125ಕ್ಕೂ ಹೆಚ್ಚು ಸ್ಥಾನ ಪಡೆದು ಸ್ಪಷ್ಟ ಬಹುಮತ ಪಡೆಯುತ್ತೇವೆ: ರಾಮಲಿಂಗಾ ರೆಡ್ಡಿ
ಬೆಂಗಳೂರು , ಮೇ. 10: ರಾಜ್ಯದಲ್ಲಿ ಪಕ್ಷಗಳ ಭವಿಷ್ಯ ನಿರ್ಧರಿಸಲಿರುವ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ಈವರೆಗೆ ಶೇ. 8.15 ರಷ್ಟು ಮತದಾನ ದಾಖಲಾಗಿದೆ. ಮತದಾನಕ್ಕೆ ಉತ್ತಮ ಸ್ಪಂದನೆ ಸಿಗುತ್ತಿದ್ದು, ರಾಜಕೀಯ ನಾಯಕರು, ಅಭ್ಯರ್ಥಿಗಳು ತಮ್ಮ ತಮ್ಮ ಮತ ಕ್ಷೇತ್ರಗಳಲ್ಲಿ ವೋಟು ಚಲಾಯಿಸಿದ್ದಾರೆ. ಕಾಂಗ್ರೆಸ್ ನಾಯಕರು ಈ ಬಾರಿ ತಮ್ಮದೆ ಸರ್ಕಾರ ಎಂದು ಭಾರೀ ವಿಶ್ವಾಸ ಹೊಂದಿದ್ದಾರೆ.
ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಮತ ಚಲಾವಣೆ ಮಾಡಿ ಮಾತನಾಡಿರುವ ಕರ್ನಾಟಕ ಕಾಂಗ್ರೆಸ್ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಅವರು ಈ ಬಾರಿ ತಮ್ಮದೇ ಸರ್ಕಾರ ಅಧಿಖಾರ ಬರುತ್ತದೆ ಎಮದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. "125ಕ್ಕೂ ಹೆಚ್ಚು ಸ್ಥಾನ ಪಡೆದು ಸ್ಪಷ್ಟ ಬಹುಮತ ಪಡೆಯುತ್ತೇವೆ. ಸರ್ಕಾರ ರಚಿಸುತ್ತೇವೆ" ಎಮದು ಮತ ಹಾಕಿದ ಬೆರಳು ತೋರಿಸಿ ಮಾಧ್ಯಮದವರಿಗೆ ಫೋಸ್ ನೀಡಿದ್ದಾರೆ.
#WATCH | "We will get a clear majority with more than 125 seats. There are 2-3 people (for the CM post) but High Command and MLAs will decide: Ramalinga Reddy, Karnataka Congress working president #KarnatakaAssemblyElection2023 pic.twitter.com/geuDGjm30V
— ANI (@ANI) May 10, 2023

ಮುಖ್ಯಮಂತ್ರಿ ಆಯ್ಕೆ ಬಗ್ಗೆ ಮಾತನಾಡಿರುವ ಅವರು, "ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ 2-3 ಜನರಿದ್ದಾರೆ. ಆದರೆ ಯಾರು ಮುಖ್ಯಮಂತ್ರಿ ಆಗಬೇಕು ಎಂಬುದನ್ನು ಹೈಕಮಾಂಡ್ ಮತ್ತು ಶಾಸಕರು ನಿರ್ಧರಿಸುತ್ತಾರೆ" ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಈ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಗೆ ಮತ್ತೊಬ್ಬರು ಸಿಎಂ ಸ್ಥಾನದ ಆಕಾಂಕ್ಷಿ ಪಕ್ಷದಲ್ಲಿ ಇದ್ದಾರೆ ಎಂಬುದನ್ನು ರಾಮಲಿಂಗಾ ರೆಡ್ಡಿ ಒಪ್ಪಿಕೊಂಡಿದ್ದಾರೆ.












Click it and Unblock the Notifications