ಡಿಕೆ ಶಿವಕುಮಾರ್ ಹುಟ್ಟುಹಬ್ಬ: ಅಂಧ ಮಕ್ಕಳಿಗೆ ದಿನಸಿ, ರಕ್ತದಾನ
ಬೆಂಗಳೂರು, ಮೇ 15: ಈ ವರ್ಷ ಅಂಧ ಮಕ್ಕಳೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಗಿದೆ. ಇಂದು (ಮೇ 15) ಡಿಕೆ ಶಿವಕುಮಾರ್ ಹುಟ್ಟುಹಬ್ಬವಾಗಿದ್ದು, 58ನೇ ವರ್ಷಕ್ಕೆ ಡಿಕೆ ಶಿವಕುಮಾರ್ ಕಾಲಿಟ್ಟಿದ್ದಾರೆ.
ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಡಿಕೆ ಶಿವಕುಮಾರ್ ಜನ್ಮದಿನವನ್ನು ಆಚರಣೆ ಮಾಡಲಾಯಿತು. ಅಂಧ ಮಕ್ಕಳ ಶಾಲೆಗೆ ದಿನಸಿ ಹಾಗೂ ಆಹಾರ ಸಾಮಾಗ್ರಿಗಳು ನೀಡಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ದೂರದಿಂದಲೇ ಹಾರೈಸಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನವಿ!
ಅದರೊಂದಿಗೆ ಆಸ್ಪತ್ರೆಯಲ್ಲಿನ ಗರ್ಭಿಣಿಯರು, ರೋಗಿಗಳಿಗೆ ಹಾಲು, ಹಣ್ಣು ನೀಡಲಾಯಿತು. ಆಹಾರಕ್ಕಾಗಿ ಪರದಾಡುತ್ತಿದ್ದ ನಿರಾಶ್ರಿತರಿಗೆ ಆಹಾರ ವಿತರಿಸಲಾಯಿತು.
ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಸಲಾಯಿತು. ನಟಿ ಮಾಜಿ ಸಚಿವೆ ಉಮಾಶ್ರೀ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಈ ವೇಳೆ ಭಾಗವಹಿಸಿದ್ದರು.
ಕೆಪಿಸಿಸಿ ಅಧ್ಯಕ್ಷರಾದ @DKShivakumar ಅವರ ಜನ್ಮದಿನವನ್ನು ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಅಂಧ ಮಕ್ಕಳ ಶಾಲೆಗೆ ದಿನಸಿ, ಆಹಾರ ಸಾಮಾಗ್ರಿಗಳು, ಆಸ್ಪತ್ರೆಯಲ್ಲಿನ ಗರ್ಭಿಣಿಯರು, ರೋಗಿಗಳಿಗೆ ಹಾಲು - ಹಣ್ಣು ಹಾಗೂ ನಿರಾಶ್ರಿತರಿಗೆ ಆಹಾರ ವಿತರಿಸುವ ಮೂಲಕ ಆಚರಿಸಲಾಯಿತು.#HappyBirthdayDKS pic.twitter.com/v77sWcr5bV
— Karnataka Congress (@INCKarnataka) May 15, 2020
ಕರ್ನಾಟಕ ಕಾಂಗ್ರೆಸ್ ಟ್ವಿಟ್ಟರ್ ಖಾತೆಯಲ್ಲಿ ಡಿಕೆ ಶಿವಕುಮಾರ್ ಹುಟ್ಟುಹಬ್ಬ ಫೋಟೋಗಳನ್ನು ಹಂಚಿಕೊಳ್ಳಲಿದೆ. ಸಾಕಷ್ಟು ಸಂಖ್ಯೆಯ ಬೆಂಬಲಿಗರು ಅಭಿಮಾನಿಗಳು ಶುಭಾಶಯ ತಿಳಿಸಿದ್ದಾರೆ.