ಎಸ್ಸೆಸ್ಸೆಲ್ಸಿ ಶುಲ್ಕ ಗಡುವು ವಿಸ್ತರಣೆ ಮಾಡಿದ ಪ್ರೌಢ ಶಿಕ್ಷಣ ಮಂಡಳಿ
2018ರ ಎಸ್ಸೆಸ್ಸೆಲ್ಸಿ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳ ಶುಲ್ಕ ಗಡುವು ವಿಸ್ತರಣೆ. ಈ ಬಗ್ಗೆ ಆದೇಶ ಹೊರಡಿಸಿದ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ.
ಬೆಂಗಳೂರು, ಸೆಪ್ಟೆಂಬರ್ 7: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2018 ಏಪ್ರಿಲ್ ತಿಂಗಳಿನಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಕುಳಿತುಕೊಳ್ಳುವ ವಿದ್ಯಾರ್ಥಿಗಳ ಶುಲ್ಕ ಹಾಗೂ ನಾಮಿನಲ್ ರೋಲ್ ಪ್ರಸ್ತಾವನೆಗಳನ್ನು ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿ ಆದೇಶ ಹೊರಡಿಸಿದೆ.
ಖಾಸಗಿ ಅಭ್ಯರ್ಥಿಗಳು ಜಿಲ್ಲಾ ಉಪ ನಿರ್ದೇಶಕರ ಕಚೇರಿಯಲ್ಲಿ ನೋಂದಣಿ ಮಾಡಿಕೊಳ್ಳಲು ಕೊನೆಯ ದಿನಾಂಕ ಸೆಪ್ಟೆಂಬರ್ 12ರಂದು ಕೊನೆಯ ದಿನ ಆಗಿದೆ.

ಶಾಲಾ ಆಡಳಿತ ಮಂಡಳಿಗಳು ಶಾಲಾ, ಖಾಸಗಿ ಹಾಗೂ ಪುನರಾವರ್ತಿತ ಅಭ್ಯರ್ಥಿಗಳಿಂದ ಪರೀಕ್ಷಾ ಶುಲ್ಕ ಸ್ವೀಕಾರ ಮಾಡಲು ಸೆಪ್ಟೆಂಬರ್ 14ರಂದು ಕೊನೆಯ ದಿನವಾಗಿದೆ.
ಪರೀಕ್ಷಾ ಶುಲ್ಕವನ್ನು ಬ್ಯಾಂಕಿಗೆ ಎನ್ಎಎಫ್ಟಿ ಚಲನ್ ಮೂಲಕ ಜಮೆ ಮಾಡಲು ಸೆಪ್ಟೆಂಬರ್ 16 ಕಡೆಯ ದಿನವಾಗಿದ್ದು, ನಾಮಿನಲ್ ರೋಲ್ ಪ್ರಸ್ತಾವನೆ ಹಾಗೂ ಬ್ಯಾಂಕ್ ಚಲನ್ನ ಮೂಲ ಪ್ರತಿ ಶಾಲೆಗಳಿಂದ ಮಂಡಳಿಗೆ ತಲುಪಿಸಲು ಸೆಪ್ಟೆಂಬರ್ 21ರಂದು ಅಂತಿಮ ದಿನವಾಗಿರುತ್ತದೆ.
ಇದಲ್ಲದೆ, ಹೊಸದಾಗಿ ಶಾಲಾ ಸಂಕೇತವನ್ನು ಮಂಡಳಿಯಿಂದ ಪಡೆಯಲು ಇದ್ದ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 12ರವರೆಗೆ ವಿಸ್ತರಿಸಲಾಗಿದೆ.
ಮೇಲ್ಕಂಡ ವಿಸ್ತರಣೆ ದಿನಾಂಕಗಳವರೆಗೆ ವಿದ್ಯಾರ್ಥಿಗಳಿಂದ ಶುಲ್ಕ ಸ್ವೀಕರಿಸಬಹುದಾಗಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೇಳಿದೆ.
-
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಇಂದಿನಿಂದ SSLC ಪರೀಕ್ಷೆ: 8.66 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಹಾರೈಕೆ; ಆತಂಕಬೇಡ ಎಂದ ಸರ್ಕಾರ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಉನ್ನತ ಶಿಕ್ಷಣದಲ್ಲಿ 'ಕೇಂದ್ರೀಕರಣ'ದ ಆತಂಕ: ಉದ್ದೇಶಿತ VBSA ಮಸೂದೆ 2025ರ ವಿರುದ್ಧ ಜೈರಾಮ್ ರಮೇಶ್ ವಾಗ್ದಾಳಿ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಶಾಲಾ ಶಿಕ್ಷಣದಲ್ಲಿ ಮಹತ್ವದ ಬದಲಾವಣೆ: 1-8ನೇ ತರಗತಿಗೆ ಹೊಸ ಪಠ್ಯಪುಸ್ತಕ ಬಿಡುಗಡೆ ಮಾಡಿದ NCERT -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್












Click it and Unblock the Notifications