ದೌರ್ಜನ್ಯ ಪ್ರಕರಣ: ಕರ್ನಾಟಕಕ್ಕೆ ಮೂರನೇ ಸ್ಥಾನ
ಬೆಂಗಳೂರು, ಆಗಸ್ಟ್, 20 : ಕರ್ನಾಟಕ ಒಂದಲ್ಲಾ ಒಂದರಲ್ಲಿ ದಾಖಲೆ ಬರೆಯುತ್ತಲೇ ಇದೆ. ದಾಖಲೆಗಳ ಸರಮಾಲೆ ಹೊತ್ತು ಬೀಗುತ್ತಿರುವ ರಾಜ್ಯ ಇನ್ನೊಂದು ದಾಖಲೆಯನ್ನು ತನ್ನ ಪಟ್ಟಿಗೆ ಸೇರಿಸಿಕೊಂಡಿದೆ. ಆದರೆ ಇದಕ್ಕೇನೂ ಸಂತೋಷ ಪಡಬೇಕಿಲ್ಲ. ಏಕೆಂದರೆ ಇದು ದಾಖಲೆ ಬರೆದದ್ದು ದೌರ್ಜನ್ಯ ಪ್ರಕರಣದಲ್ಲಿ.
ರಾಷ್ಟ್ರದಲ್ಲಿ ದಾಖಲಾದ ಹಲವಾರು ದೌರ್ಜನ್ಯ ಪ್ರಕರಣದಲ್ಲಿ ಕರ್ನಾಟಕ ದಾಖಲೆ ಬರೆದಿದ್ದು, ಹೆಚ್ಚಿನದಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನರ ಮೇಲೆ ಶೋಷಣೆ ನಡೆದಿರುವುದು ದೃಢಪಟ್ಟಿದೆ.[ಪಬ್ಲಿಕ್ ಟಾಯ್ಲೆಟ್ ನಿರ್ಮಾಣದಲ್ಲಿ ಕರ್ನಾಟಕ ನಂ.5]

ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಬಿಹಾರ್, ಉತ್ತರ ಪ್ರದೇಶ ಮೊದಲೆರಡು ರಾಂಕ್ ಪಡೆದರೆ ಕರ್ನಾಟಕ ಮೂರನೇ ರಾಂಕ್ ಪಡೆದಿದೆ. 2013ರಲ್ಲಿ 4ನೇ ಸ್ಥಾನದಲ್ಲಿದ್ದ, ಕರ್ನಾಟಕ 2014ರಲ್ಲಿ 3ನೇ ಸ್ಥಾನಕ್ಕೆ ಏರಿದೆ. ಇದರಲ್ಲಿ 1 ಲಕ್ಷಕ್ಕೂ ಹೆಚ್ಚು ದೌರ್ಜನ್ಯಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ್ದಾಗಿದೆ.
ದೌರ್ಜನ್ಯಗಳು ಜಿಲ್ಲಾವಾರು, ಪ್ರದೇಶವಾರು ನಾನಾ ಅವತಾರಣಿಕೆಯಲ್ಲಿ ಕಂಡು ಬರುತ್ತಿದ್ದು, ಬಹಳಷ್ಟು ಮುಗ್ದ ಮಂದಿ ಈ ಹಿಂಸೆಯಲ್ಲಿ ನಲುಗುತ್ತಿದ್ದಾರೆ. ಹೈದರಾಬಾದ್ ಕರ್ನಾಟಕ, ಉತ್ತರ ಕರ್ನಾಟಕದ ಹಲವಾರು ಹಿಂದುಳಿದ ಜಿಲ್ಲೆಗಳ ಜನರು ದೌರ್ಜನ್ಯಕ್ಕೆ ಒಳಗಾಗಿದ್ದಾರೆ.
ಕೂದಲು ಕತ್ತರಿಸುವಿಕೆಗೆ ನಿಷೇಧ, ಶಾಲೆಯಲ್ಲಿ ದಲಿತ ಹೆಣ್ಣು ಮಗಳ ಅಡುಗೆ ಬಗ್ಗೆ ನಕಾರ ಇಂತಹ ಪ್ರಕರಣಗಳು ಕೊಪ್ಪಳ, ಬಳ್ಳಾರಿ, ತುಮಕೂರು, ಮೈಸೂರು ಜಿಲ್ಲೆಗಳಲ್ಲಿ ಹೆಚ್ಚಿನದಾಗಿ ವರದಿಯಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದಲ್ಲಿ ದೌರ್ಜನ್ಯ ಪ್ರಕರಣಗಳು ಹೆಚ್ಚಲು ಪ್ರತ್ಯಕ್ಷ ಕಾರಣ ಜಾತಿ ಕುರಿತಾದ ಅತಿಯಾದ ಅಭಿಮಾನ. ಇದು ರಾಜ್ಯದ ಗೌರವಕ್ಕೆ ಧಕ್ಕೆ ತರುತ್ತಿದೆ. ಜಾತಿ ತಾರತಮ್ಯ ಕಡಿಮೆಯಾದಲ್ಲಿ ದೌರ್ಜನ್ಯ ಪ್ರಕರಣಗಳು ಸಾಕಷ್ಟು ಕಡಿಮೆಯಾಗಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಆಶಯ ವ್ಯಕ್ತಪಡಿಸಿದ್ದಾರೆ.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications