Get Updates
Get notified of breaking news, exclusive insights, and must-see stories!

SSLC ಪರೀಕ್ಷೆಗೆ ಹಾಜರಾತಿ ಶಾಕ್: ನಿಯಮ ಉಲ್ಲಂಘಿಸಿದ 35,000 ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತ

SSLC Exam Students Attendance Rules: ಕರ್ನಾಟಕದಲ್ಲಿ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಗಳು ನಡೆದು ಪೂರ್ಣಗೊಂಡಿವೆ. ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ ವಿದ್ಯಾರ್ಥಿಗಳ ಶೈಕ್ಷಣಿಕ ಪಯಣದ ಮೊದಲ ಪ್ರಮುಖ ಮೈಲಿಗಲ್ಲಾಗಿದೆ. ಇದು ಕೇವಲ ಒಂದು ಪರೀಕ್ಷೆಯಲ್ಲ, ಭವಿಷ್ಯದ ಉನ್ನತ ಶಿಕ್ಷಣ ಮತ್ತು ವೃತ್ತಿಜೀವನದ ದಿಕ್ಕನ್ನು ನಿರ್ಧರಿಸುವ ಪ್ರಮುಖ ಹಂತವಾಗಿದೆ. ಈ ಹಂತದಲ್ಲಿ ಧೈರ್ಯ, ಶಿಸ್ತು, ಸರಿಯಾದ ಯೋಜನೆ ಇವುಗಳನ್ನು ಅಳವಡಿಸಿಕೊಂಡು ಓದಿದರೆ ಉತ್ತಮ ಫಲಿತಾಂಶ ಸಾಧಿಸಲು ಸಾಧ್ಯ.

ಹಾಜರಾತಿ ನಿಯಮದ ಪರಿಣಾಮವಾಗಿ ಕರ್ನಾಟಕದಲ್ಲಿ35,000 ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಅವಕಾಶ ಸಿಕ್ಕಿಲ್ಲ. ಹಾಗಾದರೆ ಹಾಜರಾತಿ ನಿಯಮಗಳು ಹೇಳುವುದೇನು? ಈ ಬಗ್ಗೆ ಮಂಗಳೂರಿನ ಎಸ್‌ಡಿಎಂ ಶಾಲೆಯ ಪ್ರಾಂಶುಪಾಲರಾದ ಜಾಯ್ ಜೀವನ್ ರಾಯ್ ಅವರು ವಿವರಿಸಿದ್ದಾರೆ.

Karnataka SSLC 2026

'ಪರೀಕ್ಷೆ ಬರೆಯಲು ಅಗತ್ಯವಾಗಿರುವ ಅಂಶಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿಯು ಒಂದು. ಕರ್ನಾಟಕದಲ್ಲಿ ಕಠಿಣ ಹಾಜರಾತಿ ನಿಯಮದ ಪರಿಣಾಮವಾಗಿ ಸುಮಾರು 35,000 ವಿದ್ಯಾರ್ಥಿಗಳು ಈ ವರ್ಷದ ಎಸ್‌ಎಸ್‌ಎಲ್‌ಸಿ (Secondary School Leaving Certificate) ಪರೀಕ್ಷೆಗೆ ಹಾಜರಾಗಲು ಅವಕಾಶ ಕಳೆದುಕೊಂಡಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ( Karnataka School Examination and Assessment Board - KSEAB) ಪ್ರಕಾರ, ಪರೀಕ್ಷೆಗೆ ಅರ್ಹರಾಗಲು ಕನಿಷ್ಠ ಶೇ.75ರಷ್ಟು ಹಾಜರಾತಿ ಕಡ್ಡಾಯವಾಗಿದೆ.

