ಕರ್ನಾಟಕದಲ್ಲಿ ಟೆರರಿಸಂ ತನಿಖೆ: ಎನ್ಐಎನಿಂದ ವಿಳಂಬ ನೀತಿ?
ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಯೋತ್ಪಾದನಾ ಪ್ರಕರಣಗಳ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ(NIA)ಗೇಕೋ ಕರ್ನಾಟಕದ ಪ್ರಕರಣಗಳ ಬಗ್ಗೆ ಅಸಡ್ಡೆ ಇದ್ದಂತೆ ತೋರುತ್ತಿದೆ. ಏನು ಕಾರಣವೋ ಏನೋ ನಮ್ಮಲ್ಲಿನ ಪ್ರಕರಣಗಳ ತನಿಖೆ ಚುರುಕುಗೊಳ್ಳುವುದೇ ಕಡಿಮೆ.
ಮಲ್ಲೇಶ್ವರಂ, ಚರ್ಚ್ ಸ್ಟ್ರೀಟ್ ಸ್ಫೋಟ, ಮೆಹದಿ ಪ್ರಕರಣ ಅಥವಾ ಭಟ್ಕಳದ ಭಯೋತ್ಪಾದನೆ ವಿಷಯ ಆಗಿರಬಹುದು ಎಲ್ಲವೂ ರಾಷ್ಟ್ರೀಯ ತನಿಖಾ ದಳದ ವಿಚಾರಣೆ ಹಂತದ ಕೇಸ್ ಗಳೇ ಆಗಿವೆ. ಮಲ್ಲೇಶ್ವರ ಹಾಗೂ ಚರ್ಚ್ ಸ್ಟ್ರೀಟ್ ಬಳಿ ಬಂದು ಮಾಹಿತಿ ಕಲೆ ಹಾಕಿಕೊಂಡು ಹೋದ ತನಿಖಾಧಿಕಾರಿಗಳು ಮತ್ತೆ ಸುಳಿದಿಲ್ಲ.
ಮಲ್ಲೇಶ್ವರ ಸ್ಫೋಟ ಪ್ರಕರಣ
ಅಸೆಂಬ್ಲಿ ಚುನಾವಣೆಗೂ ಮುನ್ನ ಬಿಜೆಪಿ ಕೇಂದ್ರ ಕಚೇರಿ ಸಮೀಪದಲ್ಲಿ ನಡೆದ ಸ್ಫೋಟದ ತನಿಖೆಯನ್ನು ಬೆಂಗಳೂರು ಪೊಲೀಸರು ಕೈಗೆತ್ತಿಕೊಂಡಿದ್ದರು. ಅದರೆ, ಎನ್ ಐಎ ತಂಡ ಕೂಡಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡು ದೆಹಲಿಗೆ ಹಿಂತಿರುಗಿತ್ತು.
ಘಟನೆಗೆ ಕಾರಣವಾದ ಸ್ಫೋಟಕಗಳ ಮಾಹಿತಿ ಸಂಗ್ರಹಿಸಿ ತನ್ನ ಡೇಟಾ ಬ್ಯಾಂಕಿಗೆ ಸೇರಿಸಿದ್ದು ಬಿಟ್ಟರೆ ಮತ್ತೆ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡು ಬರಲಿಲ್ಲ. ಎನ್ ಐಎ ನೆರವು ಬೇಕಾದರೆ ಕೇಳುವುದಾಗಿ ಕರ್ನಾಟಕ ಸರ್ಕಾರ ಅಂದೇ ಘೊಷಿಸಿತ್ತು. ಅದರೆ, ಎನ್ಐಎ ಮತ್ತೆ ತನಿಖೆಯಲ್ಲಿ ಹೆಚ್ಚಿನ ಉತ್ಸಾಹ ತೋರಿದ್ದು ಕಂಡು ಬರಲಿಲ್ಲ.

ಮೆಹ್ದಿ ಮಸ್ರೂರ್ ಪ್ರಕರಣ
ಐಎಸ್ಐಎಸ್ ಉಗ್ರ ಸಂಘಟನೆ ಪರ @shammiwitness ಎಂಬ ಖಾತೆ ಬಳಸಿ ಟ್ವೀಟ್ ಮಾಡುತ್ತಿದ್ದ ಮೆಹ್ದಿ ಮಸ್ರೂರ್ ಬಿಸ್ವಾಸ್ ಪ್ರಕರಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದು ಎಲ್ಲರಿಗೂ ಗೊತ್ತೇ ಇದೆ.
ಐಎಸ್ಐಎಸ್ ಕೊಂಡಿ ಇರುವ ಈ ಪ್ರಕರಣವನ್ನು ಎನ್ ಐಎ ತಂಡ ಕೈಗೆತ್ತಿಕೊಂಡಾಗ ಇರಾಕಿನಿಂದ ಆಗಷ್ಟೇ ಬಂದಿದ್ದ ಅರೀಫ್ ಮಾಜೀದ್ ಕೇಸ್ ವಿಚಾರಣೆ ನಡೆಸುತ್ತಿತ್ತು. ಮಾಜೀದ್ ಭಾರತವನ್ನು ಬಿಟ್ಟು ಐಎಸ್ ಐಎಸ್ ಸೇರಿದ್ದವನು ರಕ್ತ ಸಿಕ್ತವಾಗಿ ಮನೆಗೆ ಹಿಂತಿರುಗಿದ್ದ.
ಬೆಂಗಳೂರು ಪೊಲೀಸ್ ಹಾಗೂ ಎನ್ಐಎ ನಡುವಿನ ಗೊಂದಲದಿಂದಾಗಿ ಮೆಹ್ದಿ ಟ್ವೀಟ್ ಜಾಲ ಪತ್ತೆ ವಿಳಂಬವಾಯಿತು. ಎನ್ ಐಎ ತನಿಖೆಯಿಂದ ಹಿಂದೆ ಸರಿಯುವಂತೆ ಕಂಡಿತು.
ಸಾಮಾನ್ಯ ಕ್ರೈಂ ತನಿಖೆ ವಿಧಾನವನ್ನು ಅನುಸರಿಸದೆ ಬದಲಿ ಮಾರ್ಗ ಅನುಸರಿಸಿದ್ದು ತನಿಖಾಧಿಕಾರಿಗಳಿಗೆ ಕೈಕೊಟ್ಟಿತು. ಮೆಹ್ದಿ ನಮ್ಮ ವಶಕ್ಕೆ ಬೇಡ ಎಂದು ತನಿಖಾಧಿಕಾರಿಗಳು ಹೇಳಿದ್ದರಿಂದ ಈಗ ಮೆಹ್ದಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
-
HPCL Recruitment 2026: HPCL ನಿಂದ 731 ಹುದ್ದೆಗಳಿಗೆ ಬೃಹತ್ ನೇಮಕಾತಿ, ವಾರ್ಷಿಕ 60 ಲಕ್ಷ ರೂ. ವರೆಗೆ ಸಂಬಳ -
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
ಮಾರ್ಚ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications