ಬೊಮ್ಮನಹಳ್ಳಿಯಲ್ಲಿ ರಾಜ್ಯದ ಮೊದಲ ಕಾರ್ ಪಾರ್ಕ್ ನಿರ್ಮಾಣ
ಬೆಂಗಳೂರು ಫೆಬ್ರವರಿ 25: ನೂರು ಅಡಿ ಎತ್ತರಕ್ಕೆ ಜೋಡಿಸಿಟ್ಟ ವಿಂಟೇಜ್ ಕಾರ್ ಗಳು. 3 ಸಾವಿರ ಜನರು ಒಟ್ಟಿಗೆ ಕುಳಿತು ಸಂಭ್ರಮಿಸಬಹುದಾದ ಅತ್ಯಾಧುನಿಕ ಸಾಮಗ್ರಿಗಳನ್ನು ಹೊಂದಿರುವ ಬಯಲು ರಂಗ ಮಂದಿರ. ಕಿವಿಗೆ ತಂಪು ನೀಡುವ ಹಕ್ಕಿಗಳ ಕಲವರವ.
ಸಮುದ್ರದ ಮರಳಿನ ಮೇಲೆ ಮಕ್ಕಳಿಗೆ ಕುಣಿದಾಡಲು ಅವಕಾಶ ಮಾಡಿ ಕೊಡುವ ಸ್ಯಾಂಡ್ ಪಿಟ್, ಆಮೆಗಳ ಹಾಗೂ ಮೊಲಗಳ ಸದ್ದು... ಇವು ಫೆಬ್ರವರಿ 27 ರಂದು ಬೊಮ್ಮನಹಳ್ಳಿಯಲ್ಲಿ ಉದ್ಘಾಟನೆಯಾಗಲಿರುವ ರಾಜ್ಯದ ಮೊದಲ "ಕಾರ್ ಪಾರ್ಕ್" ನ ಹೈಲೈಟ್ಸ್.
ಸಾರ್ವಜನಿಕರಿಗೆ ಅನುಕೂಲವಾಗುವಂತಹದ್ದೇನಾದರೂ ನೀಡಲೇಬೇಕು ಎನ್ನುವ ಗುರಿ ಜನಪತ್ರಿನಿಧಿಗೆ ಇದ್ದರೆ ಹಲವಷ್ಟನ್ನು ಸಾಧಿಸಬಹುದು. ಕಸದಿಂದ ರಸ ಹಾಗೂ ಕಸದ ಕೊಂಪೆಯನ್ನು ಸ್ವರ್ಗಗೊಳಿಸಲು ತಮ್ಮ ತನು ಮನವನ್ನು ಮುಡಿಪಾಗಿಟ್ಟಿದ್ದಾರೆ ಬೊಮ್ಮನಹಳ್ಳಿ ಬಿಬಿಎಂಪಿ ಸದಸ್ಯ ರಾಮ್ ಮೋಹನರಾಜು.

ಬೊಮ್ಮನಹಳ್ಳಿ ಹಿರಿಮೆಗೆ ಮತ್ತೊಂದು ಗರಿ
ಕಸದ ಕ್ವಾರಿಯಲ್ಲಿ ಬಂಡೇಪಾರ್ಕ್, ಅಂತರಾಷ್ಟ್ರೀಯ ಗುಣಮಟ್ಟದ ಸವಲತ್ತುಗಳನ್ನು ಹೊಂದಿರುವ ಬೊಮ್ಮನಹಳ್ಳಿ ಹಿರಿಮೆಗೆ ಮತ್ತೊಂದು ಗರಿ ಕಾರ್ ಪಾರ್ಕ್ನ್ನು ಜೋಡಿಸಿದ್ದಾರೆ ಬಿಬಿಎಂಪಿ ಸದಸ್ಯರಾದ ರಾಮ್ ಮೋಹನರಾಜು ಅವರು.

