ಜಯಾ ಪ್ರಕರಣ: ತಮಿಳುನಾಡಿಗೆ 12 ಕೋಟಿ ಬಿಲ್ ಕಳುಹಿಸಿದ ಕರ್ನಾಟಕ
ಜಯಲಲಿತಾ ಅಕ್ರಮ ಆಸ್ತಿ ಪ್ರಕರಣದ ಖರ್ಚನ್ನು ವಸೂಲಿ ಮಾಡುವ ದಿನ ಕೊನೆಗೂ ಹತ್ತಿರ ಬಂದಿದೆ. ಕರ್ನಾಟಕ ಸರಕಾರ ಒಟ್ಟು ಪ್ರಕರಣದಲ್ಲಿ ಖರ್ಚಾದ 12.04 ಕೋಟಿ ರೂಪಾಯಿಗಳನ್ನು ಪಾವತಿಸುವಂತೆ ತಮಿಳುನಾಡು ಸರಕಾರಕ್ಕೆ ಬಿಲ್ ಕಳುಹಿಸಿದೆ.
ಬೆಂಗಳೂರು, ಫೆಬ್ರವರಿ 17: ಜಯಲಲಿತಾ ಅಕ್ರಮ ಆಸ್ತಿ ಪ್ರಕರಣದ ಖರ್ಚನ್ನು ವಸೂಲಿ ಮಾಡುವ ದಿನ ಕೊನೆಗೂ ಹತ್ತಿರ ಬಂದಿದೆ. ಕರ್ನಾಟಕ ಸರಕಾರ ಒಟ್ಟು ಪ್ರಕರಣದಲ್ಲಿ ಖರ್ಚಾದ 12.04 ಕೋಟಿ ರೂಪಾಯಿಗಳನ್ನು ಪಾವತಿಸುವಂತೆ ತಮಿಳುನಾಡು ಸರಕಾರಕ್ಕೆ ಬಿಲ್ ಕಳುಹಿಸಿದೆ.
2004ರಿಂದ 2016ರ ಮಧ್ಯೆ ಜಯಲಲಿತಾ ಅಕ್ರಮ ಆಸ್ತಿ ಪ್ರಕರಣದ ವಿಚಾರಣೆಯ ಕೋರ್ಟ್ ಖರ್ಚು, ಲಾಯರ್ ಗಳ ಫೀಸು, ನ್ಯಾಯಾಧೀಶರ ಸಂಬಳ, ಭದ್ರತಾ ವೆಚ್ಚಗಳು ಈ ಬಿಲ್ಲಿನಲ್ಲಿ ಸೇರಿವೆ. ಮುಖ್ಯ ಲೆಕ್ಕಾಧಿಕಾರಿ, ಸಿಟಿ ಸಿವಿಲ್ ನ್ಯಾಯಾಲಯದ ಮತ್ತು ಹೈಕೋರ್ಟಿನ ರಿಜಿಸ್ಟ್ರಾರ್ ಮತ್ತು ಗೃಹ ಇಲಾಖೆಯಿಂದ ಈ ಬಿಲ್ ಖರ್ಚಿನ ಬಿಲ್ ಗಳನ್ನು ತರಿಸಿಕೊಂಡು ತಮಿಳುನಾಡಿಗೆ ಕಳುಹಿಸಲಾಗಿದೆ.[ಪಳನಿಸ್ವಾಮಿ ಮುಖ್ಯಮಂತ್ರಿಯಾಗದಂತೆ ಕೊನೆಯ ಹಂತದ ಹೈಡ್ರಾಮ]

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕರ್ನಾಟಕ ಕಾನೂನು ಸಚಿವ ಟಿಬಿ ಜಯಚಂದ್ರ ಈಗಾಗಲೇ ತಮಿಳುನಾಡು ಮುಖ್ಯ ಕಾರ್ಯದರ್ಶಿಗೆ ಈ ಸಂಬಂಧ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ತಮಿಳುನಾಡಿಗೆ ಕಳುಹಿಸಿದ ಬಿಲ್ ಹೀಗಿದೆ,
3.78 ಕೋಟಿ - ವಿವಿಧ ಇಲಾಖೆಗಳ ಖರ್ಚು
2.86 ಕೋಟಿ - ಸಿಟಿ ಸಿವಿಲ್ ನ್ಯಾಯಾಲಯದ ಖರ್ಚು (2004-14)
4.68 ಕೋಟಿ - ಹೈಕೋರ್ಟ್ ಖರ್ಚು (2004-16)
70.33 ಲಕ್ಷ- ಪೊಲೀಸ್ ಭದ್ರತೆಯ ವೆಚ್ಚ (2001-16)[ನಿಯೋಜಿತ ಮುಖ್ಯಮಂತ್ರಿ ಇಕೆ ಪಳನಿಸ್ವಾಮಿ ವ್ಯಕ್ತಿಚಿತ್ರ]
ತಮಿಳುನಾಡಿನಲ್ಲಿ ಪ್ರಕರಣದ ನಿಷ್ಪಕ್ಷಪಾತ ವಿಚಾರಣೆ ಸಾಧ್ಯವಿಲ್ಲ ಎಂಬ ಕಾರಣಕ್ಕೆ ಸುಪ್ರಿಂ ಕೋರ್ಟ್ ಪ್ರಕರಣವನ್ನು ಕರ್ನಾಟಕಕ್ಕೆ ವರ್ಗಾಯಿಸಿತ್ತು. ಈ ಸಂದರ್ಭದಲ್ಲೇ ಪ್ರಕರಣದ ಖರ್ಚುಗಳನ್ನು ಕರ್ನಾಟಕ ಸರಕಾರಕ್ಕೆ ತಮಿಳುನಾಡು ನೀಡಬೇಕು ಎಂದು ಸುಪ್ರಿಂ ಕೋರ್ಟ್ ಆದೇಶದಲ್ಲಿ ತಿಳಿಸಿತ್ತು. ಅದರಂತೆ ಈಗ ಬಿಲ್ ಕಳುಹಿಸಲಾಗಿದ್ದು ತಮಿಳುನಾಡು ಖರ್ಚು ವೆಚ್ಚಗಳನ್ನು ಪಾವತಿ ಮಾಡಬೇಕಾಗಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications