ಮಹದಾಯಿ ನ್ಯಾಯಾಧಿಕರಣದ ಅವಧಿ ವಿಸ್ತರಣೆ ಮನವಿ ತಿರಸ್ಕರಿಸಿದ ಕರ್ನಾಟಕ
ಬೆಂಗಳೂರು, ಫೆಬ್ರವರಿ 09: ಮಹದಾಯಿ ವಿಚಾರದಲ್ಲಿ ಕರ್ನಾಟಕ ಸರ್ಕಾರವು ತನ್ನ ಕಠಿಣ ನಿಲುವನ್ನು ಮುಂದುವರೆಸಿದೆ. ಮಹದಾಯಿ ನ್ಯಾಯಾಧಿಕರಣದ ಅಧಿಕಾರಾವಧಿಯನ್ನು ವಿಸ್ತರಿಸುವಂತೆ ಗೋವಾ ಸರ್ಕಾರ ಮಾಡಿದ್ದ ಮನವಿಯನ್ನು ರಾಜ್ಯ ಸರ್ಕಾರವು ತಿರಸ್ಕರಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ತಜ್ಞರು ಮತ್ತು ಕಾನೂನು ಪರಿಣತರ ಉನ್ನತ ಸಭೆಯಲ್ಲಿ ಗೋವಾ ಮನವಿಯನ್ನು ಪರಿಶೀಲಿಸಿ ತಿರಸ್ಕರಿಸಲಾಗಿದೆ.
ನ್ಯಾಯಾಧಿಕರಣದ ಅಧಿಕಾರಾವಧಿ ಆಗಸ್ಟ್ 2018 ಕ್ಕೆ ಮುಗಿಯುತ್ತಿದ್ದು ಅದರ ಅವಧಿ ವಿಸ್ತರಿಸಲು ಗೋವಾ ಸರ್ಕಾರ ಮನವಿ ಮಾಡಿತ್ತು. ಆದರೆ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು ಮಹದಾಯಿ ವಿವಾದ ತ್ವರಿತವಾಗಿ ಇತ್ಯರ್ಥವಾಗಲೆಂದು ಕರ್ನಾಟಕವು ನ್ಯಾಯಾಧಿಕಾರದ ಅವಧಿ ವಿಸ್ತರಣೆ ಮನವಿಯನ್ನು ತಿರಸ್ಕರಿಸಿದೆ.

ಮಹದಾಯಿ ನ್ಯಾಯಾಧಿಕರಣವು 2010ರಲ್ಲಿ ಅಸ್ಥಿತ್ವಕ್ಕೆ ಬಂತು. ನ್ಯಾಯಾಧಿಕರಣದ ಅಧಿಕಾರವಧಿಯನ್ನು ಎರಡು ಬಾರಿ ಮಾತ್ರ ಏರಿಸಲು ಅವಕಾಶವಿದ್ದು, ಈಗಾಗಲೇ ಎರಡು ಬಾರಿ ಅಧಿಕಾರಾವಧಿ ವಿಸ್ತರಣೆ ಆಗಿದೆ. ಮತ್ತೊಮ್ಮೆ ಅಧಿಕಾರಾವಧಿ ವಿಸ್ತರಣೆ ಮಾಡಲು ಕಾನೂನು ತಿದ್ದುಪಡಿಯ ಅವಶ್ಯಕತೆ ಇದೆ.
ವಿವಾದ ಬಗೆಹರಿಸುವಲ್ಲಿ ವಿಳಂಬವಾದರೆ ಅದು ಕುಡಿಯುವ ನೀರು ಯೋಜನೆಗಳಿಗೆ ಹಿನ್ನಡೆಯಾಗುತ್ತದೆ ಎಂಬ ವಾದ ಮಂಡಿಸಿರುವ ಕರ್ನಾಟಕವು ಮತ್ತೊಮ್ಮೆ ನ್ಯಾಯಾಧಿಕರಣದ ಅಧಿಕಾರವಧಿ ವಿಸ್ತರಣೆಗೆ ನಕಾರ ಹೇಳಿದೆ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ











Click it and Unblock the Notifications