ಸತ್ಯನಾರಾಯಣ ರಾವ್ ಗೆ ನಿವೃತ್ತಿ ಕೊನೆ ದಿನ ಬಂತು ನೇಮಕಾತಿ ಆರ್ಡರ್!
ಕಾರಾಗೃಹ ಇಲಾಖೆಯ ಮಾಜಿ ಡಿಜಿಪಿ ಸತ್ಯನಾರಾಯಣ ರಾವ್ ಗೆ ಅಗ್ನಿಶಾಮಕ ದಳದ ಮುಖ್ಯಸ್ಥರ ಹುದ್ದೆ. ಪರಪ್ಪನ ಅಗ್ರಹಾರದ ಕೇಂದ್ರೀಯ ಕಾರಾಗೃಹದ ಪ್ರಕರಣದಲ್ಲಿ ಎತ್ತಂಗಡಿಯಾಗಿದ್ದ ಸತ್ಯನಾರಾಯಣ ರಾವ್.
ಬೆಂಗಳೂರು, ಜುಲೈ 31: ಪರಪ್ಪನ ಅಗ್ರಹಾರ ಜೈಲು ಅಕ್ರಮ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಕಾರಾಗೃಹ ಡಿಜಿಪಿ ಸ್ಥಾನದಿಂದ ಎತ್ತಂಗಡಿಯಾಗಿದ್ದ ಸತ್ಯನಾರಾಯಣ ರಾವ್ ಅವರಿಗೆ ಅವರ ನಿವೃತ್ತಿಯ ಕೊನೆಯ ದಿನ ಹೊಸ ಹುದ್ದೆಯನ್ನು ನೀಡಲಾಗಿದೆ!
ಅಚ್ಚರಿಯಾದರೂ ಇದು ಸತ್ಯ. ಕಾರಾಗೃಹ ಡಿಜಿಪಿ ಸ್ಥಾನದಿಂದ ಎತ್ತಂಗಡಿಯಾಗಿದ್ದ ಸತ್ಯನಾರಾಯಣ ರಾವ್ ಅವರಿಗೆ ಯಾವುದೇ ಹುದ್ದೆಯನ್ನು ತೋರಿಸಿರಲಿಲ್ಲ. ಆದರೆ, ಇದೀಗ ರಾವ್ ಅವರನ್ನು ಅಗ್ನಿಶಾಮಕ ದಳ ಮುಖ್ಯಸ್ಥರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ಅದೂ ಅವರ ಸರ್ಕಾರಿ ಸೇವೆಯ ನಿವೃತ್ತಿಯ ದಿನದಂದು ಈ ಹುದ್ದೆ ನೀಡಲಾಗಿದೆ. ಅದರಂತೆ, ನಾಳೆ (ಆಗಸ್ಟ್ 1) ಅಗ್ನಿಶಾಮಕ ದಳದ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಲಿರುವ ಅವರು ಸಂಜೆ ವೇಳೆಗೆ ನಿವೃತ್ತಿಯಾಗಲಿದ್ದಾರೆ.
ರಾಜ್ಯ ಅಗ್ನಿಶಾಮಕ ದಳದ ಮುಂದಿನ ಮುಖ್ಯಸ್ಥರನ್ನಾಗಿ, ನೀಲಮಣಿ ಎನ್. ರಾಜು ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಲಾಗಿದೆ. ನೀಲಮಣಿ ಅವರು ಆಂತರಿಕ ಭದ್ರತಾ ವಿಭಾಗದ ಡಿಡಿಪಿಯಾಗಿ ದ್ದಾರೆ.
ಆಗಸ್ಟ್ 1ರ ಸಂಜೆ ವೇಳೆ ನಿವೃತ್ತರಾಗಲಿರುವ ಸತ್ಯನಾರಾಯಣ ರಾವ್ ಅವರಿಂದ ನೀಲಮಣಿ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications