ಮತ ಚಲಾಯಿಸಿ ಫೋಟೋಗೆ ಫೋಸ್ ಕೊಟ್ಟ ಬಿಬಿಎಂಪಿ ಆಯುಕ್ತ ತುಷಾರ್ ಗಿರಿ ನಾಥ್
ಬೆಂಗಳೂರು , ಮೇ. 10: ರಾಜ್ಯದ ವಿಧಾನಸಭಾ ಚುನಾವಣೆಗೆ ಬುಧವಾರ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ರಾಜಕೀಯ ನಾಯಕರು, ಚಲನಚಿತ್ರ ನಟ ನಟಿಯರು ಬೆಳಗ್ಗೆಯೇ ಸರತಿಯಲ್ಲಿ ನಿಂತು ಮತ ಚಲಾಯಿಸಿದ್ದಾರೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಕೂಡ ತಮ್ಮ ಹಕ್ಕು ಚಲಾಯಿಸಿದ್ದಾರೆ.
ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಜಕ್ಕೂರಿನ ಮತಗಟ್ಟೆಯಲ್ಲಿ ಸರತಿಯ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದಾರೆ. ತಮ್ಮ ಹಕ್ಕು ಚಲಾಯಿಸಿದ ಬಳಿಕ ಪೋಟೋಗೆ ಪೋಸ್ ನೀಡಿ ಮತ್ತಷ್ಟು ಜನರಿಗೆ ಮತ ಚಲಾಯಿಸುವಂತೆ ಕರೆ ನೀಡಿದ್ದಾರೆ.

ಇನ್ನು, ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಬುಧವಾರ ಮತ ಚಲಾಯಿಸಿದ್ದಾರೆ. ಕುಟುಂಬ ಸಮೇತ ಆಗಮಿಸಿ ಬ್ಯಾಟರಾಯನಪುರ ಕ್ಷೇತ್ರದ ಜಕ್ಕೂರಿನ ಮತಗಟ್ಟೆ ನಂಬರ್ 127ರಲ್ಲಿ ಮತದಾನ ಮಾಡಿದ್ದಾರೆ. ಜಕ್ಕೂರಿನ ಮತಗಟ್ಟೆ ನಂಬರ್ 127ರಲ್ಲಿ ಮನೋಜ್ ಕುಮಾರ್ ಮೀನಾ ಮೊದಲ ಮತದಾರರಾಗಿದ್ದಾರೆ.
ಮತ ಹಾಕಿ ಮಾತನಾಡಿರುವ ಅವರು, ನನ್ನ ಮಕ್ಕಳು ಮೊದಲ ಬಾರಿ ಮತ ಚಲಾಯಿಸುತ್ತಿದ್ದಾರೆ. ನಾವೇ ನಂ 127 ಮತಗಟ್ಟೆಯಲ್ಲಿ ಮೊದಲ ಮತದಾರರು. 224 ವಿಧಾನಸಭಾ ಕ್ಷೇತ್ರದಲ್ಲಿ 51 ಕೋಟಿ 31 ಲಕ್ಷ ಜನ ಮತ ಹಾಕುತ್ತಿದ್ದಾರೆ. ಈ ಬಾರಿ ವಿವಿಧ ಥೀಮ್ಗಳಲ್ಲಿ ಬೂತ್ಗಳನ್ನು ಬೂತ್ ಮಾಡಿದ್ದೇವೆ. ಮತದಾನಕ್ಕೆ ಪ್ರೋತ್ಸಾಹಿಸುವ ದೃಷ್ಟಿಯಿಂದ ಈ ಥೀಮ್ ಬೂತ್ ಮಾಡಲಾಗಿದೆ" ಎಂದಿದ್ದಾರೆ.
ಮತ ಚಲಾಯಿಸಿ ಫೋಟೋಗೆ ಫೋಸ್ ಕೊಟ್ಟ ಬಿಬಿಎಂಪಿ ಆಯುಕ್ತ ತುಷಾರ್ ಗಿರಿ ನಾಥ್#KarnatakaAssemblyElection2023 #BBMP #KarnatakaElection2023 #Election2023 #KarnatakaElectionsWithOi https://t.co/xslnA9doHF
— oneindiakannada (@OneindiaKannada) May 10, 2023

ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಪತ್ನಿ ವನಿತಾ ಸೂದ್ ಜೊತೆ ಸರ್ ಎಂ.ವಿಶ್ವೇಶ್ವರಯ್ಯ ಪದವಿ ಪೂರ್ವ ಕಾಲೇಜಿನಲ್ಲಿ ಮತದಾನ ಮಾಡಿದ್ದಾರೆ.
-
"ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ, ಕಾಂಗ್ರೆಸ್ನಿಂದ ಪ್ರಜಾಪ್ರಭುತ್ವದ ಹತ್ಯೆ": ಆರ್ ಅಶೋಕ್ -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ












Click it and Unblock the Notifications