ಮುಷ್ಕರದಿಂದ 4 ದಿನದಲ್ಲಿ ಸಾರಿಗೆ ಇಲಾಖೆಗೆ ಆದ ನಷ್ಟ ಎಷ್ಟು?
ಬೆಂಗಳೂರು, ಡಿಸೆಂಬರ್ 15: ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿ ನಾಲ್ಕು ದಿನಗಳ ಅವಧಿ ಸಾರಿಗೆ ನೌಕರರು ಕೈಗೊಂಡಿದ್ದ ಮುಷ್ಕರದಿಂದಾಗಿ ನಾಲ್ಕು ಸಾರಿಗೆ ನಿಗಮಗಳಿಗೆ ಸಾಕಷ್ಟು ನಷ್ಟ ಉಂಟಾಗಿದೆ. ಸರ್ಕಾರಿ ನೌಕರರು ಎಂದು ಪರಿಗಣಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಇಟ್ಟುಕೊಂಡು ನಾಲ್ಕೂ ಸಾರಿಗೆ ನಿಗಮಗಳ ನೌಕರರು ಮುಷ್ಕರ ಆರಂಭಿಸಿದ್ದರು. ಇದರಿಂದ ರಾಜ್ಯಾದ್ಯಂತ ಸಾರ್ವಜನಿಕ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿತ್ತು.
ಸೋಮವಾರ ಸಾರಿಗೆ ಇಲಾಖೆ ಸಿಬ್ಬಂದಿ ತಮ್ಮ ಮುಷ್ಕರವನ್ನು ಹಿಂದಕ್ಕೆ ಪಡೆದಿದ್ದು, ಸರ್ಕಾರಿ ಬಸ್ಗಳು ರಸ್ತೆಗಿಳಿದಿವೆ. ಇದೀಗ ಮುಷ್ಕರದಿಂದ ಸಾರಿಗೆ ಇಲಾಖೆಯ ನಾಲ್ಕು ಸಾರಿಗೆ ನಿಗಮಗಳಿಗೆ ಒಟ್ಟು 64 ಕೋಟಿ ರೂಪಾಯಿ ನಷ್ಟ ಸಂಭವಿಸಿರುವುದಾಗಿ ತಿಳಿದುಬಂದಿದೆ.
ಕೊರೊನಾ ಲಾಕ್ ಡೌನ್ ನಂತರ ಇತ್ತೀಚೆಗಷ್ಟೇ ಸಾರಿಗೆ ಇಲಾಖೆ ಚೇತರಿಸಿಕೊಳ್ಳುತ್ತಿತ್ತು. ಮುಷ್ಕರದಿಂದ ಮತ್ತೆ ಹೊಡೆತ ಬಿದ್ದಿದ್ದು, ಮತ್ತಷ್ಟು ಆರ್ಥಿಕ ಸಂಕಷ್ಟ ಎದುರಾಗಿದೆ. ನಾಲ್ಕು ದಿನಗಳ ಮುಷ್ಕರದಿಂದ ಬಿಎಂಟಿಸಿಗೆ 10 ಕೋಟಿ ರೂ ನಷ್ಟವುಂಟಾಗಿದ್ದರೆ, ಕೆಎಸ್ಆರ್ ಟಿಸಿಗೆ 21 ಕೋಟಿ ರೂ ನಷ್ಟ ಸಂಭವಿಸಿದೆ. ಜೊತೆಗೆ ಮುಷ್ಕರದಿಂದಾಗಿ ರಾಜ್ಯಾದ್ಯಂತ 41 ಕೆಎಸ್ಆರ್ ಟಿಸಿ ಬಸ್ ಗಳಿಗೆ ಹಾನಿಯಾಗಿದೆ.

ಕೆ ಎಸ್ ಆರ್ ಟಿಸಿ, ಬಿಎಂಟಿಸಿ, ಈಶಾನ್ಯ ಸಾರಿಗೆ, ವಾಯುವ್ಯ ಸಾರಿಗೆ ನಾಲ್ಕು ನಿಗಮಗಳಿಗೆ ಒಟ್ಟು 64 ಕೋಟಿ ನಷ್ಟ ಸಂಭವಿಸಿರುವುದಾಗಿ ಬಿಎಂಟಿಸಿ ವ್ಯವಸ್ಥಾಪನಾ ನಿರ್ದೇಶಜ ಶಿಖಾ ಹಾಗೂ ಕೆಎಸ್ ಆರ್ ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕ ಪ್ರಭಾಕರ್ ರೆಡ್ಡಿ ಮಾಹಿತಿ ನೀಡಿದ್ದಾರೆ.
ಸಾರಿಗೆ ಇಲಾಖೆಯ ನಾಲ್ಕು ನಿಗಮದಲ್ಲಿ ಒಟ್ಟು ಒಂದು ಲಕ್ಷದ ಮೂವತ್ತು ಸಾವಿರ ನೌಕರರಿದ್ದಾರೆ. ಪ್ರತಿದಿನ ಆರು ಸಾವಿರ ಕೆಎಸ್ ಆರ್ ಟಿಸಿ ಬಸ್ಸುಗಳು ಸಂಚರಿಸುತ್ತವೆ. ಇದರಿಂದ ನಿತ್ಯ ಸುಮಾರು 7 ಕೋಟಿ ರೂ ಆದಾಯ ಬರುತ್ತಿತ್ತು. ನಿತ್ಯ ಸುಮಾರು 5000 ಬಿಎಂಟಿಸಿ ಬಸ್ಸುಗಳು ಸಂಚರಿಸುತ್ತಿದ್ದು, ದಿನವೂ ಸುಮಾರು 2.5 ಕೋಟಿ ರೂ ಆದಾಯ ಬರುತ್ತಿತ್ತು. ಇದೀಗ 10 ಕೋಟಿ ನಷ್ಟವಾಗಿದೆ.
ಇದರೊಂದಿಗೆ ನಿತ್ಯ 3,775 ಎನ್ ಇಕೆಆರ್ ಟಿಸಿ ಬಸ್ಸುಗಳು ಓಡಾಡುತ್ತಿದ್ದು, 4 ಕೋಟಿ ಸಂಗ್ರಹವಾಗುತ್ತಿತ್ತು. 3.402 ಎನ್ ಡಬ್ಲುಆರ್ ಟಿಸಿ ಬಸ್ಸುಗಳು ಸಂಚರಿಸುತ್ತಿದ್ದು, 4 ಕೋಟಿ 20 ಲಕ್ಷ ರೂ ಆದಾಯ ಬರುತ್ತಿತ್ತು. ಮುಷ್ಕರದಿಂದಾಗಿ ಸಾಕಷ್ಟು ನಷ್ಟ ಉಂಟಾಗಿರುವುದಾಗಿ ತಿಳಿದುಬಂದಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications