ರಾಜ್ಯ ವಿಧಾನಸಭೆ ಅಧಿವೇಶನ: ಬಜೆಟ್ ಮಂಡನೆ ದಿನಾಂಕ ನಿಗದಿ
ಬೆಂಗಳೂರು, ಫೆಬ್ರವರಿ 19: ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನವು ಮಾರ್ಚ್ 4 ರಿಂದ ನಡೆಯಲಿದೆ. ಮಾರ್ಚ್ 8ರಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಬಜೆಟ್ ರೂಪುರೇಷೆಯ ಬಗ್ಗೆ ಚರ್ಚೆ ನಡೆಸಲಾಯಿತು. ಮಾರ್ಚ್ 4ರಿಂದ ಬಜೆಟ್ ಅಧಿವೇಶನ ಆರಂಭಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಮಾರ್ಚ್ 8ರಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬಜೆಟ್ ಮಂಡಿಸಲಿದ್ದಾರೆ ಎಂದು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮಾರ್ಚ್ ತಿಂಗಳ ಕೊನೆಯವರೆಗೂ ಅಧಿವೇಶನ ನಡೆಯಲಿದೆ. ಮಾರ್ಚ್ 4 ಮತ್ತು 5ರಂದು ಒಂದು ದೇಶ ಒಂದು ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.

Recommended Video
ಕೋವಿಡ್ ಸಂದರ್ಭದಲ್ಲಿ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆಗಳಿಗೆ ಸುವರ್ಣ ಕರ್ನಾಟಕ ಆರೋಗ್ಯ ಯೋಜನೆಯಡಿ 700 ಕೋಟಿ ರು ಬಿಡುಗಡೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ವಿವಿಧ ಸಮುದಾಯಗಳ ಮೀಸಲಾತಿ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಈ ಬಗ್ಗೆ ಸಚಿವರು ಸಲಹೆಗಳನ್ನು ನೀಡಿದ್ದು, ಮುಂದಿನ ಸಭೆಯಲ್ಲಿ ಅವುಗಳ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಚರ್ಚೆ ನಡೆಸಲಾಗುತ್ತದೆ ಎಂದಿದ್ದಾರೆ.












Click it and Unblock the Notifications