KEA Recruitment: ವಾಯುವ್ಯ ಸಾರಿಗೆ ಸಂಸ್ಥೆ ನೇಮಕಾತಿ ಪರೀಕ್ಷೆಗಳ ದಿನಾಂಕ ಬದಲಾವಣೆ
KEA Recruitment: ವಾಯುವ್ಯ ಸಾರಿಗೆ ಸಂಸ್ಥೆ ನೇಮಕಾತಿ ಪರೀಕ್ಷೆಗಳ ದಿನಾಂಕ ಬದಲಾವಣೆ

ಕಳೆದ ವರ್ಷ ವಿನಾಯಿತಿ, ಈ ವರ್ಷ ಇಲ್ಲ

ಈ ನಿಯಮವನ್ನು ಕಟ್ಟು ನಿಟ್ಟಾಗಿ ಜಾರಿಗೆ ತಂದ ಹಿನ್ನೆಲೆಯಲ್ಲಿ, ಅಗತ್ಯ ಪ್ರಮಾಣದ ಹಾಜರಾತಿ ಹೊಂದದ ವಿದ್ಯಾರ್ಥಿಗಳನ್ನು ಪರೀಕ್ಷೆಯಿಂದ ಹೊರಗಿಡಲಾಗಿದೆ. ಕಳೆದ ವರ್ಷ ಕಡಿಮೆ ಹಾಜರಾತಿ ಹೊಂದಿದವರಿಗೆ ವಿನಾಯಿತಿ ನೀಡಲಾಗಿದ್ದರೂ, ಈ ಬಾರಿ ಯಾವುದೇ ಸಡಿಲಿಕೆ ನೀಡಲಾಗಿಲ್ಲ ಎಂಬುದು ಇಲ್ಲಿ ಗಮನಾರ್ಹ.

ಈ ನಿರ್ಧಾರವು ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಕೆಲವು ಶಿಕ್ಷಣ ತಜ್ಞರು ವಿದ್ಯಾರ್ಥಿಗಳ ಸಂಖ್ಯೆಯನ್ನು ಅತಿಯಾಗಿ ಲೆಕ್ಕ ಹಾಕಿರುವ ಸಾಧ್ಯತೆಯನ್ನು ಸೂಚಿಸುತ್ತಿದ್ದು, ಇನ್ನೂ ಕೆಲವರು ವಿದ್ಯಾರ್ಥಿಗಳ ನಿರ್ಲಕ್ಷ್ಯವೇ ಮುಖ್ಯ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ. ಪೋಷಕರು ಹಾಗೂ ಶಿಕ್ಷಕರು ಈ ನಿಯಮದ ಪರಿಣಾಮ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಬೀರಬಹುದಾದ ಪರಿಣಾಮಗಳ ಬಗ್ಗೆ ಚಿಂತೆಯನ್ನು ವ್ಯಕ್ತಪಡಿಸಿದ್ದಾರೆ.

ಶಿಕ್ಷಣ ಇಲಾಖೆಯ ಅಧಿಕಾರಿಗಳು ಹೇಳುವಂತೆ, "ಹಾಜರಾತಿ ನಿಯಮವು ವಿದ್ಯಾರ್ಥಿಗಳಲ್ಲಿ ನಿಯಮಿತ ಶಾಲಾ ಹಾಜರಾತಿ, ಶಿಸ್ತು ಹಾಗೂ ಅಧ್ಯಯನದ ಮೇಲೆ ಹೆಚ್ಚಿನ ಗಮನವನ್ನು ಬೆಳೆಸಲು ಸಹಕಾರಿ. "ಶಾಲಾ ಜೀವನವು ಕೇವಲ ಪರೀಕ್ಷೆಗೆ ಸೀಮಿತವಲ್ಲ; ನಿರಂತರ ಹಾಜರಾತಿಯಿಂದಲೇ ಸಂಪೂರ್ಣ ಅಭಿವೃದ್ಧಿ ಸಾಧ್ಯ' ಎಂದು ಅವರು ಹೇಳಿದ್ದಾರೆ.

ಎಸ್‌ಎಸ್‌ಎಲ್‌ಸಿ ಹಾಜರಾತಿ ನಿಯಮಗಳು (2025-26)

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಹಾಜರಾತಿಗೆ ನಿಯಮದ ಕಠಿಣವಾಗಿವೆ. ಕಟ್ಟುನಿಟ್ಟಿನ ಮಾರ್ಗಸೂಚಿಗಳಿದ್ದು, ಅವುಗಳ ಮಾಹಿತಿ ಇಲ್ಲಿದೆ.

