Karnataka Ratna Award : ಪುನೀತ್ಗೆ 'ಕರ್ನಾಟಕ ರತ್ನ' ಪ್ರಶಸ್ತಿ ಪ್ರದಾನ
ಬೆಂಗಳೂರು, ನವೆಂಬರ್ 01: ನಟನೆಯಿಂದ ಮಾತ್ರವಲ್ಲದೇ ಸರಳ ಬದುಕು, ಸಾಮಾಜಿಕ ಕಾರ್ಯ ಮತ್ತು ಸಾಧನೆಯಿಂದ ಚಿರಸ್ಥಾಯಿಯಾಗಿರುವ ದಿವಂಗತ ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರಾಜ್ಯ ಸರ್ಕಾರ 67ನೇ ಕನ್ನಡ ರಾಜ್ಯೋತ್ಸವದಂದು 'ಕರ್ನಾಟಕ ರತ್ನ' ಪ್ರಶಸ್ತಿ ಪ್ರದಾನ ಮಾಡಿದೆ.
ಬೆಂಗಳೂರಿನ ವಿಧಾನಸೌಧದ ಮುಂದೆ ಮಂಗಳವಾರ ಆಯೋಜಿಸಿದ್ದ ಬೃಹತ್ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಿವಂಗತ ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ 'ಕರ್ನಾಟಕ ರತ್ನ' ಪ್ರಶಸ್ತಿ ನೀಡಿದರು.
ಸಮಾರಂಭದಲ್ಲಿ ಪುನೀತ್ ಸಹೋದರರಾದ ಡಾ. ಶಿವರಾಜ್ ಕುಮಾರ್, ರಾಘವೇಂದ್ರ ರಾಜಕುಮಾರ್ ಸೇರಿದಂತೆ ಡಾ.ರಾಜ್ ಕುಟುಂಬದ ಎಲ್ಲ ಸದಸ್ಯರು ಪಾಲ್ಗೊಂಡಿದ್ದರು. ವಿಶೇಷ ಅತಿಥಿಗಳಾಗಿ ನಟ ರಜನಿಕಾಂತ್ ಮತ್ತು ತೆಲುಗು ನಟ ಜ್ಯೂನಿಯರ್ ಎನ್ಟಿಆರ್ ಆಗಮಿಸಿದ್ದರು. ವಿಧಾನಸೌಧದ ಮುಂದೆ ಸಾವಿರಾರು ಜನರು, ಅಪ್ಪು ಅಭಿಮಾನಿಗಳು ಜಮಾಯಿಸಿದ್ದರು.

ತಮ್ಮ ನೆಚ್ಚಿನ ನಟ ಅಪ್ಪು ಅವರಿಗೆ 'ಕರ್ನಾಟಕ ರತ್ನ' ಪ್ರಶಸ್ತಿ ನೀಡಿದ್ದಕ್ಕಾಗಿ ಸಹಸ್ರಾರು ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದರು. ನಟ ಪುನೀತ್ ರಾಜ್ ಕುಮಾರ್ ಅವರು ಕಡಿಮೆ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ್ದಾರೆ. ಅಂಗಾಂಗ ದಾನದ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.
ಸರಳತೆ, ಸಾಮಾಜಿಕ ಕಾರ್ಯಗಳಿಂದ ಲಕ್ಷಾಂತರ ಜನರ ಮನಸ್ಸಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಅವರ ಹೆಸರನ್ನು ಸದಾ ಅಜರಾಮರವಾಗಿಸಲು ಅಪ್ಪು ಅವರಿಗೆ ರಾಜ್ಯದ ಅತ್ಯುನ್ನದ 'ಕರ್ನಾಟಕ ರತ್ನ' ಪ್ರಶಸ್ತಿ ನೀಡಲಾಗುತ್ತಿದೆ. ಡಾ.ರಾಜ್ಕುಮಾರ್ ಅವರ ನಂತರ ಪುನೀತ್ ರಾಜ್ ಕುಮಾರ್ ಅವರಿಗೆ ಈ ಪ್ರಶಸ್ತಿ ದೊರೆತಿದೆ ಎಂದು ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ತಿಳಿಸಿದ್ದರು.
ಪ್ರಶಸ್ತಿ ಪ್ರದಾನ ಸಮಾರಂಭಕ್ಕೂ ಮುನ್ನ ಗಾಯಕರಾದ ವಿಜಯಪ್ರಕಾಶ್, ಚೈತ್ರ ಅವರ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಕನ್ನಡ ಗೀತೆಗಳು, ಮುಖ್ಯವಾಗಿ ಡಾ.ಪುನೀತ್ ರಾಜ್ ಕುಮಾರ್ ನಟಿಸಿದ ಚಿತ್ರಗಳ ಗೀತೆಗಳನ್ನು ಹಾಡಿ ಸ್ಮರಿಸಲಾಯಿತು. ಅಭಿಮಾನಿಗಳ ಜನಸಾಗರದಲ್ಲಿ ಕನ್ನಡ ಬಾವುಟಗಳು, ಅಪ್ಪು ಭಾವಚಿತ್ರವುಳ್ಳ ಕನ್ನಡ ಬಾವುಟಗಳು ರಾರಾಜಿಸಿದವು.
ಮಳೆ ಸಿಂಚನ ಮಧ್ಯೆಯು ಅಪ್ಪುಗೆ ಪ್ರಶಸ್ತಿ ಪ್ರದಾನ
ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಶುರುವಾದ ಮಳೆಯ ನಡುವೆಯು 'ಕರ್ನಾಟಕ ರತ್ನ' ಪ್ರಶಸ್ತಿ ಪ್ರದಾನ ಸಮಾರಂಭ ಸರಳವಾಗಿ ನಡೆಯಿತು. ಮಳೆಯಿಂದಾಗಿ 6.30ಕ್ಕೆ ಪೂರ್ಣಗೊಳ್ಳಬೇಕಿದ್ದ ಸಮಾರಂಭ 5.30ಕ್ಕೆ ಮುಕ್ತಾಯವಾಯಿತು. ಅಪ್ಪು ಅಭಿಮಾನಿಗಳು ಮಳೆಯಲ್ಲೇ ಸಂಭ್ರಮದಿಂದ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
-
ಕನ್ನಡಿಗರ ಮುಕ್ತಜ್ಞಾನದ ತಾಣ ‘ಕಣಜ’ಕ್ಕೆ ಸಿಕ್ಕಿಬಿಟ್ಟಿತೆ ಮುಕ್ತಿ? 3 ತಿಂಗಳಿಂದ ಕಣ್ಮರೆಯಾದ ವೆಬ್ಸೈಟ್ -
ಬೆಂಗಳೂರು ಕರಡು ಮತಪಟ್ಟಿ ಹಾಗೂ ಕಾಂಗ್ರೆಸ್ನ ಮತಚೋರಿಯ ಸುಳ್ಳುಗಳ ಅನಾವರಣ: ಲೇಖಕ ರಾಜೀವ ಹೆಗಡೆ ಬರಹ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್












Click it and Unblock the Notifications