ಆಗಸ್ಟ್ 22ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ
ಬೆಂಗಳೂರು ಜುಲೈ 16: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಗುರುವಾರ ಸಂಜೆ ಪರಿಷ್ಕೃತ ವೇಳಾಪಟ್ಟಿ ಹೊರಡಿಸಿದೆ. ಆಗಸ್ಟ್ 22 ರಂದು ಮತದಾನ ನಡೆಯಲಿದ್ದು, ಆಗಸ್ಟ್ 25ರಂದು ಫಲಿತಾಂಶ ಹೊರಬೀಳಲಿದೆ.
ರಾಜ್ಯ ಚುನಾವಣಾ ಆಯೋಗ ಜುಲೈ 28ರಂದು ಬಿಬಿಎಂಪಿ ಚುನಾವಣೆ ನಡೆಸಲಾಗುತ್ತದೆ ಎಂದು ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಆದರೆ, ಸುಪ್ರೀಂಕೋರ್ಟ್ ಚುನಾವಣೆಯನ್ನು 8 ವಾರಗಳ ಕಾಲ ಮುಂದೂಡಿ, ಹೊಸ ವೇಳಾಪಟ್ಟಿ ಪ್ರಕಟಿಸುವಂತೆ ಆಯೋಗಕ್ಕೆ ಸೂಚನೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಚುನಾವಣೆ ಪ್ರಮುಖ ದಿನಾಂಕಗಳು ಇಲ್ಲಿವೆ. [ಬಿಬಿಎಂಪಿಯನ್ನು 5 ಭಾಗ ಮಾಡಿ: ಬಿಎಸ್ ಪಾಟೀಲ್ ಸಮಿತಿ]

* ಜುಲೈ 17ರಿಂದ ಚುನಾವಣಾ ನೀತಿ ಸಂಹಿತೆ ಜಾರಿ.
* ಆಗಸ್ಟ್ 3 ರಂದು ಚುನಾವಣೆ ಅಧಿಸೂಚನೆ ಪ್ರಕಟ
* ಆಗಸ್ಟ್ 22 ರಂದು ಮತದಾನ ನಡೆಯಲಿದೆ.
* ಆಗಸ್ಟ್ 25 ರಂದು ಫಲಿತಾಂಶ
* ಆಗಸ್ಟ್ 10 ರಂದು ನಾಮಪತ್ರ ಸಲ್ಲಿಕೆ ಕೊನೆ ದಿನಾಂಕ
* ಆಗಸ್ಟ್ 11 ರಂದು ನಾಮಪತ್ರಗಳ ಪರಿಶೀಲನೆ
* ಆಗಸ್ಟ್ 13 ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನಾಂಕ
* ಆಗಸ್ಟ್ 24 ರಂದು ಅಗತ್ಯವಿದ್ದರೆ ಮರು ಮತದಾನ.
ಮತದಾನದ ಅವಧಿ: ಆಗಸ್ಟ್ 22 (ಶನಿವಾರ) ಬೆಳಗ್ಗೆ 7 ಗಂಟೆಯಿಂದ ಸಾಯಂಕಾಲ 5 ಗಂಟೆ ತನಕ.
ಮತ ಎಣಿಕೆ ದಿನ: ಆಗಸ್ಟ್ 25 (ಮಂಗಳವಾರ) ಬಿಬಿಎಂಪಿ ವ್ಯಾಪ್ತಿಯಲ್ಲಿಯ ಒಂದು ಕೇಂದ್ರದಲ್ಲಿ ಬೆಳಗ್ಗೆ 8 ಗಂಟೆಯಿಂದ ಆರಂಭ.
ಒಟ್ಟು ವಾರ್ಡ್ ಗಳು: 198 ವಾರ್ಡ್ ಗಳು
ನೀತಿ ಸಂಹಿತೆ: ಜುಲೈ 17, 2015ರಿಂದ ಆಗಸ್ಟ್ 26, 2015ರ ತನಕ.
ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆ 1976 ರ ಪ್ರಕರಣ 55 ಮತ್ತು ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ (ಚುನಾವಣೆ) ನಿಯಮಗಳು 1979 ರ ನಿಯಮ 3 ರ ಅನ್ವಯ ಹಾಗೂ 13/04/2015ರ ವಾರ್ಡುವಾರು ಮೀಸಲಾತಿ ಪಟ್ಟಿಯನ್ವಯ ಮೇಲ್ಕಂಡ ಚುನಾವಣಾ ವೇಳಾಪಟ್ಟಿಯನ್ನು ನಡೆಸಲು ಆದೇಶಿಸಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಕವಿತಾರಾಣಿ ಅವರು ಹೇಳಿದ್ದಾರೆ.
(ಒನ್ ಇಂಡಿಯಾ ಸುದ್ದಿ)
-
ಬೆಂಗಳೂರು ಕರಡು ಮತಪಟ್ಟಿ ಹಾಗೂ ಕಾಂಗ್ರೆಸ್ನ ಮತಚೋರಿಯ ಸುಳ್ಳುಗಳ ಅನಾವರಣ: ಲೇಖಕ ರಾಜೀವ ಹೆಗಡೆ ಬರಹ -
ಬೆಂಗಳೂರು ಮತದಾರರ ಪಟ್ಟಿ: ನಗರದಲ್ಲಿ 11 ಲಕ್ಷ ಮತದಾರರು ಕಾಣೆಯಾದ್ರಾ, ಏನಿದು ಜಿಬಿಎ ಎಲೆಕ್ಷನ್ ಲೋಪ: ಕೃಷ್ಣಭಟ್ ಬರಹ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ












Click it and Unblock the Notifications