60 ವಯಸ್ಸಿಗಿಂತ ಮೇಲ್ಪಟ್ಟ ಹಿರಿಯರಿಗೆ ಹೋಂ ಐಸೋಲೇಷನ್
ಬೆಂಗಳೂರು, ಜುಲೈ 5: ರಾಜ್ಯದಲ್ಲಿ ಕೋವಿಡ್ ನಿಯಂತ್ರಣದಲ್ಲಿದ್ದು ಜನರು ಆತಂಕಪಡುವ ಅಗತ್ಯವಿಲ್ಲ, ಹಿರಿಯ ನಾಗರಿಕರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. 60 ವಯಸ್ಸಿಗಿಂತ ಮೇಲ್ಪಟ್ಟ ಹಿರಿಯರನ್ನು ಹೋಂ ಐಸೋಲೇಷನ್ ನಲ್ಲಿರಿಸಲು ಕಾನೂನು ತರಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ಹಿರಿಯ ನಾಗರೀಕರಿಗೆ ಸೋಂಕು ತಗುಲದಂತೆ ನೋಡಿಕೊಳ್ಳುವ ಸವಾಲು ಎಲ್ಲರ ಮೇಲಿದೆ. ಅದಕ್ಕಾಗಿಯೇ ಅವರನ್ನು ಹೊರ ಕಳುಹಿಸದಂತೆ ನೋಡಿಕೊಳ್ಳುವ ಜವಾಬ್ದಾರಿ ಯುವಜನತೆ ಮೇಲಿದೆ. ಬೇರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ 60 ವಯಸ್ಸಿಗಿಂತ ಮೇಲ್ಪಟ್ಟವರು, ಜ್ವರ ಲಕ್ಷಣಗಳಿರುವ ಹಿರಿಯ ನಾಗರೀಕರನ್ನು ಟೆಸ್ಟ್ಗೆ ಒಳಪಡಿಸುವಂತೆ ಕಾಯ೯ಪಡೆಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಹಿರಿಯ ನಾಗರೀಕರನ್ನು ಮನೆಗಳಿಂದ ಹೊರ ಬಿಡಬಾರದು ಎಂಬ ಕಾನೂನು ಜಾರಿಗೂ ಚಿಂತನೆ ನಡೆಸಲಾಗುತ್ತಿದೆ. ತಜ್ಞರು ಮತ್ತು ಪ್ರಮುಖರ ಜತೆ ಈ ಕುರಿತು ಚಚಿ೯ಸಲಾಗುತ್ತಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.

ಪರಿಸ್ಥಿತಿ ನಿಯಂತ್ರಣದಲ್ಲಿದೆ ; ಭಯಬೇಡ
ಕೆಲ ಮಾಧ್ಯಮಗಳ ವರದಿಗಳಿಂದ ಜನರು ಭಯಬೀತರಾಗಿದ್ದಾರೆ. ಇದೊಂದು ಮಾರಣಾಂತಿಕ ರೋಗ ಎಂಬ ಭೀತಿಯಲ್ಲಿ ಅನೇಕರು ಮಾನಸಿಕ ಒತ್ತಡ ಮತ್ತು ಖಿನ್ನತೆಗೆ ಒಳಗಾಗಿದ್ದಾರೆ. ಅಂತಹ ಆತಂಕಕಾರಿ ಪರಿಸ್ತಿತಿ ಇಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಭಾನುವಾರ ತಿಳಿಸಿದರು.
ಜಗತ್ತಿನಾದ್ಯಂತ 1,13,87,499 ಮಂದಿ ಸೋಂಕಿತರಿದ್ದಾರೆ. ಇದರಲ್ಲಿ 64,45,410 ಮಂದಿ ಗುಣಮುಖರಾಗಿದ್ದಾರೆ, ಶೇಕಡವಾರು ಪ್ರಮಾಣ 56.60 ಇದೆ. 5,33,621 ಮಂದಿ ಸಾವಿಗೀಡಾಗಿದ್ದಾರೆ, ಸಾವಿನ ಶೇಕಡಾವಾರು ಪ್ರಮಾಣ 4.68 ರಷ್ಟಿದೆ. ಭಾರತದಲ್ಲಿ 6,74,313ಸೋಂಕಿತರಿದ್ದು, ಶೇಕಡಾ 60.67 ರಷ್ಟು ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಮಾಣ ಶೇಕಡಾ 2.86ರಷ್ಟಿದೆ. ಆದರೆ ರಾಜ್ಯದಲ್ಲಿ ಇದು ರಾಷ್ಟ್ರದ ಪ್ರಮಾಣಕ್ಕಿಂತ ಕಡಿಮೆ. ನಮ್ಮಲ್ಲಿ ಸಾವಿನ ಪ್ರಮಾಣ ಶೇಕಡಾ 1.55 ರಷ್ಟಿದೆ ಎಂದರು.

ಬೆಂಗಳೂರು ನಗರದಲ್ಲಿ ಮರಣ ಪ್ರಮಾಣ ಕಡಿಮೆ
ದೇಶದ ಮಹಾನಗರಗಳಾದ ದಿಲ್ಲಿ, ಮುಂಬಾಯಿ, ಚೆನ್ನೈಗಳಿಗೆ ಹೋಲಿಕೆ ಮಾಡಿದಾಗ ಬೆಂಗಳೂರು ನಗರದಲ್ಲಿ ಮರಣ ಪ್ರಮಾಣ ಶೇಕಡಾ 1.46 ರಷ್ಟು. ಹೀಗಾಗಿ ಯಾರೊಬ್ಬರು ಭಯ ಪಡಬೇಕಿಲ್ಲ ಎಂದು ವಿವರಿಸಿದರು.
ಕಳೆದ ಹತ್ತು ದಿನಗಳಿಂದ ಈಚೆಗೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಅವರಿಗೆ ಚಿಕಿತ್ಸೆ ನೀಡಲು ಮತ್ತು ನಿಗಾ ವಹಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ನಗರದ ವಾಡ್೯ನಿಂದ ಗ್ರಾಮದ ಹಂತದವರೆಗೆ ಕಾಯ೯ಪಡೆಗಳನ್ನು ರಚಿಸಲಾಗಿದೆ ಎಂದರು.

ನಮ್ಮಲ್ಲಿ ಒಟ್ಟು 80 ಪ್ರಯೋಗಾಲಯಗಳಿವೆ
ಕಾಯ೯ಪಡೆ ಉಸ್ತುವಾರಿಗಾಗಿಯೇ ಹಿರಿಯ ಅಧಿಕಾರಿ ಅತೀಕ್ ಅವರನ್ನು ನಿಯೋಜಿಸಲಾಗಿದೆ. ಈ ಸಮಿತಿಗಳು ಹೊಸದಾಗಿ ಹೊರಡಿಸಿರುವ ಮಾಗ೯ಸೂಚಿ ಅನ್ವಯ ರೋಗ ಲಕ್ಷಣ ಇಲ್ಲದ ರೋಗಿಗಳ ಕ್ವಾರಂಟೈನ್ ವ್ಯವಸ್ಥೆ, ಜ್ವರ ಲಕ್ಷಣ ಇರುವವರು, ಇತರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಹಿರಿಯ ನಾಗರೀಕರನ್ನು ಗುರುತಿಸಿ ಟೆಸ್ಟ್ಗೆ ಒಳಪಡಿಸುವ ಜವಾಬ್ದಾರಿ ನಿವ೯ಹಿಸಲಿದ್ದಾರೆ ಎಂದರು.
