Industry: ರಾಜ್ಯಕ್ಕೆ ₹19,000 ಕೋಟಿ ಬಂಡವಾಳ, ಶೀಘ್ರವೇ ಕರ್ನಾಟಕ 2ನೇ ಸ್ಥಾನಕ್ಕೆ: ಸಿದ್ದರಾಮಯ್ಯ ಹರ್ಷ

ಬೆಂಗಳೂರು, ನವೆಂಬರ್ 20: ಜಪಾನ್, ಜರ್ಮನಿ, ದಕ್ಷಿಣ ಕೋರಿಯಾ ಸೇರಿ ದಂತೆ ಮೊದಲಾದ ದೇಶಗಳಲ್ಲಿ ಪ್ರವಾಸ ಕೈಗೊಂಡು ಅಧಿಕ ಬಂಡವಾಳ ಸೆಳೆಯುವಲ್ಲಿ ಕರ್ನಾಟಕ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಅವರು ಯಶಸ್ವಿಯಾಗಿದ್ದರು. ಇದೀಗ ಮುಂದಿನ ಕೆಲವೇ ದಿನಗಳಲ್ಲಿ ಸಾವಿರಾರು ಕೋಟಿ ಬಂಡವಾಳ ರಾಜ್ಯಕ್ಕೆ ಹರಿದು ಬರಲಿದೆ. ಈ ಮೂಲಕ ರಾಜ್ಯಕ್ಕೆ ಬಂಡವಾಳ ಹೂಡಿಕೆಯಲ್ಲಿನ ಈಗಿರುವ ಮೂರನೇ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಬರಲಿದೆ ಎಂದು ಸರ್ಕಾರ ತಿಳಿಸಿದೆ.

ಕರ್ನಾಟಕ ಕೈಗಾರಿಕಾ ಕ್ಷೇತ್ರದ ಬಂಡವಾಳ ಹೂಡಿಕೆಯಲ್ಲಿ ಸದ್ಯಕ್ಕೆ ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ. 2025ರ ಜೂನ್ ವೇಳೆಗೆ ದ್ವಿತೀಯ ಸ್ಥಾನಕ್ಕೆ ಏರಲಿದೆ. ಈಗ ಆಗಿರುವ 54,427 ಕೋಟಿ ರೂ. ಹೂಡಿಕೆಯ ಜತೆಗೆ ಮುಂದಿನ 6-7 ತಿಂಗಳಲ್ಲಿ ಇನ್ನೂ 19,059 ಸಾವಿರ ಕೋಟಿ ರೂ. ಬಂಡವಾಳ ಹರಿದು ಬರುವುದು ಖಚಿತವಾಗಿದೆ.

Karnataka to Receive Rs 19 000 Crore Aiming for 2nd in Capital Investment CM Siddaramaiah

ಈ ಮೂಲಕ ರಾಜ್ಯವು 73 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಹೂಡಿಕೆಯನ್ನು ಕಾಣಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಮಾಹಿತಿ ನೀಡಿದರು.

ಬೆಂಗಳೂರು ಜಿಕೆವಿಕೆ ಆವರಣದಲ್ಲಿ ಆಯೋಜನೆಗೊಂಡಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮೆಟಲ್ಸ್ ಸಂಸ್ಥೆಯ 78ನೇ ವಾರ್ಷಿಕ ತಾಂತ್ರಿಕ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

27,000ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ

ರಾಜ್ಯವು ಈ ವರ್ಷ ಈಗಾಗಲೇ 21 ವಿವಿಧ ಉದ್ಯಮಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಇದರಿಂದ 46,375 ಕೋಟಿ ರೂ. ಬಂಡವಾಳ ಹರಿದು ಬರಲಿದೆ. 27 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ. ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಗಳ ಮೂಲಕ 90 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಹೂಡಿಕೆ ಆಗಲಿರುವಂತಹ ಒಟ್ಟು 669 ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ಕೊಡಲಾಗಿದೆ. ಇವುಗಳಿಂದಾಗಿ 1.73 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗಾವಕಾಶಗಳು ದೊರೆಯಲಿವೆ ಎಂದು ಅವರು ವಿವರಿಸಿದ್ದಾರೆ.

Karnataka to Receive Rs 19 000 Crore Aiming for 2nd in Capital Investment CM Siddaramaiah

ಕೈಗಾರಿಕಾ ಅಭಿವೃದ್ಧಿಯ ಜತೆಯಲ್ಲೇ ಪರಿಸರ ಸಂರಕ್ಷಣೆ ಮತ್ತು ಎಲ್ಲರನ್ನೂ ಒಳಗೊಂಡಿರುವ ಬೆಳವಣಿಗೆಗಳ ಜತೆಗೆ ಸಮತೋಲನ ಸಾಧಿಸುವ ಸವಾಲು ನಮ್ಮ ಮುಂದಿದೆ. ಮೆಟಲ್ಸ್ (ಲೋಹಗಳು) ಮತ್ತು ಮೆಟಿರೀಯಲ್ಸ್ ವಲಯಗಳಲ್ಲಿ ಇವೆಲ್ಲವನ್ನೂ ಸಾಧ್ಯವಾಗಿಸುವಂತಹ ಸಂಶೋಧನೆ ಮತ್ತು ನಾವೀನ್ಯತಾ ಉಪಕ್ರಮಗಳಿಗೆ ರಾಜ್ಯ ಆದ್ಯತೆ ನೀಡುತ್ತಿದೆ ಎಂದರು.

ಮೆಟಲ್ಸ್ ಮತ್ತು ಮೆಟೀರಿಯಲ್ಸ್ ಕ್ಷೇತ್ರವೂ ಸೇರಿದಂತೆ ಎಲ್ಲ ವಲಯಗಳಲ್ಲೂ ಕರ್ನಾಟಕವು ಪರಿಸರ ಸ್ನೇಹಿ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಿದೆ. ಲೋಹ ಮತ್ತು ಅದಕ್ಕೆ ಪೂರಕವಾದ ವಲಯಗಳು ಆರ್ಥಿಕ ಅಭಿವೃದ್ಧಿಯ ಆಚೆಗೂ ತಮ್ಮ ಪ್ರಭಾವ ಬೀರುತ್ತವೆ. ಕ್ಷಿಪ್ರವಾಗಿ ಬೆಳವಣಿಗೆ ಕಾಣುತ್ತಿರುವ ಜಗತ್ತಿನಲ್ಲಿ ಉದ್ಭವಿಸುತ್ತಿರುವ ಸಂಕೀರ್ಣ ಸಮಸ್ಯೆಗಳಿಗೆ ಉದ್ಯಮಿಗಳು ಸರಿಯಾದ ಪರಿಹಾರವನ್ನು ಕಂಡುಕೊಳ್ಳಬೇಕಾದ ಅಗತ್ಯವಿದೆ ಎಂದು ತಿಳಿಸಿದರು.

ಕೈಗಾರಿಕೆ ಸಮರ್ಥ ನೀತಿ

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿ, ರಾಜ್ಯ ಸರ್ಕಾರ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮಾತ್ರವಲ್ಲದೆ ಸೆಮಿಕಂಡಕ್ಟರ್, ವಿದ್ಯುನ್ಮಾನ, ಚಿಪ್ ವಿನ್ಯಾಸ, ನವೋದ್ಯಮ, ವಿದ್ಯುಚ್ಚಾಲಿತ ವಾಹನ ಮುಂತಾದ ಕ್ಷೇತ್ರಗಳಿಗೆ ಸಂಬಂಧಿಸಿದಂತೆಯೂ ಸಮರ್ಥ ನೀತಿಗಳನ್ನು ಹೊಂದಿದೆ. ಪ್ರತಿಭಾವಂತ ಮಾನವ ಸಂಪನ್ಮೂಲವನ್ನು ಕೌಶಲ ಪೂರ್ಣವನ್ನಾಗಿಸಿ, ಅವರೆಲ್ಲರನ್ನೂ ಉದ್ಯೋಗಕ್ಕೆ ಸಜ್ಜುಗೊಳಿಸಲಾಗುವುದು ಎಂದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಮಾತನಾಡಿ, ಉದ್ಯಮ ಕ್ಷೇತ್ರದಲ್ಲಿ ಈಗ ಡಿಜಿಟಲ್ ಉತ್ಪಾದನೆ, ಕೃತಕ ಬುದ್ಧಿಮತ್ತೆ ಮತ್ತು ಆಟೋಮೇಶನ್ ನಿರ್ಣಾಯಕವಾಗಿದ್ದು ಹೊಸ ಬಗೆಯ ಶಕ್ತಿ ಸಾಮರ್ಥ್ಯಗಳನ್ನು ತಂದು ಕೊಟ್ಟಿವೆ. ಸುಧಾರಿತ ಅಲಾಯ್ಸ್, ಅತ್ಯಧಿಕ ಸಾಮರ್ಥ್ಯದ ಉಕ್ಕು ಮತ್ತು ಸುಸ್ಥಿರ ಮೆಟೀರಿಯಲ್ ಗಳಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ.

ಸಂಶೋಧನೆಯಲ್ಲಿ ನವೋದ್ಯಮ

ಈ ವಲಯದಲ್ಲಿ ರಾಜ್ಯದ ಹಲವು ನವೋದ್ಯಮಗಳು ಆಟೋಮೋಟೀವ್, ವೈಮಾಂತರಿಕ್ಷ, ಹಗುರ ಅಲಾಯ್ ಗಳಲ್ಲಿ ಸಂಶೋಧನೆಯಲ್ಲಿ ತೊಡಗಿಸಿಕೊಂಡಿವೆ ಎಂದು ಹೇಳಿದರು.

ರಾಜ್ಯವು ಹೆವಿ ಎಂಜಿನಿಯರಿಂಗ್, ವಿದ್ಯುತ್ ಉತ್ಪಾದನೆ ಮತ್ತು ಸ್ಪೆಷಲ್ ಪರ್ಪಸ್ ಮಷಿನರಿ ಕ್ಷೇತ್ರಗಳ ತಾಣವಾಗಿದೆ. ಮಶೀನ್ ಟೂಲ್ ತಯಾರಿಕೆಯಲ್ಲಿ ದೇಶದ ಒಟ್ಟು ಉತ್ಪಾದನೆಯಲ್ಲಿ ಶೇ.52ರಷ್ಟು ಕೊಡುಗೆ ನೀಡುತ್ತಿದೆ. ಈ ಮೂಲಕ ಸ್ಥಳೀಯ ಮತ್ತು ಜಾಗತಿಕ ಮಾರುಕಟ್ಟೆಯ ಬೇಡಿಕೆಗಳನ್ನು ಏಕಕಾಲಕ್ಕೆ ಪೂರೈಸಲಾಗುತ್ತಿದೆ. ಲೋಹ ಮತ್ತು ಮೆಟೀರಿಯಲ್ಸ್ ವಲಯಗಳ ಬೇಡಿಕೆಗಳನ್ನು ಸರಕಾರವು ಸಕಾರಾತ್ಮಕವಾಗಿ ಪರಿಗಣಿಸಿ, ಎಲ್ಲ ಬಗೆಯ ಪ್ರೋತ್ಸಾಹಗಳನ್ನೂ ಕೊಡಲಿದೆ ಎಂದು ಅವರು ಭರವಸೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+