ದಿವಂಗತ ಅನಂತ ಕುಮಾರ್ ಅವರ ಸಹಕಾರ
ಪ್ರೆಸ್ಕ್ಲಬ್ ನಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಹಲವಾರು ವರ್ಷಗಳಿಂದ ಸಮರ್ಪಕವಾಗಿ ಬಳಕೆಯಾಗದೇ ಇದ್ದ ಜಾಗವನ್ನು ರಾಜ್ಯದಲ್ಲೆ ಹೆಸರುವಾಸಿ ಯಾಗುವಂತೆ ಮಾಡಬೇಕು ಎನ್ನುವುದು ನಮ್ಮ ಆಶಯವಾಗಿತ್ತು. ಈ ಹಿನ್ನಲೆಯಲ್ಲಿ ಶಾಸಕರಾದ ಸತೀಶ್ ರೆಡ್ಡಿ, ಸಂಸದರಾಗಿದ್ದ ದಿವಂಗತ ಅನಂತ ಕುಮಾರ್ ಅವರ ಸಹಕಾರದಿಂದಾಗಿ ರಾಜ್ಯದಲ್ಲೇ ಇಲ್ಲದಂತಹ ಉದ್ಯಾನವನ್ನು ನಿರ್ಮಿಸಲು ಸಾಧ್ಯವಾಗಿದೆ.

ಕಲಾವಿದರ ಪ್ರೋತ್ಸಾಹಕ್ಕೆ ಬಯಲು ರಂಗಮಂದಿರ
ವಾರ್ಡ್ ನ ಜನರು ಮೂಲಭೂತ ಸೌಕರ್ಯಗಳ ಜೊತೆಯಲ್ಲಿಯೇ ಆರೋಗ್ಯಕರವಾದ ಜೀವನ ಶೈಲಿಯನ್ನು ಬೆಳೆಸಿಕೊಳ್ಳುವಂತೆ ಮಾಡುವುದು ನಮ್ಮ ಗುರಿಯಾಗಿತ್ತು. ಯುವ ಜನರಲ್ಲಿ ಮೊಬೈಲ್ ಗೀಳನ್ನು ಬಿಡಿಸಿ ದೈಹಿಕ ಚಟುವಟಿಕೆಯಲ್ಲಿ ತೊಡಗುವಂತೆ ಮಾಡಬೇಕು. ಈ ಹಿನ್ನಲೆಯಲ್ಲಿ ಮಕ್ಕಳಾಟಕ್ಕೆ ಅಗತ್ಯವಾದ ಸಲಕರಣೆಗಳು. ಒಪನ್ ಜಿಮ್ ಹಾಗೂ ಕಲಾವಿದರ ಪ್ರೋತ್ಸಾಹಕ್ಕೆ ಬಯಲು ರಂಗಮಂದಿರವನ್ನು ಇಲ್ಲಿ ನಿರ್ಮಿಸಿದ್ದೇವೆ ಎಂದರು.

ಫೆಬ್ರವರಿ 27 ರಂದು ಉದ್ಘಾಟನೆಯಾಗಲಿರುವ ಕಾರ್ ಪಾರ್ಕ್
ಫೆಬ್ರವರಿ 27 ರಂದು ಉದ್ಘಾಟನೆಯಾಗಲಿರುವ ಈ ಕಾರ್ ಪಾರ್ಕ್ ಕಾರ್ಯಕ್ರಮದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಆರ್ ಅಶೋಕ, ಬೊಮ್ಮನಹಳ್ಳಿ ಶಾಸಕರಾದ ಸತೀಶ್ ರೆಡ್ಡಿ, ಬಿಬಿಎಂಪಿ ಮೇಯರ್ ಗಂಗಾಂಬಿಕಾ ಮಲ್ಲಿಕಾರ್ಜುನ, ಬಿಬಿಎಂಪಿ ಆಡಳಿತ ಹಾಗೂ ವಿರೋಧ ಪಕ್ಷದ ನಾಯಕರು ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದರು.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್












Click it and Unblock the Notifications