ಸಬರ್ಬನ್ ರೈಲು ಯೋಜನೆ: ಮೊದಲ ಹಂತದ 3 ಮಾರ್ಗ ನಿರ್ಮಾಣಕ್ಕೆ ಒಪ್ಪಿಗೆ
ಬೆಂಗಳೂರು, ನವೆಂಬರ್ 13: ಬೆಂಗಳೂರು ಉಪನಗರ ಯೋಜನೆಯ ಮೊದಲ ಹಂತದ ಮೂರು ಮಾರ್ಗ ನಿರ್ಮಾಣಕ್ಕೆ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಬೆಂಗಳೂರು ಉಪನಗರ ರೈಲು ಯೋಜನೆಗೆ 7,438 ಕೋಟಿ ರೂ. ಮೊತ್ತವನ್ನು ದೇಶೀಯ ಹಾಗೂ ವಿದೇಶಿ ಅಭಿವೃದ್ಧಿ ಸಂಸ್ಥೆಗಳಿಂದ ಸಾಲದ ರೂಪದಲ್ಲಿ ಪಡೆಯಲು ಹಾಗೂ ಮೂರು ಹಂತದ ಮೂರು ಮಾರ್ಗ ನಿರ್ಮಾಣಕ್ಕೆಗುರುವಾರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಮೊದಲ ಹಂತದಲ್ಲಿ ಬೆಂಗಳೂರು-ದೇವನಹಳ್ಳಿ, ಬೈಯಪ್ಪನಹಳ್ಳಿ-ಚಿಕ್ಕಬಾಣಾವರ ಹಾಗೂ ಕೆಂಗೇರಿ-ವೈಟ್ಫೀಲ್ಡ್ ಮಾರ್ಗಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.

18,621 ಕೋಟಿ ರೂ ವೆಚ್ಚದಲ್ಲಿ ಯೋಜನೆ ಜಾರಿ
ಸಂಪುಟ ಸಭೆಯ ಬಳಿಕ ಮಾತನಾಡಿದ ಮಾಧುಸ್ವಾಮಿ ಕೇಂದ್ರ ಸರ್ಕಾರವು ಈ ಸಾಲಿನ ಬಜೆಟ್ನಲ್ಲಿ 18,621 ಕೋಟಿ ರೂ.ವೆಚ್ಚದಲ್ಲಿ ಯೋಜನೆ ಜಾರಿಗೊಳಿಸುವುದಾಗಿ ಪ್ರಕಟಿಸಿದೆ. ಬಳಿಕ ಪಿಪಿಪಿ ಮಾದರಿಯಲ್ಲಿ 3 ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಕಂಪನಿಗಳು ಮುಂದೆ ಬಂದಿವೆ.

ಶೇ.60ರಷ್ಟು ಕೇಂದ್ರ-ರಾಜ್ಯ ಸರ್ಕಾರದ ಪಾಲು
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪಾಲಿನ ಒಟ್ಟು ಯೋಜನಾ ವೆಚ್ಚ ಶೇ.60ರಷ್ಟು ಭಾಗವಾಗಿರುವ 7,438 ಕೋಟಿ ರೂ,ಗಳನ್ನು ಸಾಲದ ರೂಪದಲ್ಲಿ ಪಡೆಯಲು ಕೇಂದ್ರ ಸರ್ಕಾರ ತಿಳಿಸಿದೆ. ಹೀಗಾಗಿ ಯೋಜನೆ ಸಲುವಾಗಿ ವಿಶೇಷ ಉದ್ದೇಶವಾಹಕವಾಗಿ ಸೂಚಿಸಿರುವ ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ನಿಗಮ ಮೂಲಕ 7438 ಕೋಟಿ ರೂ. ಸಾಲ ಪಡೆಯಲು ಸಂಪುಟ ಒಪ್ಪಿಗೆ ನೀಡಿದೆ.

ಮಾವಳ್ಳಿಪುರ ಕಸದ ಘಟಕ
ಬಿಬಿಎಂಪಿ ವತಿಯಿಂದ ಮಾವಳ್ಳಿಪುರದಲ್ಲಿ ತ್ಯಾಜ್ಯದಿಂದ ಸಿಎನ್ಜಿ ಅನಿಲ ತಯಾರಿಸುವ 1 ಸಾವಿರ ಟನ್ ತ್ಯಾಜ್ಯ ಸಂಸ್ಕರಣೆ ಸಾಮರ್ಥ್ಯದ ಘಟಕ ಸ್ಥಾಪನೆಗೆ ಸಂಪುಟ ಅನುಮೋದನೆ ನೀಡಿದೆ. ಒಟ್ಟು 13 ಎಕರೆ ಪ್ರದೇಶದಲ್ಲಿ ಸ್ಥಾಪಿಸುವ ಘಟಕವನ್ನು ಸ್ಟರ್ಮ್ ಗ್ರೀನಿಂಗ್ ಎಂಬ ಖಾಸಗಿ ಸಂಸ್ಥೆಯೇ ನಿರ್ಮಿಸಿ, ನಿರ್ವಹಿಸುವ ರೀತಿಯಲ್ಲಿ 25 ವರ್ಷಕ್ಕೆ ಗುತ್ತಿಗೆ ನೀಡಲಾಗಿದೆ.

ಶೇ.50ರಷ್ಟು ಬಡ್ಡಿ ರಿಯಾಯಿತಿ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ನಾಗರಿಕ ಸೌಲಭ್ಯ ನಿವೇಶನ ಮಂಜೂರಾತಿ ಪಡೆದಿರುವವರು ಬಾಕಿ ಉಳಿಸಿಕೊಂಡಿರುವ ಮೊತ್ತವನ್ನು ಶೇ.50ರಷ್ಟು ಬಡ್ಡಿ ರಿಯಾಯಿತಿಯೊಂದಿಗೆ ಪಾವತಿಸಲು ಅವಕಾಶ ಮಾಡಿಕೊಟ್ಟು ಸಂಪುಟ ಒಪ್ಪಿಗೆ ನೀಡಿದೆ.
Recommended Video

ಜ್ಞಾನಭಾರತಿಯಲ್ಲಿ ಕಾಲೇಜು ನಿರ್ಮಾಣಕ್ಕೆ ಅಸ್ತು
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ಹಾಗೂ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯ ಸ್ಥಾಪಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಜ್ಞಾನಭಾರತಿ ಆವರಣದಲ್ಲಿ ಮರ ಕಡಿದು ಕಾಲೇಜುಗಳ ನಿರ್ಮಾಣಕ್ಕೆ ಅಲ್ಲಿನ ನಡಿಗೆದಾರರ ಸಂಘ ಹಾಗೂ ಸಾರ್ವಜನಿಕರು ವಿರೋಧಿಸಿದ್ದರು.
-
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ












Click it and Unblock the Notifications