ಸರ್ಕಾರಿ ಅಧಿಕಾರಿಗಳು ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡುವಂತಿಲ್ಲ: ಸೂಚನೆ
ಬೆಂಗಳೂರು, ಜುಲೈ 28: ಬೆಂಗಳೂರು ನಗರ ಸೇರಿದಂತೆ ರಾಜ್ಯದ ಅಭಿವೃದ್ಧಿ, ಯೋಜನೆಗಳು ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಯಾವುದೇ ಮಾಹಿತಿಯನ್ನು ಅಧಿಕೃತ ಸರ್ಕಾರಿ ಅಧಿಕಾರಿಗಳು ಮಾಧ್ಯಮಗಳಿಗೆ ನೀಡದಂತೆ ಸರ್ಕಾರ ಸೂಚನೆ ನೀಡಿದೆ.
ಬೃಹತ್ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸರ್ಕಾರದ ಮಟ್ಟದಲ್ಲಿ ಅನೇಕ ವಿಷಯಗಳು ಚರ್ಚೆ ಆಗುತ್ತವೆ. ಯೋಜನೆಗಳು, ಅಭಿವೃದ್ಧಿ ಚಿಂತನೆ, ಕಾಮಗಾರಿಗಳು ಹೀಗೆ ಹತ್ತು ಹಲವು ವಿಚಾರಗಳನ್ನು ಇನ್ನು ಮುಂದೆ ಸರ್ಕಾರದ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡುವಂತಿಲ್ಲ.

ಬದಲಾಗಿ ಅವೆಲ್ಲ ವಿಷಯಗಳ ವರದಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ನೀರು ಸರಬರಾಜು ಮತ್ತು ಸಂಸ್ಥೆ ಮಂಡಳಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಅಧಿಕಾರಿಗಳು ನಿತ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕಚೇರಿಗೆ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆ ಮೂಲಗಳು ತಿಳಿಸಿವೆ ಎಂದು 'ಕನ್ನಡಪ್ರಭ' ವರದಿ ಮಾಡಿದೆ.
ಡಿಕೆ ಶಿವಕುಮಾರ್ ಅವರೇ ಮಾಹಿತಿ ನೀಡುತ್ತಾರೆ
ಸರ್ಕಾರಿ ಅಧಿಕಾರಿಗಳು ವರದಿಯನ್ನು ನಗರಾಭಿವೃದ್ಧಿ ಇಲಾಖೆಗೆ ನೀಡಿದ ಬಳಿಕ ಸಚಿವರು ಮತ್ತು ಉಪಮುಖ್ಯಮಂತ್ರಿಗಳು ಆದ ಡಿಕೆ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ಒದಗಿಸಲಿದ್ದಾರೆ.

ಹೀಗೆ ಸೂಚನೆ ನೀಡಲು ಇಲಾಖೆಯೊಂದರಲ್ಲಿ ಇತ್ತೀಚಿನ ಬೆಳವಣಿಗೆಯೊಂದು ಕಾರಣ ಎನ್ನಲಾಗಿದೆ. ಅಧಿಕಾರಿಗಳ ಹೇಳಿದ್ದು, ಮತ್ತು ಸಚಿವರು ಹೇಳಿದ್ದು ವ್ಯತಿರಿಕ್ತವಾಗಿದ ಪರಿಣಾಮ ಇರಿಸು-ಮುರಿಸು ಆಗಿದೆ. ಇಂತ ಗೊಂದಲ ಮತ್ತೆ ಮರುಕಳಿಸಿದಂತೆ ಸೂಕ್ತ ಮಾಹಿತಿ ಹೊರ ಹೊಮ್ಮಲು ಎಲ್ಲ ನಾಗರಿಕ ಸಂಸ್ಥೆಗಳಿಗೆ ಈ ರೀತಿ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಬ್ರಾಂಡ್ ಬೆಂಗಳೂರಿಗೆ ಡಿಕೆಶಿ ಒತ್ತು
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅದರಲ್ಲೂ ಡಿಕೆ ಶಿವಕುಮಾರ್ ಅವರು ನಗರಾಭಿವೃದ್ಧಿ ಇಲಾಖೆ ವಹಿಸಿಕೊಂಡ ಮೇಲೆ ಬೆಂಗಳೂರನ್ನು ಆಕರ್ಷಕವಾಗಿಸಲು, ಬ್ರಾಂಡ್ ಬೆಂಗಳೂರು ಮಾಡಲು ಕ್ರೀಯಾಶೀಲರಾಗಿದ್ದಾರೆ. ಇದರ ಮೇಲೆಯೇ ಹೆಚ್ಚು ಗಮನ ಹರಿಸಿದ್ದಾರೆ.
ಬಹುಪಾಲು ಕಾಮಗಾರಿಗಳು ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತವೆ. ಒಂದು ವೇಳೆ ಸಚಿವರಿಗೆ ತಿಳಿಯದೇ ಪಾಲಿಕೆ ಆಯುಕ್ತ, ಇನ್ನಿತರ ಹಿರಿಯ ಅಧಿಕಾರಿಳು ಮಾಹಿತಿ ನೀಡಿದರೆ, ಹೇಳಿಕೆಗಳನ್ನು ಕೊಟ್ಟರೆ ಆಭಾಸವಾಗಬಹುದು, ಇಲ್ಲವೇ ಗೊಂದಲ ಸೃಷ್ಟಿಯಾಗಬಹುದು. ಅದನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
-
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?











Click it and Unblock the Notifications