* ಕನಿಷ್ಠ ಹಾಜರಾತಿ: ಶೇ. 75ರಷ್ಟು ಹಾಜರಾತಿ ಕಡ್ಡಾಯ.

* ಹಾಜರಾತಿ ಪ್ರಮಾಣ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ನೀಡಲಾಗುವುದಿಲ್ಲ.

* ವಿನಾಯಿತಿ (Condonation): ಅನಾರೋಗ್ಯ ಅಥವಾ ತುರ್ತು ಸಂದರ್ಭಗಳಲ್ಲಿ ಮಾನ್ಯ ವೈದ್ಯಕೀಯ ಪ್ರಮಾಣಪತ್ರದೊಂದಿಗೆ ಹಾಜರಾತಿ ವಿನಾಯಿತಿಗೆ ಅರ್ಜಿ ಸಲ್ಲಿಸಬಹುದು.

* ಪರೀಕ್ಷೆ 1, 2 ಮತ್ತು 3: ಹಾಜರಾತಿ ಕಡಿಮೆ ಇದ್ದರೆ ಯಾವುದೇ ಪರೀಕ್ಷೆಗೂ ನೋಂದಾಯಿಸಲು ಅವಕಾಶವಿಲ್ಲ.

* ಮರು ದಾಖಲಾತಿ: ಹಾಜರಾತಿ ಕೊರತೆಯಿದ್ದ ವಿದ್ಯಾರ್ಥಿಗಳು ಮುಂದಿನ ವರ್ಷ ಮರು ದಾಖಲಾತಿ ಪಡೆಯಬೇಕಾಗುತ್ತದೆ.

* ಆಂತರಿಕ ಮೌಲ್ಯಮಾಪನ (IA): ಶೇ.75ಕ್ಕಿಂತ ಕಡಿಮೆ ಹಾಜರಾತಿ ಹೊಂದಿದ ವಿದ್ಯಾರ್ಥಿಗಳ ಆಂತರಿಕ ಅಂಕಗಳನ್ನು ಅಪ್ಲೋಡ್ ಮಾಡದಂತೆ ಶಾಲೆಗಳಿಗೆ ಸೂಚನೆ ನೀಡಲಾಗಿದೆ.

* ಜಾಗೃತಿ ಕಾರ್ಯಕ್ರಮಗಳು: ಜಿಲ್ಲಾಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಲ್ಲಿ ಶೇ.100 ಹಾಜರಾತಿ ಸಾಧಿಸಲು ಜಾಗೃತಿ ಮೂಡಿಸುತ್ತಿವೆ.

* ಪೋಷಕರ ಸಭೆಗಳು: ಶಾಲೆಗಳು ಪೋಷಕರೊಂದಿಗೆ ಸಭೆ ನಡೆಸಿ ಹಾಜರಾತಿಯ ಮಹತ್ವವನ್ನು ವಿವರಿಸುತ್ತಿವೆ.

* ಮುಖಚಹರೆ ಹಾಜರಾತಿ ವ್ಯವಸ್ಥೆ: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿಯನ್ನು ಖಚಿತಪಡಿಸಲು Face-to-Face / ಡಿಜಿಟಲ್ ಹಾಜರಾತಿ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ.

ಈ ನಿಯಮಗಳಿಂದಾಗಿ ಈ ವರ್ಷ ಸಾವಿರಾರು ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿರುವುದು ಆತಂಕದ ವಿಷಯವಾಗಿದೆ.

ನಿಯಮಗಳ ಪರಿಣಾಮಗಳು

* ಹಾಜರಾತಿ ಕೊರತೆಯಿಂದ ಪರೀಕ್ಷೆಗೆ ಅವಕಾಶ ಕಳೆದುಕೊಂಡ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಅಥವಾ ಪರ್ಯಾಯ ಅವಕಾಶಗಳ ಕುರಿತು ಚರ್ಚೆಗಳು ನಡೆಯುತ್ತಿವೆ.

* ಶಾಲೆಗಳು ವಿದ್ಯಾರ್ಥಿಗಳ ಹಾಜರಾತಿಯನ್ನು ನಿಖರವಾಗಿ ದಾಖಲಿಸುವ ಜವಾಬ್ದಾರಿಯನ್ನು ಹೆಚ್ಚಿಸಿಕೊಂಡಿವೆ.

* ಪೋಷಕರು ಮಕ್ಕಳ ನಿಯಮಿತ ಹಾಜರಾತಿಗೆ ಹೆಚ್ಚಿನ ಗಮನ ಹರಿಸುವ ಅಗತ್ಯವಿದೆ.

* ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗಾಗಿ ಸಹಪಾಠ ಚಟುವಟಿಕೆಗಳಿಗೂ ಮಹತ್ವ ನೀಡಲಾಗುತ್ತಿದೆ.

ಶಾಲೆಗಳಲ್ಲಿ ಪ್ರಾದೇಶಿಕ ಭಾಷೆಗೆ ಉತ್ತೇಜನ

ಇದರ ಜೊತೆಗೆ, ಕರ್ನಾಟಕ ಸರ್ಕಾರವು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಾದರಿಯಲ್ಲಿ ಮಹತ್ವದ ಬದಲಾವಣೆಗಳನ್ನು ಪರಿಚಯಿಸಿದೆ. ಮೂರನೇ ಭಾಷೆಯ ವಿಷಯದಲ್ಲಿ ಅಂಕಗಳ ಆಧಾರಿತ ಮೌಲ್ಯಮಾಪನವನ್ನು ಬಿಟ್ಟು, ಗ್ರೇಡಿಂಗ್ ಪದ್ಧತಿಯನ್ನು ಜಾರಿಗೆ ತರಲಾಗಿದೆ. ಹಿಂದಿ, ಸಂಸ್ಕೃತ, ಮರಾಠಿ ಸೇರಿದಂತೆ ಪ್ರಾದೇಶಿಕ ಭಾಷೆಗಳ ಅಧ್ಯಯನಕ್ಕೆ ಉತ್ತೇಜನ ನೀಡುವ ಉದ್ದೇಶ ಇದಾಗಿದೆ.

ಇದರಿಂದ ವಿದ್ಯಾರ್ಥಿಗಳಿಗೆ A ರಿಂದ D ವರೆಗೆ ಗ್ರೇಡ್ ನೀಡಲಾಗುತ್ತದೆ. ಈ ಗ್ರೇಡ್‌ಗಳು ಒಟ್ಟು ಶೇಕಡಾವಾರಿಗೆ ಪರಿಣಾಮ ಬೀರುವುದಿಲ್ಲ. ಇದರ ಮೂಲಕ ಪರೀಕ್ಷಾ ಒತ್ತಡವನ್ನು ಕಡಿಮೆ ಮಾಡುವುದು ಹಾಗೂ ಭಾಷಾ ಅಧ್ಯಯನದ ಮೇಲೆ ಆಸಕ್ತಿ ಹೆಚ್ಚಿಸುವುದು ಸರ್ಕಾರದ ಉದ್ದೇಶವಾಗಿದೆ.

ಶಿಕ್ಷಣ ತಜ್ಞರ ಪ್ರಕಾರ, ಈ ಕ್ರಮವು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಕೈಗೊಳ್ಳಲಾಗಿದೆ. 'ಮಕ್ಕಳಲ್ಲಿ ಅಂಕಗಳ ಒತ್ತಡ ಕಡಿಮೆಯಾಗುತ್ತದೆ ಮತ್ತು ಕಲಿಕೆಯ ಮೇಲಿನ ಆಸಕ್ತಿ ಹೆಚ್ಚುತ್ತದೆ' ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಒಟ್ಟಿನಲ್ಲಿ, ಕರ್ನಾಟಕ ಸರ್ಕಾರದ ಈ ಕ್ರಮಗಳು ವಿದ್ಯಾರ್ಥಿಗಳ ಶಿಸ್ತು, ಕಲಿಕೆಯ ಗುಣಮಟ್ಟ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸಲು ಕೈಗೊಂಡ ಪ್ರಮುಖ ಹೆಜ್ಜೆಗಳಾಗಿ ಪರಿಗಣಿಸಲ್ಪಡುತ್ತಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+