ನಮ್ಮಲ್ಲಿ ಒಟ್ಟು 80 ಪ್ರಯೋಗಾಲಯಗಳಿವೆ. ಅವುಗಳ ಪೈಕಿ ಕೆಲ ಲ್ಯಾಬ್ಗಳ ಮೇಲೆ ಒತ್ತಡವಿದೆ. ಇದನ್ನು ನಿವಾರಿಸಿ ದಿನದ 24 ತಾಸಿನಲ್ಲಿ ವರದಿ ನೀಡುವ ವ್ಯವಸ್ಥೆ ಜಾರಿಗೊಳಿಸುವ ಸಲುವಾಗಿ ಹಿರಿಯ ಅಧಿಕಾರಿ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲಾಗಿದೆ. ಹಾಗೆಯೇ ಟೆಸ್ಟ್ಗಳ ಸಂಖ್ಯೆಯನ್ನು ದಿನವೊಂದಕ್ಕೆ 30 ಸಾವಿರಕ್ಕೆ ಹೆಚ್ಚಿಸುವ ಗುರಿ ಹಾಕಿಕೊಳ್ಳಲಾಗಿದೆ. ಖಾಸಗಿ ಲ್ಯಾಬ್ಗಳೂ ಕೂಡ ಪೂಣ೯ ಪ್ರಮಾಣದಲ್ಲಿ ಟೆಸ್ಟ್ಗಳನ್ನು ಮಾಡಲೇ ಬೇಕು. ಒಂದು ವೇಳೆ ನಿರಾಕರಿಸಿದರೆ ಕ್ರಮ ಜರುಗಿಸಲಾಗುವುದು. ಅಂತಹ ಖಾಸಗಿ ಮೆಡಿಕಲ್ ಕಾಲೇಜುಗಳ ಮಾನ್ಯತೆ ನವೀಕರಣ ಮಾಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ನಮ್ಮಲ್ಲಿ ಹಾಸಿಗೆ ಕೊರತೆ ಇಲ್ಲ. ಹಂಚಿಕೆಯಲ್ಲಿನ ಗೊಂದಲ
ನಮ್ಮಲ್ಲಿ ಕೋವಿಡ್ ಕೇರ್ , ಸಕಾ೯ರಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ 819 ಹಾಸಿಗೆಗಳ ಪೈಕಿ 152 ಖಾಲಿಯಿವೆ, ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ 1899ಹಾಸಿಗೆ ಪೈಕಿ 779 ಲಭ್ಯವಿವೆ, ಸಕಾ೯ರಿ ಆಸ್ಪತ್ರೆಗಳಲ್ಲಿ 611ರಲ್ಲಿ ಇನ್ನೂ105 ಖಾಲಿಯಿವೆ ಮತ್ತು ಖಾಸಗಿ ಆಸ್ಪತ್ರೆಗಳ ಹಾಸಿಗೆಗಳಿವೆ. ಖಾಸಗಿ ಆಸ್ಪತ್ರೆಗಳು ನಮಗೆ 2734ಹಾಸಿಗೆ ನೀಡಬೇಕಿದ್ದು ಇದುವರೆಗೆ 116 ಮಾತ್ರ ನೀಡಿದ್ದಾರೆ. ಹೀಗಾಗಿ ನಮ್ಮಲ್ಲಿ ಹಾಸಿಗೆ ಕೊರತೆ ಇಲ್ಲ. ಹಂಚಿಕೆಯಲ್ಲಿನ ಗೊಂದಲ ನಿವಾರಣೆ ಆಗಿ ಒಂದೆರಡು ದಿನದಲ್ಲಿ ಎಲ್ಲವೂ ಸರಿಯಾಗಲಿದೆ. ಜನರು ಗೊಂದಲಕ್ಕೆ ಒಳಗಾಗುವ, ಆತಂಕಪಡುವ ಅಗತ್ಯವಿಲ್ಲ ಎಂದರು.

ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ ನಿಜ
ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ ನಿಜ. ಅದನ್ನು ನಿರೀಕ್ಷಿಸಲಾಗಿತ್ತು, ಇನ್ನೂ ಹೆಚ್ಚಾಗಲಿದೆ. ಅದಕ್ಕೆ ತಕ್ಕಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿಯವರು ಇದಕ್ಕಾಗಿ ಹಗಲು ರಾತ್ರಿ ದುಡಿಯುತ್ತಿದ್ದಾರೆ. ನಮ್ಮ ವೈದ್ಯರು ಮತ್ತು ಸಿಬ್ಬಂದಿ ಕೂಡ ಹೈರಾಣಾಗಿದ್ದಾರೆ. ಅವರು ನಾಲ್ಕು ತಿಂಗಳುಗಳಿಂದ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ವಾಸ್ತವ ಸಂಗತಿ ಅಥ೯ ಮಾಡಿಕೊಂಡು ಸಾವ೯ಜನಿಕರು, ಪ್ರತಿ ಪಕ್ಷನಾಯಕರು ಸಕಾ೯ರದ ಜತೆ ಸಹಕರಿಸಬೇಕು ಎಂದು ಮನವಿ ಮಾಡಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications