Karnataka Rain: ಮಳೆ ಆರ್ಭಟ... ಮುಂದಿನ 72 ಗಂಟೆಗಳ ಕಾಲ ಅಬ್ಬರಿಸಲಿದೆ ಭಾರಿ ಮಳೆ!
ಕರ್ನಾಟಕದಲ್ಲಿ ಮಳೆ ಆರ್ಭಟ ಬಲು ಜೋರಾಗುತ್ತಿದ್ದು, ಮಳೆಯ ಕಾಟಕ್ಕೆ ಜನರು ಇದೀಗ ಟೆನ್ಷನ್ ಆಗಿದ್ದಾರೆ. ಮಳೆ... ಮಳೆ... ಮಳೆ... ಹೀಗೆ ಚಳಿಗಾಲ ಬಂದರೂ ಕರ್ನಾಟಕದ ಎಲ್ಲೆಲ್ಲೂ ಮಳೆ ಬಗ್ಗೆ ಚಿಂತೆ ಶುರುವಾಗಿದೆ. ಕನ್ನಡಿಗರ ರಾಜಧಾನಿ ಬೆಂಗಳೂರಿನಿದ ಹಿಡಿದು ಉತ್ತರ ಕರ್ನಾಟಕ ಟು ದಕ್ಷಿಣ ಕರ್ನಾಟಕ ಹಾಗೂ ಮಲೆನಾಡು & ಕರಾವಳಿ ಭಾಗದಲ್ಲೂ ಈ ರೀತಿಯಾಗಿ ಮಳೆಯು ಅಬ್ಬರಿಸುತ್ತಿದೆ. ಅದರಲ್ಲೂ, ಮುಂದಿನ 72 ಗಂಟೆಗಳ ಕಾಲ ನಮ್ಮ ಕರ್ನಾಟಕದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಭಾರಿ ಮಳೆ!
ಅದ್ಯಾವ ಕೇಡುಗಾಲಕ್ಕೆ ಅಂತಾ ಚಳಿಗಾಲ ಡಿಸೆಂಬರ್ ತಿಂಗಳಲ್ಲಿ ಕೂಡ ಕರ್ನಾಟಕದಲ್ಲಿ ಈ ರೀತಿ ಮಳೆ ಸುರಿಯುತ್ತಿದೆಯೋ ಗೊತ್ತಿಲ್ಲ. ಕಳೆದ ಒಂದು ವಾರ ಪೂರ್ತಿ ಮಳೆ ಸುರಿದಿದ್ದು, ಜನರು ಕೂಡ ಇದನ್ನ ನೋಡಿ ರೊಚ್ಚಿಗೆದ್ದಿದ್ದಾರೆ. ಮನುಷ್ಯರು ಪ್ರಕೃತಿ ಮಾತೆಯ ಮೇಲೆ, ತೀವ್ರವಾಗಿ ದೌರ್ಜನ್ಯ ನಡೆಸುತ್ತಿರುವ ಕಾರಣಕ್ಕೆ ಹೀಗೆಲ್ಲಾ ಆಗುತ್ತಿದೆ ಎಂಬ ಆರೋಪ ಈಗ ಕೇಳಿ ಬರುತ್ತಿದೆ. ಇಂತಹ ಸಮಯದಲ್ಲೇ, ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 72 ಗಂಟೆ ಕಾಲ ಅಬ್ಬರಿಸಲಿದೆ ಭಾರಿ ಮಳೆ ಎಂದು ವಾರ್ನಿಂಗ್ ಕೊಡಲಾಗಿದೆ!

ಕರ್ನಾಟಕದ ಹಲವು ಜಿಲ್ಲೆಗಳಿಗೆ ಮತ್ತೆ ಮಳೆ!
ಮಳೆ ಯಾಕೆ ಈ ರೇಂಜ್ಗೆ ಸುರಿಯುತ್ತಿದೆ ಅಂದ್ರೆ, ಸದಾ ಶಾಂತವಾಗಿ ಇರುತ್ತಿದ್ದ ಬಂಗಾಳಕೊಲ್ಲಿ ಇದೀಗ ರೊಚ್ಚಿಗೆದ್ದಿದೆ. ಯಾಕಂದ್ರೆ ಬಂಗಾಳಕೊಲ್ಲಿ ಪ್ರದೇಶದಲ್ಲಿ ಪದೇ ಪದೇ ವಾತಾವರಣ ಹಾಳಾಗಿ ಹೋಗುತ್ತಿದ್ದು, ಜನರು ಕೂಡ ಇದನ್ನ ಕಂಡು ಬೆಚ್ಚಿ ಬಿದ್ದಿದ್ದಾರೆ. ಇಂತಹ ವೇಳೆ ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಿಗೆ ಮತ್ತೆ ಮಳೆ ಆರ್ಭಟದ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಹಾಗಾದ್ರೆ, ಯಾವೆಲ್ಲಾ ಭಾಗದಲ್ಲಿ ಮಳೆ ಸುರಿಯಲಿದೆ? ಕರ್ನಾಟಕ ರಾಜ್ಯದ ಯಾವ ಯಾವ ಜಿಲ್ಲೆಗೆ ಮಳೆ ಬರಲಿದೆ? ಮುಂದೆ ಓದಿ.
ಡಿಸೆಂಬರ್ 7 ಅಂದ್ರೆ ಇಂದು, ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ. ಹಾಗೇ ಅವಳಿ ನಗರ ಹುಬ್ಬಳ್ಳಿ-ಧಾರವಾಡ, ಕುಂದಾನಗರಿ ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸುರಿಯುವ ಮುನ್ನೆಚ್ಚರಿಕೆ ನೀಡಲಾಗಿದೆ. ಹಾಗೇ ಡಿಸೆಂಬರ್ 8, ಅಂದ್ರೆ ನಾಳೆ ಕೂಡ ಭಾರಿ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದ್ದು, ಹುಬ್ಬಳ್ಳಿ-ಧಾರವಾಡ, ಕುಂದಾನಗರಿ ಬೆಳಗಾವಿ ಜಿಲ್ಲೆಗಳು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಗೂ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ.
ಬೆಂಗಳೂರಿಗೂ ಕಾದಿದೆ ಮಳೆ ಕಂಟಕ!
ಡಿಸೆಂಬರ್ 9ರ ಸೋಮವಾರ ಬೆಂಗಳೂರಲ್ಲಿ ಕೂಡ ಭಾರಿ ಮಳೆ ಬೀಳುವ ಮುನ್ಸೂಚನೆಯ ನೀಡಲಾಗಿದ್ದು, ಹುಬ್ಬಳ್ಳಿ-ಧಾರವಾಡ, ಕುಂದಾನಗರಿ ಬೆಳಗಾವಿ ಜಿಲ್ಲೆಗಳು ಸೇರಿದಂತೆ ಉತ್ತರ ಕನ್ನಡ ಜಿಲ್ಲೆ & ಉಡುಪಿ ಹಾಗೂ ಮಂಗಳೂರು ಭಾಗದಲ್ಲಿ ಕೂಡ ಭಾರಿ ಮಳೆಯ ಕುರಿತು ಮುನ್ನೆಚ್ಚರಿಕೆ ನೀಡಲಾಗಿದೆ. ಮತ್ತೊಂದು ಕಡೆ ಮತ್ತೆ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣ ಆಗುತ್ತಿದೆ. ಹೀಗಾಗಿ, ಹವಾಮಾನ ವೈಪರೀತ್ಯದ ಪರಿಣಾಮ ಡಿಸೆಂಬರ್ 12ರ ಬಳಿಕ ಮತ್ತಷ್ಟು ಮಳೆ ಸುರಿಯುವ ಎಚ್ಚರಿಕೆ ಸಿಕ್ಕಿದೆ!
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Summer Walking: ಬೇಸಿಗೆಯಲ್ಲಿ ವಾಕಿಂಗ್ ಮಾಡುವವರು ಈ ನಿಯಮ ತಪ್ಪದೇ ಪಾಲಿಸಿ.. -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications