ದೌರ್ಜನ್ಯ ಪ್ರಕರಣ: ಕರ್ನಾಟಕಕ್ಕೆ ಮೂರನೇ ಸ್ಥಾನ
ಬೆಂಗಳೂರು, ಆಗಸ್ಟ್, 20 : ಕರ್ನಾಟಕ ಒಂದಲ್ಲಾ ಒಂದರಲ್ಲಿ ದಾಖಲೆ ಬರೆಯುತ್ತಲೇ ಇದೆ. ದಾಖಲೆಗಳ ಸರಮಾಲೆ ಹೊತ್ತು ಬೀಗುತ್ತಿರುವ ರಾಜ್ಯ ಇನ್ನೊಂದು ದಾಖಲೆಯನ್ನು ತನ್ನ ಪಟ್ಟಿಗೆ ಸೇರಿಸಿಕೊಂಡಿದೆ. ಆದರೆ ಇದಕ್ಕೇನೂ ಸಂತೋಷ ಪಡಬೇಕಿಲ್ಲ. ಏಕೆಂದರೆ ಇದು ದಾಖಲೆ ಬರೆದದ್ದು ದೌರ್ಜನ್ಯ ಪ್ರಕರಣದಲ್ಲಿ.
ರಾಷ್ಟ್ರದಲ್ಲಿ ದಾಖಲಾದ ಹಲವಾರು ದೌರ್ಜನ್ಯ ಪ್ರಕರಣದಲ್ಲಿ ಕರ್ನಾಟಕ ದಾಖಲೆ ಬರೆದಿದ್ದು, ಹೆಚ್ಚಿನದಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನರ ಮೇಲೆ ಶೋಷಣೆ ನಡೆದಿರುವುದು ದೃಢಪಟ್ಟಿದೆ.[ಪಬ್ಲಿಕ್ ಟಾಯ್ಲೆಟ್ ನಿರ್ಮಾಣದಲ್ಲಿ ಕರ್ನಾಟಕ ನಂ.5]

ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಬಿಹಾರ್, ಉತ್ತರ ಪ್ರದೇಶ ಮೊದಲೆರಡು ರಾಂಕ್ ಪಡೆದರೆ ಕರ್ನಾಟಕ ಮೂರನೇ ರಾಂಕ್ ಪಡೆದಿದೆ. 2013ರಲ್ಲಿ 4ನೇ ಸ್ಥಾನದಲ್ಲಿದ್ದ, ಕರ್ನಾಟಕ 2014ರಲ್ಲಿ 3ನೇ ಸ್ಥಾನಕ್ಕೆ ಏರಿದೆ. ಇದರಲ್ಲಿ 1 ಲಕ್ಷಕ್ಕೂ ಹೆಚ್ಚು ದೌರ್ಜನ್ಯಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ್ದಾಗಿದೆ.
ದೌರ್ಜನ್ಯಗಳು ಜಿಲ್ಲಾವಾರು, ಪ್ರದೇಶವಾರು ನಾನಾ ಅವತಾರಣಿಕೆಯಲ್ಲಿ ಕಂಡು ಬರುತ್ತಿದ್ದು, ಬಹಳಷ್ಟು ಮುಗ್ದ ಮಂದಿ ಈ ಹಿಂಸೆಯಲ್ಲಿ ನಲುಗುತ್ತಿದ್ದಾರೆ. ಹೈದರಾಬಾದ್ ಕರ್ನಾಟಕ, ಉತ್ತರ ಕರ್ನಾಟಕದ ಹಲವಾರು ಹಿಂದುಳಿದ ಜಿಲ್ಲೆಗಳ ಜನರು ದೌರ್ಜನ್ಯಕ್ಕೆ ಒಳಗಾಗಿದ್ದಾರೆ.
ಕೂದಲು ಕತ್ತರಿಸುವಿಕೆಗೆ ನಿಷೇಧ, ಶಾಲೆಯಲ್ಲಿ ದಲಿತ ಹೆಣ್ಣು ಮಗಳ ಅಡುಗೆ ಬಗ್ಗೆ ನಕಾರ ಇಂತಹ ಪ್ರಕರಣಗಳು ಕೊಪ್ಪಳ, ಬಳ್ಳಾರಿ, ತುಮಕೂರು, ಮೈಸೂರು ಜಿಲ್ಲೆಗಳಲ್ಲಿ ಹೆಚ್ಚಿನದಾಗಿ ವರದಿಯಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದಲ್ಲಿ ದೌರ್ಜನ್ಯ ಪ್ರಕರಣಗಳು ಹೆಚ್ಚಲು ಪ್ರತ್ಯಕ್ಷ ಕಾರಣ ಜಾತಿ ಕುರಿತಾದ ಅತಿಯಾದ ಅಭಿಮಾನ. ಇದು ರಾಜ್ಯದ ಗೌರವಕ್ಕೆ ಧಕ್ಕೆ ತರುತ್ತಿದೆ. ಜಾತಿ ತಾರತಮ್ಯ ಕಡಿಮೆಯಾದಲ್ಲಿ ದೌರ್ಜನ್ಯ ಪ್ರಕರಣಗಳು ಸಾಕಷ್ಟು ಕಡಿಮೆಯಾಗಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಆಶಯ ವ್ಯಕ್ತಪಡಿಸಿದ್ದಾರೆ.
-
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications