ಆಟೋ, ಕ್ಯಾಬ್ ಚಾಲಕರು ಸರ್ಕಾರದ 5000 ರು ಪಡೆಯುವುದು ಹೇಗೆ?
ಬೆಂಗಳೂರು, ಮೇ 8: ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕ ರಾಜ್ಯದ ಟ್ಯಾಕ್ಸಿ, ಕ್ಯಾಬ್ ಮತ್ತು ಆಟೋ ಚಾಲಕರಿಗೆ 5,000 ರೂ ಸಹಾಯ ಧನವನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದರು.
Recommended Video
ಹಣ ಹೇಗೆ ಪಡೆಯುವುದು ಎಂಬ ಗೊಂದಲ ಚಾಲಕರಲ್ಲಿ ಮೂಡಿತ್ತು. ಇದೀಗ ವಿಶೇಷ ಪ್ಯಾಕೇಜ್ನಲ್ಲಿ ಘೋಷಣೆಯಾದ ಹಣವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಸಲುವಾಗಿ ಸುತ್ತೋಲೆ ಹೊರಡಿಸಿರುವ ಸಾರಿಗೆ ಇಲಾಖೆ 'ಸೇವಾ ಸಿಂಧು' ಜಾಲತಾಣದ ಮೂಲಕ ಅರ್ಜಿ ಆಹ್ವಾನಿಸಿದೆ.
ಸೇವಾ ಸಿಂಧು ಜಾಲತಾಣದ (sevasindhu.karnataka.gov.in) ಮೂಲಕ ಅರ್ಜಿ ಸಲ್ಲಿಸುವ ಫಲಾನುಭವಿಗಳಿಗೆ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುವುದು. ಎಲ್ಲರೂ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಅದನ್ನು ಹೊರತು ಬೇರೆ ಯಾವುದೇ ರೂಪದಲ್ಲಿ ಸಲ್ಲಿಸಲಾಗುವ ಅರ್ಜಿ ಸ್ವೀಕೃತವಲ್ಲ ಎಂದೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಗಳನ್ನು ವೆಬ್ಸೈಟಿನಲ್ಲಿ ವೀಕ್ಷಿಸಬಹುದಾಗಿದೆ.

ಲಾಕ್ಡೌನ್ ಸಂಕಷ್ಟಕ್ಕೆ ಸಿಲುಕಿರುವವರ ಸಲುವಾಘಿ ರಾಜ್ಯ ಸರ್ಕಾರ 1,610 ಕೋಟಿ ರೂ ಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿತ್ತು.












Click it and Unblock the Notifications