ಕರ್ನಾಟಕದ ಹತ್ತನೇ ತರಗತಿ ವಿದ್ಯಾರ್ಥಿಗಳು ದೇಶದಲ್ಲೇ ಬೆಸ್ಟ್!
ಬೆಂಗಳೂರು, ಡಿಸೆಂಬರ್ 15: ಇಂಗ್ಲಿಷ್, ಸಮಾಜವಿಜ್ಞಾನ, ಗಣಿತ, ವಿಜ್ಞಾನದ ವಿಷಯದಲ್ಲಿ ಹತ್ತನೇ ತರಗತಿಯ ಕರ್ನಾಟಕದ ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟದ ಸರಾಸರಿಗಿಂತ ಉತ್ತಮವಾಗಿದ್ದಾರೆ ಎಂಬ ಅಂಶವನ್ನು ನ್ಯಾಷನಲ್ ಕೌನ್ಸಿಲ್ ಫಾರ್ ಎಜುಕೇಷನಲ್ ರಿಸರ್ಚ್ ಅಂಡ್ ಟ್ರೇನಿಂಗ್ (ಎನ್ ಸಿಇಆರ್ ಟಿ) ಬಹಿರಂಗ ಪಡಿಸಿದೆ.
ವಿವಿಧ ಸಾಮಾಜಿಕ ಹಿನ್ನೆಲೆಯ ವಿದ್ಯಾರ್ಥಿಗಳ ಸರಾಸರಿ ಪ್ರದರ್ಶನದಲ್ಲಿ ಅಂಥ ವ್ಯತ್ಯಾಸವೇನಿಲ್ಲ. ಆದರೆ ಇತರ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹೋಲಿಸಿದರೆ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಗಣಿತ ವಿಷಯದಲ್ಲಿ ಬಹಳ ಹಿಂದುಳಿದಿದ್ದಾರೆ ಎಂದು ತಿಳಿದುಬಂದಿದೆ.
ಇಂಗ್ಲಿಷ್ ವಿಷಯದಲ್ಲಿ ಹೆಣ್ಣುಮಕ್ಕಳಿಗಿಂತ ಗಂಡುಮಕ್ಕಳು ಮುಂದಿದ್ದಾರೆ. ಇನ್ನುಳಿದ ಮೂರು ವಿಷಯಗಳಲ್ಲಿ ಎನ್ ಸಿಇಆರ್ ಟಿ ಸಮೀಕ್ಷೆಯಲ್ಲಿ ಹುಡುಗ ಮತ್ತು ಹುಡುಗಿಯರ ಮಧ್ಯೆ ಅಂಥ ವ್ಯತ್ಯಾಸ ಕಂಡುಬಂದಿಲ್ಲ. ಆದರೆ ನಾಲ್ಕೂ ವಿಷಯಗಳಲ್ಲಿ ಇಡೀ ದೇಶದ ವಿದ್ಯಾರ್ಥಿಗಳ ಸರಾಸರಿಗಿಂತ ಕರ್ನಾಟಕದ ಹತ್ತನೇ ತರಗತಿಯ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಬಹಳ ಮುಂದಿದ್ದಾರೆ ಎಂಬುದು ತಿಳಿದುಬಂದಿದೆ.

ದೇಶದ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪ್ರೌಢ ಶಿಕ್ಷಣ ವ್ಯವಸ್ಥೆಯ ಮೌಲ್ಯಮಾಪನ ಮಾಡಲಾಗಿತ್ತು. ಹತ್ತನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಅಳೆಯುವ ಸಲುವಾಗಿ ಪ್ರತಿ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದ ತಲಾ 358 ಶಾಲೆಗಳನ್ನು ಸ್ಯಾಂಪಲ್ ಆಗಿ ಆಯ್ಕೆ ಮಾಡಲಾಗಿತ್ತು.
ಸಮೀಕ್ಷೆ ನಡೆಸಿದ ತಂಡವು ಸಂಗ್ರಹವಾದ ದತ್ತಾಂಶವನ್ನು ಐಆರ್ ಟಿ (ಇಂಟರಿಮ್ ರೆಸ್ಪಾನ್ಸ್ ಥಿಯರಿ) ಪದ್ಧತಿಯಲ್ಲಿ ಮೌಲ್ಯಮಾಪನ ಮಾಡಿದೆ. ರಾಷ್ಟ್ರೀಯ ಸರಾಸರಿ 250 ಪಾಯಿಂಟ್ಸ್. ಅದಕ್ಕಾಗಿ ನಿಗದಿಪಡಿಸಿದ್ದ ಮೌಲ್ಯವು 175 ರಿಂದ 350 ಪಾಯಿಂಟ್ಸ್ ಮಧ್ಯೆ ಇತ್ತು.
ಕರ್ನಾಟಕದ ಹತ್ತನೇ ತರಗತಿ ವಿದ್ಯಾರ್ಥಿಗಳು ಇಂಗ್ಲಿಷ್ ನಲ್ಲಿ 259, ಗಣಿತದಲ್ಲಿ 260, ವಿಜ್ಞಾನ ಮತ್ತು ಸಮಾಜ ವಿಜ್ಞಾನದಲ್ಲಿ 266 ಪಾಯಿಂಟ್ಸ್ ಪಡೆದಿದ್ದಾರೆ. ಆದರೂ ಕರ್ನಾಟಕದ ವಿದ್ಯಾರ್ಥಿಗಳು ಈ ನಾಲ್ಕು ವಿಷಯದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ ಎಂದೇನೂ ಎನ್ ಸಿಇಆರ್ ಟಿ ಸಮೀಕ್ಷೆಯಲ್ಲಿ ತಿಳಿಸಿಲ್ಲ.
ದೇಶದಲ್ಲೇ ಅತ್ಯುತ್ತಮ ಸಾಧನೆ ಎಂದು ಕರ್ನಾಟಕದ ವಿದ್ಯಾರ್ಥಿಗಳು ಕಂಡುಬಂದರೂ ಈ ನಾಲ್ಕು ವಿಷಯದಲ್ಲಿ ಕಲಿಕಾ ಮಟ್ಟ ಇನ್ನೂ ಹೆಚ್ಚಾಗಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಕಲಿಕಾ ಮಟ್ಟದ ವಿಚಾರದಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗದ ಶೇ 50ರಷ್ಟು ವಿದ್ಯಾರ್ಥಿಗಳು ಪ್ರಗತಿ ಕಾಣಬೇಕು. ಆದರೆ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಲ್ಲಿ ಈ ಪ್ರಮಾಣ ಕಡಿಮೆ ಇದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ: NCERTಗೆ 'ಡೀಮ್ಡ್ ಯೂನಿವರ್ಸಿಟಿ' ಸ್ಥಾನಮಾನ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ












Click it and Unblock the Notifications