Karnataka Election: ಬೆಂಗಳೂರಿನಲ್ಲಿ ಕೋಟಿ ಕೋಟಿ ಹಣ, ಹಲವು ಕೋಟಿ ಮೌಲ್ಯದ ವಸ್ತುಗಳ ವಶಪಡಿಸಿಕೊಂಡ ಚುನಾವಣಾಧಿಕಾರಿಗಳು
ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ಸಮೀಪವಾಗುತ್ತಿದ್ದು ಚುನಾವಣಾ ಅಖಾಡ ರಂಗೇರುತ್ತಿದೆ. ಎಲ್ಲಾ ಪಕ್ಷಗಳು ಈಗಾಗಲೇ ತಾವು ಗೆದ್ದರೆ ಜನತೆಗೆ ಏನೆಲ್ಲಾ ಕೆಲಸ ಮಾಡ್ತೀವಿ ತಮ್ಮ ಆಶ್ವಾಸನೆಗಳನ್ನು ನೀಡಿದ್ದಾರೆ. ಅದರ, ಜೊತೆಗೆ ಮತದಾನದ ದಿನಾಂಕ ಸಮೀಪವಾದಂತೆ ಅಭ್ಯರ್ಥಿಗಳು ಕೂಡ ಮತದಾರರಿಗೆ ಆಮಿಷಗಳನ್ನು ಒಡ್ಡಲು ಯತ್ನಿಸುತ್ತಾರೆ, ಚುನಾವಣಾಧಿಕಾರಿಗಳು ಇಂತಹ ಅಕ್ರಮದ ವಿರುದ್ಧ ಕಣ್ಣಿಟ್ಟಿದ್ದು ಬೆಂಗಳೂರಿನಲ್ಲೇ ಹಲವು ಕೋಟಿ ಹಣ ಮತ್ತು ಬೆಲೆ ಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಪೊಲೀಸರು, ಚುನಾವಣಾಧಿಕಾರಿಗಳು ಸಖತ್ ಅಲರ್ಟ್ ಆಗಿದ್ದಾರೆ. ಅಕ್ರಮವಾಗಿ ಸಾಗಾಣೆ ಮಾಡುತ್ತಿದ್ದ ಹಣ, ಹೆಂಡ, ಮಾದಕ ದ್ರವ್ಯ, ಚಿನ್ನ, ಬೆಳ್ಳಿಯ ವಸ್ತುಗಳು, ಆಭರಣಗಳು, ವಿವಿಧ ರೀತಿಯ ಉಡುಗೊರೆಗಳು ಮತ್ತು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ದಿನದಿಂದ ಏಪ್ರಿಲ್ 22ರವರೆಗೆ 76,30,86,056 ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ 1,873 ಎಫ್ಐಆರ್ಗಳನ್ನು ದಾಖಲಿಸಲಾಗಿದೆ. ಇದುವರೆಗೂ ಬೆಂಗಳೂರಿನಲ್ಲಿ ವಶಪಡಿಸಿಕೊಳ್ಳಲಾದ ಹಣ ಮತ್ತು ಇತರೆ ವಸ್ತುಗಳ ಬಗ್ಗೆ ವಿವರಗಳನ್ನು ಕರ್ನಾಟಕ ಚುನಾವಣಾ ಆಯೋಗ ಬಿಡುಗಡೆ ಮಾಡಿದೆ.
ವಶಪಡಿಸಿಕೊಂಡ ನಗದು ಮತ್ತು ವಸ್ತುಗಳ ವಿವರ
ಬೆಂಗಳೂರು ಒಂದರಲ್ಲೇ ಇದುವರೆಗೆ ಚುನಾವಣಾ ಅಕ್ರಮಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳು 11,35,88,541 ರುಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ. ಇನ್ನು, 25,91,58,127 ರುಪಾಯಿ ಮೌಲ್ಯದ 5,95,684 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಆತಂಕಕಾರಿ ವಿಚಾರವೆಂದರೆ, 10,26,86,663 ರುಪಾಯಿ ಮೌಲ್ಯದ 377 ಕೆ.ಜಿ. ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ.
17,09,97,039 ರುಪಾಯಿ ಮೌಲ್ಯದ 291 ಕೆ.ಜಿ. ಚಿನ್ನ ಮತ್ತು ಬೆಳ್ಳಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. 5,74,14,592 ರುಪಾಯಿ ಮೌಲ್ಯದ ವಿವಿಧ ಬಗೆಯ 49937 ಉಡುಗೊರೆಯ ವಸ್ತುಗಳು ವಶಕ್ಕೆ ಪಡೆದುಕೊಂಡಿದ್ದಾರೆ. 5,88,81,040 ರುಪಾಯಿ ಮೌಲ್ಯದ ವಿವಿಧ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಯ ನಾಮಪತ್ರ ಸಲ್ಲಿಕೆ ಅಂತಿಮ ದಿನಾಂಕ ಮುಕ್ತಾಯವಾಗಿದ್ದು, ನಾಮಪತ್ರ ವಾಪಸ್ ತೆಗೆದುಕೊಳ್ಳಲು ಸೋಮವಾರ ಕೊನೆಯ ದಿನವಾಗಿದೆ. ಸೋಮವಾರದ ನಂತರ ಕಣದಲ್ಲಿ ಯಾರೆಲ್ಲಾ ಉಳಿಯಲಿದ್ದಾರೆ ಎನ್ನುವ ಸ್ಪಷ್ಟತೆ ಸಿಗಲಿದ್ದು, ರಾಜಕೀಯ ಅಖಾಡ ಮತ್ತಷ್ಟು ರಂಗೇರುವ ಸಾಧ್ಯತೆ ಇದೆ. ಇದುವರೆಗೂ ಕೋಟಿ ಕೋಟಿ ಮೌಲ್ಯದ ನಗದು, ವಸ್ತುಗಳು, ಉಡುಗೊರೆಗಳನ್ನು ವಶಪಡಿಸಿಕೊಂಡಿದ್ದು, ಮತದಾನದ ದಿನದವರೆಗೆ ಇನ್ನೂ ನೂರಾರು ಕೋಟಿ ಮೌಲ್ಯದ ಹಣ, ಉಡುಗೊರೆಗಳನ್ನು ವಶಪಡಿಸಿಕೊಳ್ಳುವ ಸಾಧ್ಯತೆ ಇದೆ.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications