ಕೇರಳಕ್ಕೆ ಸಾರಿಗೆ ನಿಗಮದ ಯಾವ ಬಸ್ ತೆರಳುತ್ತಿಲ್ಲ, ಖಾಸಗಿ ವ್ಯವಸ್ಥೆಯೂ ಇಲ್ಲ
ಬೆಂಗಳೂರು, ಜನವರಿ 3: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಗುರುವಾರ ಕೇರಳಕ್ಕೆ ತೆರಳುವ ಬಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ಆದ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಕೇರಳ ರಾಜ್ಯ ಬಂದ್ ನಡೆಸುತ್ತಿವೆ. ಆ ಕಾರಣಕ್ಕೆ ಕೇರಳಕ್ಕೆ ಬಸ್ ಸೇವೆ ನಿಲ್ಲಿಸಲಾಗಿದೆ.
ಮಂಗಳೂರು ವಿಭಾಗದ ಎರಡು ಕೆಎಸ್ಸಾರ್ಟೀಸಿ ಬಸ್ ಗಳಿಗೆ ಕೇರಳದಲ್ಲಿ ಪ್ರತಿಭಟನಾನಿರತರು ಹಾನಿ ಮಾಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಎರಡು ಬಸ್ ಗಳನ್ನು ಕಾಸರಗೋಡು ಬಸ್ ನಿಲ್ದಾಣದಲ್ಲಿ ನಿಲ್ಲಿಸಲಾಗಿತ್ತು. ಗುರುವಾರ ಬೆಳಗ್ಗೆ ಪ್ರತಿಭಟನಾನಿರತರು ಕಲ್ಲುತೂರಾಟ ನಡೆಸಿದ್ದಾರೆ.
ಬೆಂಗಳೂರು ಕೇಂದ್ರ ವಲಯ, ಮೈಸೂರು, ಮಂಗಳೂರು ಹಾಗೂ ಚಿಕ್ಕಮಗಳೂರಿನಿಂದ ಕೇರಳಕ್ಕೆ ತೆರಳಬೇಕಿದ್ದ ಎಲ್ಲ ಬಸ್ ಗಳ ಸೇವೆಯನ್ನೂ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಪೊಲೀಸರಿಂದ ಒಪ್ಪಿಗೆ ದೊರೆತ ನಂತರವಷ್ಟೇ ಪುನರಾರಂಭ ಮಾಡಲಾಗುವುದು. ಸಂಜೆ ಹೊತ್ತಿಗೆ ಮತ್ತೆ ಬಸ್ ಗಳ ಸಂಚಾರ ಆರಂಭ ಆಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇರಳ ಮೂಲದವರೂ ಸೇರಿ ಶಬರಿಮಲೆಗೆ ತೆರಳಬೇಕಿದ್ದ ಹಲವು ಭಕ್ತರಿಗೆ ಬೆಂಗಳೂರಿನಿಂದ ಯಾವುದೇ ಖಾಸಗಿ ಬಸ್ ಅಥವಾ ಟ್ಯಾಕ್ಸಿಗಳು ಸಹ ದೊರೆತಿಲ್ಲ. ಈಗಾಗಲೇ ನಿಗದಿ ಆಗಿದ್ದ ಪ್ರವಾಸಗಳನ್ನು ಸಹ ಖಾಸಗಿ ಟೂರಿಸ್ಟ್ ಆಪರೇಟರ್ ಗಳು ರದ್ದು ಮಾಡುತ್ತಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications