪ್ತ ಶಾಸಕರ ರಾಜೀನಾಮೆ ಕುರಿತ ತೀರ್ಮಾನವನ್ನು ಆದಷ್ಟು ಬೇಗನೆ ತೆಗೆದುಕೊಳ್ಳಬೇಕು. ಅವರು ಕಲಾಪಕ್ಕೆ ಹಾಜರಾಗಬೇಕೆಂದು ಒತ್ತಾಯ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಸುಪ್ರೀಂಕೋರ್ಟ್ ಆದೇಶದ ವ್ಯಾಪ್ತಿಯಲ್ಲಿ ಹಾಗೂ ಅದರಾಚೆಗಿನ ಸ್ಪೀಕರ್ ಅಧಿಕಾರದಲ್ಲಿ ಯಾವ ತೀರ್ಮಾನಗಳನ್ನು ತೆಗೆದುಕೊಳ್ಳಬಹುದು ಎಂದು ವಿಚಾರವಾಗಿ ಉಭಯ ಪಕ್ಷಗಳ ನಾಯಕರು ಚರ್ಚಿಸಿದ್ದಾರೆ.

ಅಲ್ಲದೆ, ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ನಾಳಿನ ವಿಶ್ವಾಸಮತ ಯಾಚನೆಯನ್ನು ಮುಂದೂಡುವುದು ಸೂಕ್ತವೇ. ಹಾಗೆ ಮುಂದೂಡುವ ಮೂಲಕ ಸರ್ಕಾರ ಉಳಿಸಿಕೊಳ್ಳಲು ಸಾಧ್ಯವೇ ಎಂಬ ಬಗ್ಗೆ ಚರ್ಚಿಸಲಾಗಿದೆ.
ಗುರುವಾರ ವಿಶ್ವಾಸಮತ ಯಾಚನೆಗೆ ಕುಮಾರಸ್ವಾಮಿ ಅವರು ಸಿದ್ಧರಾಗಿರುವುದರಿಂದ, ಅಂದು ಯಾವ ಕ್ರಮಗಳನ್ನು ಅನುಸರಿಸಬೇಕು, ಮುಂದಿನ ನಡೆಗಳೇನು ಎಂಬ ಬಗ್ಗೆ ಸಲಹೆ ಸೂಚನೆಗಳನ್ನು ಪಡೆದುಕೊಂಡರು.
ಈ ಹಿಂದೆಯೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರ ಅನರ್ಹತೆಗೆ ದೂರು ಸಲ್ಲಿಸಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ್ದ ರಮೇಶ್ ಕುಮಾರ್ ಅವರು ಇಂದು ಸಂಜೆಯೇ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಅಲ್ಲದೆ, ಪಕ್ಷೇತರ ಶಾಸಕ ಆರ್. ಶಂಕರ್ ಅವರ ಅನರ್ಹತೆಗೂ ಕಾಂಗ್ರೆಸ್ ನಾಯಕರು ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಆರ್. ಶಂಕರ್ ಅವರು ಸಚಿವರಾಗಿ ಸರ್ಕಾರದೊಳಗೆ ಸೇರಿಕೊಳ್ಳುವ ಮುನ್ನ ತಮ್ಮ ಪಕ್ಷವನ್ನು ಕಾಂಗ್ರೆಸ್ನೊಂದಿಗೆ ವಿಲೀನಗೊಳಿಸಿದ್ದರು. ಹೀಗಾಗಿ ಅವರು ತಾಂತ್ರಿಕವಾಗಿ ಕಾಂಗ್ರೆಸ್ ಶಾಸಕರೇ ಆಗಲಿದ್ದಾರೆ. ಹೀಗಾಗಿ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳ ಅಡಿಯಲ್ಲಿ ಅನರ್ಹಗೊಳಿಸಬೇಕು ಎಂದು ಸಿಎಲ್ಪಿ ನಾಯಕ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ಎಂದು ಹೇಳಲಾಗಿದೆ.
-
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ನೈರುತ್ಯ ರೈಲ್ವೆ: 194 ಗೂಡ್ಸ್ ರೈಲು ಮ್ಯಾನೇಜರ್ ಹುದ್ದೆ; ಕನ್ನಡಿಗರಿಗೆ ಅನ್ಯಾಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications