ಜೆನರಿಕ್ ಔಷಧಿ ಖರೀದಿಗೆ ಪ್ರತ್ಯೇಕ ನಿಗಮ
ಬೆಂಗಳೂರು, ಜೂ. 12 : ಸರ್ಕಾರಿ ವೈದ್ಯಕೀಯ ಕಾಲೇಜುಗಳ ವ್ಯಾಪ್ತಿಯ ಆಸ್ಪತ್ರೆಗಳು ಮತ್ತು ಆರೋಗ್ಯ ಇಲಾಖೆ ವ್ಯಾಪ್ತಿಗೆ ಬರುವ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಅಗ್ಗದ ಬೆಲೆಯಲ್ಲಿ ಗುಣಮಟ್ಟದ ಔಷಧಿ ಸಿಗುವಂತಾಗಲು ಜೆನರಿಕ್ ಔಷಧಿಗಳ ಖರೀದಿಗೆ ಪ್ರತ್ಯೇಕ ನಿಗಮ ಸ್ಥಾಪಿಸಲು ಸರ್ಕಾರ ಚಿಂತನೆ ನಡೆಸಿದೆ.
ಬುಧವಾರ ಬೆಂಗಳೂರಿನಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಜೆನರಿಕ್ ಔಷಧಿಗಳ ಖರೀದಿಗೆ ತಮಿಳುನಾಡು ಮಾದರಿಯಲ್ಲಿ ರಾಜ್ಯದಲ್ಲೂ ಪ್ರತ್ಯೇಕ ನಿಗಮ ಸ್ಥಾಪಿಸುವ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಇಲಾಖೆ ಚಿಂತನೆ ನಡೆಸಿವೆ ಎಂದು ಹೇಳಿದರು.

ಪ್ರತ್ಯೇಕ ನಿಗಮ ಸ್ಥಾಪನೆಯ ಕುರಿತ ಪ್ರಸ್ತಾವನೆಯನ್ನು ಹಣಕಾಸು ಇಲಾಖೆಗೆ ಕಳಿಸಿಕೊಡಲಾಗಿದೆ. ಇಲಾಖೆ ಒಪ್ಪಿಗೆ ನೀಡಿದರೆ, ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು, ನಿಗಮ ಸ್ಥಾಪನೆ ಕಾರ್ಯವನ್ನು ಆರಂಭಿಸಲಾಗುವುದು ಎಂದರು.
ಸದ್ಯ ಜೆನರಿಕ್ ಜೌಷಧಿಗಳನ್ನು ಆಯಾ ಸಂಸ್ಥೆಗಳು ಪ್ರತ್ಯೇಕ ಟೆಂಡರ್ ಮೂಲಕ ಖರೀದಿ ಮಾಡುತ್ತಿವೆ. ಆದರೆ, ಜೌಷಧಿ ಖರೀದಿಯಲ್ಲಿ ಶೇಕಡಾ ನೂರರಷ್ಟು ಪಾರದರ್ಶಕತೆ ತರಲು ಮತ್ತು ಗುಣಮಟ್ಟ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ನಿಗಮ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ನಿಗಮ ಆರಂಭವಾದ ಬಳಿಕ ಔಷಧಗಳ ಖರೀದಿದಾಗಿ ಆಸ್ಪತ್ರೆಗಳು ಟೆಂಡರ್ ಕರೆದಾಗ, ಷರತ್ತುಗಳನ್ನು ವಿಧಿಸಿ ಮಾರುಕಟ್ಟೆಯಲ್ಲಿ ವಿಶ್ವಾಸ ಉಳಿಸಿಕೊಂಡಿರುವ ಪ್ರತಿಷ್ಠಿತ ಸಂಸ್ಥೆಗಳಿಗೆ ಮಾತ್ರ ಆದ್ಯತೆ ನೀಡಲಾಗುವುದೆಂದು ಸಚಿವರು ತಿಳಿಸಿದರು.
-
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ?












Click it and Unblock the Notifications