ಮೋದಿ ವಿರುದ್ಧ ಅವಹೇಳನಕಾರಿ ಮಾತು: ಮೇವಾನಿ, ರೈ ವಿರುದ್ಧ ದೂರು
ಬೆಂಗಳೂರು, ಮೇ 01: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿದ್ದ ಗುಜರಾತಿನ ವಡ್ಗಾಮ್ ಶಾಸಕ ಜಿಗ್ನೇಶ್ ಮೇವಾನಿ ಮತ್ತು ನಟ ಪ್ರಕಾಶ್ ರೈ ವಿರುದ್ಧ ಕರ್ನಾಟಕ ಬಿಜೆಪಿ ಘಟಕ ಚುನಾವಣಾ ಆಯೋಗಕ್ಕೆ ದೂರು ದಾಖಲಿಸಿದೆ.
ಏ.29 ರಂದು ಬೆಂಗಳೂರಿನಲ್ಲಿ ಭಾಷಣ ಮಾಡುತ್ತಿದ್ದ ವೇಳೆಯಲ್ಲಿ "ಪ್ರಧಾನಿ ನರೇಂದ್ರ ಮೋದಿ ಒಬ್ಬ ಕಾರ್ಪೋರೇಟ್ ಸೇಲ್ಸ್ ಮನ್ ಮತ್ತು ಕಳ್ಳ. ಅವರು ದೇಶವನ್ನು ಕೊಳ್ಳೆಹೊಡೆದಿದ್ದಾರೆ" ಎಂದು ಜಿಗ್ನೇಶ್ ಮೇವಾನಿ ಹೇಳಿದ್ದರು.
'ನರೇಂದ್ರ ಮೋದಿ ಮತ್ತು ಬಿ ಎಸ್ ಯಡಿಯೂರಪ್ಪ ಅವರ ವ್ಯಕ್ತಿತ್ವಕ್ಕೆ ಧಕ್ಕೆ ಆಗುವ ರೀತಿಯಲ್ಲಿ ಮೇವಾನಿ ಮತ್ತು ರೈ ಮಾತನಾಡಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ನೀಡಿದ ದೂರಿನಲ್ಲಿ ಮನವಿಮಾಡಿಕೊಳ್ಳಲಾಗಿದೆ'

"ಯಡಿಯೂರಪ್ಪ ಮತ್ತು ಅವರ ಪ್ರೇಮಿ ಇಬ್ಬರೂ ಚುನಾವಣೆಯ ನಂತರ ಕರ್ನಾಟಕದಿಂದ ಕಾಲ್ಕೀಳುತ್ತಾರೆ" ಎಂದಿದ್ದ ಹಿರಿಯ ರಾಜಕಾರಣಿ ಎ ಕೆ ಸುಬ್ಬಯ್ಯ ಅವರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಲಾಗಿದೆ.
ಜಿಗ್ನೇಶ್ ಮೇವಾನಿ ಮತ್ತು ಪ್ರಕಾಶ್ ರೈ ಅವರಿಗೆ ಕರ್ನಾಟಕದಲ್ಲಿ ಇನ್ನು ಮುಂದೆ ಯಾವುದೇ ಸಾರ್ವಜನಿಕ ಸಭೆ ನಡೆಸಲು ಅನುಮತಿ ನೀಡಬಾರದೆಂದೂ ದೂರುಪತ್ರದಲ್ಲಿ ಮನವಿ ಮಾಡಿಕೊಳ್ಳಲಾಗಿದೆ.
ಕರ್ನಾಟಕದಲ್ಲಿ ಮೇ 12 ರಂದು ನಡೆಯಲಿರುವ ಚುನಾವಣೆಗಾಗಿ ಹಲವು ದಿನಗಳಿಂದ ರಾಜ್ಯದಲ್ಲೇ ಇರುವ ಜಿಗ್ನೇಶ್ ಮೇವಾನಿ ಬಿಜೆಪಿ ವಿರುದ್ಧ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications